ಬ್ರೇಕಿಂಗ್ ನ್ಯೂಸ್
20-03-23 11:14 pm Mangalore Correspondent ಕರಾವಳಿ
ಮಂಗಳೂರು, ಮಾ.21 : ರಾಜ್ಯ ಬಿಜೆಪಿ ಸರಕಾರದ ಆಯಸ್ಸು ಇನ್ನು ಇರೋದು 35 ದಿನಗಳು ಮಾತ್ರ, ಉಳಿದಿರುವ ದಿನಗಳಲ್ಲಾದರೂ ಜನರ ಪರವಾಗಿ ಕೆಲಸ ಮಾಡಿ ತನ್ನ ಮೇಲಿನ ಕಪ್ಪು ಚುಕ್ಕೆಯನ್ನು ಕ್ಲೀನ್ ಮಾಡುವ ಬದಲು ಸರಕಾರಿ ಆಡಳಿತ ಯಂತ್ರದ ಅಂಗಡಿ ಬಂದ್ ಮಾಡಿ ಚುನಾವಣೆ ಪ್ರಚಾರದಲ್ಲಿ ನಿರತವಾಗಿದೆ ಎಂದು ಶಾಸಕ ಯು.ಟಿ. ಖಾದರ್ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯು.ಟಿ.ಖಾದರ್, ಪೌರ ಕಾರ್ಮಿಕರ ಸಮಸ್ಯೆ, ನೀರಿನ ಸಮಸ್ಯೆಯಿಂದ ಜನರು ಹತಾಶರಾಗಿದ್ದಾರೆ, ಆಡಳಿತ ವಹಿಸ್ಕೊಂಡವರು ಮಾತ್ರ ನಿರ್ಲಕ್ಷ್ಯ ಧೋರಣೆಯನ್ನು ಮುಂದಿವರಿಸಿದ್ದಾರೆ, ಒಂದು ವಾರದಿಂದ ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. ಕಾರ್ಮಿಕರ ಪ್ರತಿಭಟನೆಯಿಂದಾಗಿ ನಗರದಲ್ಲಿ ಸ್ವಚ್ಛತೆ ಜತೆಗೆ ಆರೋಗ್ಯದ ಸಮಸ್ಯೆ ಆತಂಕ ಎದುರಾಗಿದೆ. ಎಲ್ಲ ವಿಭಾಗದ ನೌಕರರು ಈಗ ಪ್ರತಿಭಟನೆ ನಡೆಸುವ ಹಂತಕ್ಕೆ ಬಂದಿದ್ದಾರೆ.
ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದ್ದು, ಮಂಗಳೂರು ವಿವಿಯ ಪದವಿ ತರಗತಿಗಳ ಫಲಿತಾಂಶ ಬಾರದೆ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. ಆರ್ಟಿಓ ಕಚೇರಿಗೆ ಹೋದರೆ ಅಲ್ಲಿ ಆರ್ಸಿ ಪ್ರಿಂಟ್ ಮಾಡುವ ಕಾರ್ಡ್ ಗೂ ಗತಿಯಿಲ್ಲ. ಬಿಜೆಪಿ ಸರಕಾರ ನಡೆಸುವ ಮಂದಿ ನಲ್ವತ್ತು ಪರ್ಸೆಂಟಿನ ವಿಜಯ ಸಂಕಲ್ಪ ಯಾತ್ರೆಯಲ್ಲಿ ನಿರತರಾಗಿದ್ದಾರೆ ಎಂದು ಯು.ಟಿ.ಖಾದರ್ ಹೇಳಿದರು.
ಉರಿಗೌಡ ನಂಜೇಗೌಡರ ಕುರಿತ ಪ್ರಶ್ನೆಗೆ, ಅವರು ಯಾರು ಅಂತಲೇ ಗೊತ್ತಿಲ್ಲ ಎಂದರು. ಟಿಪ್ಪು ಕುರಿತ ಪಠ್ಯದಲ್ಲಿ ಆತನನ್ನು ಬ್ರಿಟಿಷರು ಕೊಂದಿದ್ದು ಅಂತ ಇದೆ. ಅದು ಬಿಟ್ಟರೆ ಬೇರೆ ಯಾವುದೇ ಇತಿಹಾಸ ಓದಿಲ್ಲ ಎಂದರು. ಕಳ್ಳಿಗೆ ತಾರನಾಥ ಶೆಟ್ಟಿ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Bjp will be alive for another 35 days only mocks UT Khader in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am