ಬ್ರೇಕಿಂಗ್ ನ್ಯೂಸ್
02-03-23 07:05 pm Mangalore Correspondent ಕರಾವಳಿ
ಉಳ್ಳಾಲ, ಮಾ.2 : ಶಾಸಕ ಖಾದರ್ ಅವರು ತುದಿ ಬೆರಳಲ್ಲಿ ಆಡಿಸುತ್ತಿರುವ ಉಳ್ಳಾಲ ನಗರಸಭೆಯ ಗೋಡೆಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಉಳ್ಳಾಲವನ್ನ ನಂ.1 ಮಾಡಲು ರಿಯಾಝ್ ಫರಂಗಿಪೇಟೆಯನ್ನ ಅಖಾಡಕ್ಕೆ ಇಳಿಸಿದ್ದೇವೆ ಎಂದು ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಸವಾಲೆಸೆದಿದ್ದಾರೆ.
ಉಳ್ಳಾಲ ನಗರಸಭೆಯ ಭ್ರಷ್ಟಾಚಾರದ ವಿರುದ್ಧ ಮತ್ತು ಮೂಲಭೂತ ಸೌಕರ್ಯ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಳ್ಳಾಲ ನಗರ ಸಮಿತಿ ವತಿಯಿಂದ ಉಳ್ಳಾಲ ನಗರಸಭೆ ಮುಂಭಾಗದಲ್ಲಿ ಗುರುವಾರ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಆಡಳಿತವುಳ್ಳ ಉಳ್ಳಾಲ ನಗರಸಭೆ ಜನರಿಗೆ ಬೇಕಾದ ಮೂಲಭೂತ ಸವಲತ್ತುಗಳನ್ನ ಒದಗಿಸಿಲ್ಲ. ಮಾತ್ರವಲ್ಲದೆ ಜನರ ಸಮಸ್ಯೆಗಳಿಗೆ ಸ್ಪಂದಿಸಲೂ ಸಂಪೂರ್ಣ ವಿಫಲವಾಗಿದೆ. ಬಹುಮಹಡಿ ಕಟ್ಟಡಗಳು, ಬಾಡಿಗೆ ಅಂಗಡಿಗಳ ಆದಾಯದಲ್ಲಿ ನಗರಸಭೆ ಭ್ರಷ್ಟಾಚಾರ ನಡೆಸುತ್ತಲೇ ಬಂದಿದೆ. ಆದರೆ ಬಡಜನರ ಬೇಡಿಕೆಯ ಒಂದು ದಾರಿ ದೀಪ ಕಲ್ಪಿಸಲು ನಗರಸಭೆಗೆ ಸಾಧ್ಯವಾಗಿಲ್ಲ. ಎಸ್ ಡಿಪಿಐ ಮನಸು ಮಾಡಿದರೆ ನಿಮ್ಮನ್ನ ಅಧಿಕಾರದಿಂದ ಕಿತ್ತೆಸಯಲು ಸಾಧ್ಯವಿದೆ. ಉಳ್ಳಾಲ ವಿಧಾನಸಭಾ ಕ್ಷೇತ್ರದ ಸ್ಥಳೀಯಾಡಳಿತಗಳಿಗೆ ನಡೆದ ಚುನಾವಣೆಗಳ ಫಲಿತಾಂಶಗಳಲ್ಲಿ ನಮ್ಮ ಪಕ್ಷ ಗಳಿಸಿದ ಸ್ಥಾನಗಳನ್ನ ಗಮನಿಸಿ. ಕ್ಷೇತ್ರದ ಶಾಸಕ ಖಾದರ್ ಅವರು ಎಸ್ ಡಿಪಿಐ ಮತ್ತು ಜೆಡಿಎಸ್ ನಗರಸಭಾ ಸದಸ್ಯರನ್ನ ಕಡೆಗಣಿಸಿ ಕೇವಲ ತನ್ನ ಪಕ್ಷದ ಸದಸ್ಯರಿಗೆ ಅನುದಾನ ನೀಡಿ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆ. ಹೀಗೆ ಮುಂದುವರಿದರೆ ಶಾಸಕರ ಮನೆ ಮುಂದೆ ಎಸ್ ಡಿಪಿಐ ಉಗ್ರ ಪ್ರತಿಭಟನೆ ನಡೆಸೋದಾಗಿ ಎಚ್ಚರಿಕೆ ನೀಡಿದರು. ಅಲ್ಲದೆ ಈ ಬಾರಿ ಎಸ್ ಡಿಪಿಐ ಪಕ್ಷವು ರಿಯಾಝ್ ಫರಂಗಿಪೇಟೆ ಅವರನ್ನ ಉಳ್ಳಾಲದಲ್ಲಿ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಯನ್ನಾಗಿ ಅಖಾಡಕ್ಕಿಳಿಸಿದ್ದು ಅವರು ಉಳ್ಳಾಲವನ್ನ ನಂ.1 ಮಾಡೇ ಮಾಡುತ್ತಾರೆ ಎಂದರು.
ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ಅಧ್ಯಕ್ಷ ಎ.ಆರ್ ಅಬ್ಬಾಸ್, ಉಪಾಧ್ಯಕ್ಷ ಇಮ್ತಿಯಾಝ್ ಕೋಟೆಪುರ, ಕ್ಷೇತ್ರ ಸಮಿತಿ ಸದಸ್ಯ ಶೋಯೆಬ್ ಉಳ್ಳಾಲ್, ಮುಸ್ಲಿಂ ಒಕ್ಕೂಟ ಅಧ್ಯಕ್ಷ ಇಸ್ಮಾಯಿಲ್, ನಗರಸಭೆ ಸದಸ್ಯರಾದ ಝರೀನಾ ಬಾನು, ಖಮರುನ್ನೀಸಾ ನಿಝಾಮ್, ರಮೀಝ್, ಅಝ್ಗರ್, ಶೈನಾಝ್ ಅಕ್ರಮ್, ರುಖ್ಯ ಇಕ್ಬಾಲ್ ಮೊದಲಾದವರು ಉಪಸ್ಥಿತರಿದ್ದರು.
Mangalore SDPI members protest warns Mla UT Khader as Riyaz farangipete to contest from ullal.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am