ಬ್ರೇಕಿಂಗ್ ನ್ಯೂಸ್
22-10-20 09:35 pm Mangalore reporter ಕರಾವಳಿ
ಮಂಗಳೂರು, ಅಕ್ಟೋಬರ್ 22 : ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ವಿವಿಧ ಜಾತಿಗಳ ಅಭಿವೃದ್ಧಿ ನಿಗಮದಡಿ ಸಾಲ ಸೌಲಭ್ಯಕ್ಕೆ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.
ಉಪ್ಪಾರ ಜನಾಂಗ 2 (1.5 ಲಕ್ಷ ), ವಿಶ್ವಕರ್ಮ 12 (6 ಲಕ್ಷ), ಸವಿತಾ ಸಮಾಜ 12 (6 ಲಕ್ಷ ), ಮಡಿವಾಳ ಸಮಾಜ 143, ಅಂಬಿಗರ 117 (58.5 ಲಕ್ಷ) ಮಂದಿಯನ್ನು ಫಲಾನುಭವಿಗಳಾಗಿ ಆಯ್ಕೆ ಮಾಡಲಾಯಿತು. ವಿಶ್ವಕರ್ಮ ಸಮುದಾಯದಿಂದ 341 ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿತ್ತು. ಆದರೆ ವಿಶ್ವಕರ್ಮ ಅಭಿವೃದ್ಧಿ ನಿಗಮದಿಂದ ಜಿಲ್ಲೆಗೆ 6 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದ್ದರಿಂದ 12 ಮಂದಿ ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಲಾಯ್ತು. ಮಡಿವಾಳ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ 72 ಲಕ್ಷ ರೂ. ಅನುದಾನ ಬಂದಿದ್ದು, ಅರ್ಜಿ ಸಲ್ಲಿಕೆ ಮಾಡಿದ್ದ 143 ಮಂದಿಗೂ ಸಾಲ ಯೋಜನೆಗ ಪರಿಗಣಿಸಲಾಯ್ತು.
ವಿಶ್ವಕರ್ಮ ಸಮುದಾಯದಿಂದ ಅತಿ ಹೆಚ್ಚು 341 ಅರ್ಜಿಗಳು ಬಂದಿದ್ದವು. ಪ್ರತಿ ವರ್ಷ ಈ ಸಮುದಾಯಕ್ಕೆ ಅನುದಾನ ಕಡಿಮೆ ಬರುತ್ತಿರುವುದರಿಂದ ಫಲಾನುಭವಿಗಳ ಆಯ್ಕೆ ಕಗ್ಗಂಟಾಗಿದೆ. ಹೀಗಾಗಿ ಬಂಟ್ವಾಳ, ಬೆಳ್ತಂಗಡಿ ಹೀಗೆ ದೂರದ ಪ್ರದೇಶಗಳಿಂದ ಬಂದಿದ್ದ ಜನರು ತಮಗೆ ಸೌಲಭ್ಯ ಸಿಗದಿರುವ ವಿಚಾರದಲ್ಲಿ ಅಧಿಕಾರಿಗಳನ್ನು ಶಪಿಸುತ್ತಾ ಮರಳಿದರು.
ಈ ಬಗ್ಗೆ ಅಧಿಕಾರಿಗಳ ಬಳಿ ಪ್ರಶ್ನೆ ಮಾಡಿದಾಗ, ಅನುದಾನ ಬಂದ ಹಣದಲ್ಲಿ ನಾವು ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡುತ್ತೇವೆ. ಹಣ ಕಡಿಮೆ ಬಂದಲ್ಲಿ ನಾವು ಏನೂ ಮಾಡಲು ಬರುವುದಿಲ್ಲ. ಪ್ರತಿ ವರ್ಷದ ಅರ್ಜಿಗಳನ್ನು ಮುಂದಿನ ಬಾರಿಗೆ ಸೇರ್ಪಡೆ ಮಾಡುತ್ತೇವೆ. ಲಾಟರಿ ಎತ್ತುವ ದಿನ ಎಲ್ಲರಿಗೂ ಸಂದೇಶ ಕಳಿಸಿ, ಬರಲು ಹೇಳುತ್ತೇವೆ ಎಂದು ತಿಳಿಸಿದ್ದಾರೆ.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm