ಬ್ರೇಕಿಂಗ್ ನ್ಯೂಸ್
01-03-23 03:09 pm Mangalore Correspondent ಕರಾವಳಿ
ಮಂಗಳೂರು, ಮಾ.1: ಮಂಗಳೂರು ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕುಲದೀಪ್ ಆರ್ ಜೈನ್ ಅಕ್ರಮ ಚಟುವಟಿಕೆ ವಿರುದ್ಧ ಕಾರ್ಯಾಚರಣೆ ನಡೆಸುತ್ತೇವೆ ಎಂದು ಹೇಳಿದ್ದರು. ಅದರಂತೆ, ಅತಿ ಹೆಚ್ಚು ಮರಳು ಮಾಫಿಯಾ ನಡೆಯುತ್ತಿದ್ದ ಉಳ್ಳಾಲ, ಕಂಕನಾಡಿ, ಪಣಂಬೂರು ಠಾಣೆ ವ್ಯಾಪ್ತಿಯ ನಾಲ್ಕು ಕಡೆಗಳಲ್ಲಿ ಪೊಲೀಸರು ದಾಳಿ ನಡೆಸಿದ್ದು, ಲಕ್ಷಾಂತರ ಮೌಲ್ಯದ ಮರಳನ್ನು ಜಪ್ತಿಗೈದಿದ್ದಾರೆ.
ಫೆ.25ರಂದು ರಾತ್ರಿ ಪಣಂಬೂರು ಠಾಣೆ ವ್ಯಾಪ್ತಿಯ ಎಂಆರ್ ಪಿಎಲ್ ಮೇಲ್ಸೇತುವೆ ಬಳಿ ಹತ್ತು ಟನ್ ಅಕ್ರಮ ಮರಳು ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು ಎರಡು ಲಾರಿಯನ್ನು ವಶಕ್ಕೆ ಪಡೆದು ಮರಳು ಸಹಿತ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಶಕ್ಕೆ ಬಿಟ್ಟುಕೊಟ್ಟಿದ್ದಾರೆ. ಫೆ.26ರಂದು ತಣ್ಣೀರುಬಾವಿ ರಸ್ತೆಯಲ್ಲಿ 12-15 ಟನ್ ಮರಳನ್ನು ಎರಡು ಲಾರಿಯಲ್ಲಿ ಒಯ್ಯುತ್ತಿದ್ದಾಗ ಪೊಲೀಸರು ತಡೆಹಾಕಿದ್ದು, ವಶಕ್ಕೆ ಪಡೆದು ಗಣಿ ಇಲಾಖೆಗೆ ಒಪ್ಪಿಸಲಾಗಿದೆ.



ಫೆ.28ರಂದು ಉಳ್ಳಾಲ ಸೇತುವೆ ಬಳಿಯ ಆಡಂಕುದ್ರು ಎಂಬಲ್ಲಿ ಕಂಕನಾಡಿ ನಗರ ಠಾಣೆ ಪೊಲೀಸರು ದಾಳಿ ನಡೆಸಿ, ಎರಡು ಟಿಪ್ಪರ್ ಲಾರಿಯಲ್ಲಿ ಮರಳು ಒಯ್ಯುತ್ತಿದ್ದಾಗ ವಶಕ್ಕೆ ಪಡೆದಿದ್ದಾರೆ. ಮಾ.1ರಂದು ಬೆಳಗ್ಗೆ 7 ಗಂಟೆಗೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುನ್ನೂರು ಗ್ರಾಮದ ಸೋಮನಾಥ ಉಳಿಯ ದೇವಸ್ಥಾನದ ಬಳಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವುದನ್ನು ತಿಳಿದು ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ, ಸ್ಥಳದಲ್ಲಿ ಹತ್ತು ಲೋಡ್ ಮರಳು ಮತ್ತು ಒಂದು ಹಿಟಾಚಿ ಯಂತ್ರ ವಶಕ್ಕೆ ಪಡೆದಿದ್ದು ಎಲ್ಲವನ್ನೂ ಗಣಿ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ.
Mangalore police commissioner Kuldeep kumar who has taken charge is now in full action against illegal activities in the city, raids illegal sand mining centres, 6 trucks have been seized, 12-15 tons of sand also has been seized.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am