ಗಂಜಿಮಠ ಗ್ರಾಪಂ ಸದಸ್ಯ, ಬಿಜೆಪಿ ಕಾರ್ಯಕರ್ತ ನೇಣು ಬಿಗಿದು ಸಾವಿಗೆ ಶರಣು

16-03-23 11:42 am       Mangalore Correspondent   ಕರಾವಳಿ

ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಕಾರ್ಯಕರ್ತರಾಗಿದ್ದ ಸಂದೀಪ್ ಶೆಟ್ಟಿ ಮೊಗರುಗುತ್ತು (35) ಬುಧವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಮಂಗಳೂರು, ಮಾ.16: ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಕಾರ್ಯಕರ್ತರಾಗಿದ್ದ ಸಂದೀಪ್ ಶೆಟ್ಟಿ ಮೊಗರುಗುತ್ತು (35) ಬುಧವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಬುಧವಾರ ರಾತ್ರಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೀರುಮಾರ್ಗದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂಧು ಎಂಬ ಹೆಸರಿನ ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದು ಸಾವಿಗೆ ಶರಣಾಗಿದ್ದಾರೆ. ಬುಧವಾರ ಮಧ್ಯಾಹ್ನದಿಂದ ಸಂದೀಪ್ ಕಾಣೆಯಾಗಿದ್ದು, ಹುಡುಕಾಟ ನಡೆಸಿದಾಗ ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. 

ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗರು 9 ಮತ್ತು 10ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ನೀರುಮಾರ್ಗದಲ್ಲಿ ಸೇವಾ ಸಿಂಧು ಕೇಂದ್ರ ನಡೆಸುತ್ತಿದ್ದರು. ಅವಿವಾಹಿತರಾಗಿದ್ದು ಇನ್ಶೂರೆನ್ಸ್ ಏಜೆಂಟರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಕಚೇರಿಯಲ್ಲಿ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ಆರ್ಥಿಕ ಅಡಚಣೆ ಇನ್ನಿತರ ವಿಚಾರಗಳ ಉಲ್ಲೇಖ ಇದೆಯಂತೆ. ಕಂಕನಾಡಿ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೊಬೈಲಿನಲ್ಲಿ ಗೆಳೆಯರೇ ಕ್ಷಮಿಸಿ ಎಂದು ಸ್ಟೇಟಸ್ ಹಾಕ್ಕೊಂಡಿದ್ದರು. ಸಾಲ ಮಾಡಿಕೊಂಡು ಅದರಿಂದಾಗಿ ಚಿಂತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ.

Ganjimutt Panchyath member commits suicide at his office in Neermarga in Mangalore. The deceased has been identified as Sandeep Shetty (35). Financial crises reason said to be the reason for suicide.