ಬ್ರೇಕಿಂಗ್ ನ್ಯೂಸ್
10-03-23 10:54 pm Mangalore Correspondent ಕರಾವಳಿ
ಮಂಗಳೂರು, ಮಾ.10 : ಕೂಳೂರು ನದಿ ಸೇತುವೆ ಕಾಮಗಾರಿ ಪ್ರಾರಂಭಗೊಂಡು ಮೂರು ವರ್ಷ ಕಳೆದಿದೆ. ಹಳೆ ಸೇತುವೆ ಸಮರ್ಥವಾಗಿಲ್ಲ ಎಂದು ಹೆದ್ದಾರಿ ಪ್ರಾಧಿಕಾರದ ತಜ್ಞರು ವರದಿ ನೀಡಿ ನಾಲ್ಕು ವರ್ಷ ದಾಟಿದೆ. ಮಳೆಗಾಲ ಸಮೀಪಿಸುತ್ತಿದ್ದು ಸೇತುವೆ ಕಾಮಗಾರಿಗೆ ನದಿಗೆ ಹಾಕಿರುವ ಭಾರೀ ಮಣ್ಣಿನಿಂದಾಗಿ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಇದೆ. ಜೊತೆಗೆ, ಹಳೆ ಸೇತುವೆ ಕುಸಿಯುವ ಭೀತಿಯೂ ಇದೆ. ಹೀಗಾಗಿ ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿ ಸಿಪಿಐಎಂ ಪಂಜಿಮೊಗರು ವಲಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಕೂಳೂರು ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ಇದು ಮತ್ತೊಂದು ಪಂಪ್ವೆಲ್ ಆಗದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ ಕೂಳೂರು ಸೇತುವೆ ಕಾಮಗಾರಿ ಬಗ್ಗೆ ಸ್ಥಳೀಯ ಶಾಸಕ ಭರತ್ ಶೆಟ್ಟಿಗಾಗಲಿ, ಸಂಸದರಿಗಾಗಲೀ ಆಸಕ್ತಿ ಇದ್ದಂತೆ ಕಾಣುತ್ತಿಲ್ಲ. ಈ ಕಾಮಗಾರಿಯ ಕಮಿಷನ್ ವಿಚಾರವಾಗಿ ಕಾಮಗಾರಿ ನಿಂತಿರಬಹುದೇ ಎಂದು ಸಾರ್ವಜನಿಕ ವಲಯದಲ್ಲಿ ಸುದ್ದಿ ಇದೆ. ಕೋಟಿ ಕೋಟಿ ಕಾಮಗಾರಿ ಬಗ್ಗೆ ಬ್ಯಾನರ್ ಹಾಕುವ ಶಾಸಕರ ಕಾಮಗಾರಿ ಎಲ್ಲಿ ನಡೆಯುತ್ತಿದೆ ಎಂದು ತಿಳಿಯುತ್ತಿಲ್ಲ. ಮಾತೆತ್ತಿದ್ದರೆ ಗುರುಪುರ ಸೇತುವೆ ಬಗ್ಗೆ ಮಾತನಾಡುವ ಇವರಿಗೆ ಅಪಾಯದ ಅಂಚಿನಲ್ಲಿರುವ ಕೂಳೂರು ಸೇತುವೆ ಬಗ್ಗೆ ಆಸಕ್ತಿ ಇಲ್ಲದಿರುವುದು ವಿಪರ್ಯಾಸ ಎಂದರು.

ಉಡುಪಿ, ಮಂಗಳೂರು ಸಂಪರ್ಕದ ಅತೀ ವಾಹನ ದಟ್ಟಣೆ ಇರುವ ಕೂಳೂರು ಸೇತುವೆ ಕುಸಿದರೆ ಉಂಟಾಗುವ ಅಪಾಯದ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ಬಿ.ಕೆ ಇಮ್ತಿಯಾಝ್ ಮಾತನಾಡಿ ಸ್ಥಳೀಯ ಶಾಸಕರಿಗೆ ಕಾಮಗಾರಿ ನಡೆಸುವ ಆಸಕ್ತಿ ಇಲ್ಲ. ಸುರತ್ಕಲ್ ಟೋಲ್ ಬಂದ್ ಮಾಡಿ ನೂರು ದಿನಗಳು ಕಳೆದರೂ ಅಲ್ಲಿ ಟೋಲ್ ಗೂಡುಗಳು ಅಸ್ಥಿಪಂಜರದ ರೀತಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಿಪಿಐಎಂ ಪಂಜಿಮೊಗರು ಘಟಕದ ಮುಖಂಡರಾದ ಅನಿಲ್, ಪ್ರಮೀಳಾ, ಸೌಮ್ಯ, ಬಾವು, ಶೆರೀಫ್, ಬಶೀರ್, ಸಂತೋಷ್, ಕಸ್ತೂರಿ, ಫಾತಿಮಾ ಖಲೀಲ್ , ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ಮಕ್ಸೂದ್ ಕಾನ, ದಲಿತ ಸಂಘಟನೆಯ ಕೃಷ್ಣ ತಣ್ಣೀರುಬಾವಿ ಸಾಮಾಜಿಕ ಮುಂದಾಳುಗಳಾದ ಕನಕದಾಸ್, ಹನೀಫ್ ಕೂಳೂರು ಮತ್ತಿತರರು ಭಾಗವಹಿಸಿದ್ದರು
Mangalore Dyfi protest over delay by NHAI to complete Kuluru bridge.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am