ಬ್ರೇಕಿಂಗ್ ನ್ಯೂಸ್
10-03-23 06:50 pm Mangalore Correspondent ಕರಾವಳಿ
ಉಳ್ಳಾಲ, ಮಾ.10 : ಹೆದ್ದಾರಿ ಬದಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದು ಮರ, ಗಿಡಗಂಟಿಗಳು ಹೊತ್ತಿ ಉರಿದಿದ್ದು ವಸತಿ ಪ್ರದೇಶಕ್ಕೆ ಬೆಂಕಿ ವ್ಯಾಪಿಸುತ್ತಿರುವುದನ್ನ ಕಂಡ ಹೆದ್ದಾರಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸ್ ಟ್ಯಾಂಕರ್ ನೀರು ತರಿಸಿ ಬೆಂಕಿಯನ್ನ ನಂದಿಸಿದ ಘಟನೆ ಕೋಟೆಕಾರು, ಬೀರಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೋಟೆಕಾರಿನ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಘಟನೆ ನಡೆದಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸ್ಥಳಕ್ಕೆ ಬಂದ ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್ ಫಾರ್ಮರ್ ನಿಂದ ಅವಘಡ ನಡೆದಿಲ್ಲ , ಯಾರೋ ಸಿಗರೇಟ್ ಎಸೆದೋ ಅಥವಾ ಬಿಸಿಲಿನ ಝಲಕ್ಕೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.




ಬೆಂಕಿಯ ಕೆನ್ನಾಲಿಗೆ ವಿಶಾಲ ಪ್ರದೇಶದ ಮರ, ಗಿಡ ಗಂಟೆಗಳನ್ನ ಸುಟ್ಟು ಸಮೀಪದಲ್ಲಿದ್ದ ಒಂಟಿ ಮನೆ ವರೆಗೂ ವ್ಯಾಪಿಸತೊಡಗಿತ್ತು. ಈ ವೇಳೆ ಹೆದ್ದಾರಿ ಗಸ್ತು ವಾಹನದಲ್ಲಿದ್ದ ಸಂಚಾರಿ ಠಾಣಾ ಎಎಸ್ಸೈ ಸಂತೋಷ್ ಅವರು ಅಗ್ನಿಶಾಮಕ ದಳಕ್ಕೆ ಎರಡು, ಮೂರು ಬಾರಿ ಫೋನಾಯಿಸಿದರೂ ಸಕರಾತ್ಮಕ ಸ್ಪಂದನೆ ದೊರಕಿಲ್ಲ. ಕೂಡಲೇ ಸ್ಥಳೀಯರಾದ ಗಣೇಶ್ ಭಟ್ ಎಂಬವರು ದೊಡ್ಡ ನೀರಿನ ಟ್ಯಾಂಕರನ್ನು ಒದಗಿಸಿದ್ದಾರೆ. ಟ್ರಾಫಿಕ್ ಕಾನ್ಸ್ಟೇಬಲ್ ನಾಗಪ್ಪ ಗಡದ ಅವರು ಭಾರದ ಫೈಪನ್ನ ಎತ್ತಿ ನೀರು ಹಾಯಿಸಿ ಬೆಂಕಿಯನ್ನ ನಂದಿಸಿದ್ದಾರೆ. ನಾಗಪ್ಪ ಅವರಿಗೆ ಮೆಸ್ಕಾಂ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕಾರ ನೀಡಿದ್ದಾರೆ. ಸಕಾಲಕ್ಕೆ ಅಗ್ನಿಶಾಮಕ ತುರ್ತು ಸೇವೆ ಲಭಿಸದಿದ್ದರೂ ಟ್ರಾಫಿಕ್ ಪೊಲೀಸರೇ ಬೆಂಕಿ ನಂದಿಸಿದ್ದನ್ನ ಸ್ಥಳೀಯ ಕೌನ್ಸಿಲರ್ ರಾಘವ ಗಟ್ಟಿ ಸೇರಿದಂತೆ ನೆರೆದಿದ್ದ ಜನರು ಪ್ರಶಂಸಿಸಿದ್ದಾರೆ.
Mangalore Sudden fire from the transcender suspected, plants tree on fire at Kotekar.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am