ಬ್ರೇಕಿಂಗ್ ನ್ಯೂಸ್
21-03-23 11:09 pm Mangalore Correspondent ಕರಾವಳಿ
ಮಂಗಳೂರು, ಮಾ.21 : ದೇಶದಲ್ಲೇ ಮೊದಲ ಪ್ರಯೋಗವಾಗಿ ರಾಜ್ಯದಲ್ಲಿ 2023ನೇ ಸಾಲಿನ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆಯನ್ನು ಚುನಾವಣೆ ಆಯೋಗ ಘೋಷಿಸಿದೆ.
ಇದರಂತೆ ದ.ಕ. ಜಿಲ್ಲೆಯಲ್ಲಿ 60,862 ಮಂದಿ ಮತದಾರರು ಈ ಅರ್ಹತೆಯನ್ನು ಪಡೆಯಲಿದ್ದಾರೆ. ದ.ಕ. ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ 38,287 ಮತದಾರರಿದ್ದಾರೆ. 90 ವರ್ಷ ಮೇಲ್ಪಟ್ಟವರು 8,100 ಹಾಗೂ 100 ವರ್ಷ ಮೇಲ್ಪಟ್ಟವರು 532 ಮತದಾರರಿದ್ದಾರೆ. ಇದರೊಂದಿಗೆ 13,943 ಅಂಗವಿಕಲರು ಮತದಾನದ ಹಕ್ಕು ಹೊಂದಿದ್ದಾರೆ. ಇವರಲ್ಲಿ ಮತಗಟ್ಟೆಗಳಿಗೆ ಬಂದು ಮತದಾನ ಮಾಡಲು ಸಾಧ್ಯವಾಗದವರಿಗೆ ಮನೆಯಿಂದಲೇ ಮತ ಚಲಾಯಿಸುವ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗುತ್ತದೆ.
ಚುನಾವಣೆ ಘೋಷಣೆ ಆದ ಬಳಿಕ ಮನೆಯಿಂದಲೇ ಮತದಾನ ಬಯಸುವವರಿಗೆ ಫಾರಂ (ನಮೂನೆ) ಭರ್ತಿಗೆ ನೀಡಲಾಗುತ್ತದೆ. ಅದರಂತೆ ಮತಗಟ್ಟೆಗೆ ಬರಲು ಸಾಧ್ಯವಾಗದವರಿಗೆ ಪರಿಶೀಲನೆ ನಡೆಸಿ ಮನೆಯಿಂದಲೇ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಮತಗಟ್ಟೆಗೆ ಬಂದು ಮತದಾನ ಮಾಡುವ ಹಿರಿಯ ನಾಗರಿಕರು, ಅಂಗವಿಕಲರಿಗೆ ವಾಹನ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.
ಕಳೆದ ಚುನಾವಣೆಯ ಮತದಾನ ಗಮನಿಸಿದರೆ, ದ.ಕ. ಜಿಲ್ಲೆಯ ನಗರ ಭಾಗದಲ್ಲಿ ಮತದಾನ ಕಡಿಮೆ. ಜಿಲ್ಲೆಯಲ್ಲಿ ಒಟ್ಟು ಶೇ. 83ರಷ್ಟು ಮತದಾನವಾಗಿದೆ. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮತದಾನ ಕೇವಲ ಶೇ. 67. ರಾಜ್ಯದ ಎರಡನೇ ಪ್ರಮುಖ ನಗರವಾಗಿರುವ ಮಂಗಳೂರು ದಕ್ಷಿಣದಲ್ಲಿ ಮತದಾನದ ಬಗ್ಗೆ ನಿರಾಸಕ್ತಿಯನ್ನು ಗಮನಿಸಿರುವ ಜಿಲ್ಲಾಡಳಿತ ಈ ಬಾರಿ ಇಂತಹ ಮತದಾರರನ್ನು ಮತಗಟ್ಟೆಗೆ ಆಕರ್ಷಿಸಲು ಮುಂದಾಗಿದೆ. ದ.ಕ. ಜಿ.ಪಂ. ಸಿಇಒ ಡಾ| ಕುಮಾರ್ ಅವರು ಈ ಬಾರಿ ಮತ್ತೆ ವಿನೂತನವಾಗಿ ಸ್ವೀಪ್ ಅನುಷ್ಠಾನಕ್ಕೆ ಮುಂದಾಗಿದ್ದಾರೆ.
ಅಪಾರ್ಟ್ಮೆಂಟ್, ಫ್ಲ್ಯಾಟ್ಗಳನ್ನು ಪ್ರಮುಖ ಗುರಿಯಾಗಿಸಿ ಅಲ್ಲಿನ ಅಧ್ಯಕ್ಷರನ್ನೇ ಒಳಗೊಂಡು ಸಮಿತಿ ರಚಿಸಿ, ಯುವಕರಲ್ಲಿ ಮತದಾನದ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವೀಪ್ ಕಾರ್ಯಕ್ರಮ ನಡೆಸುವುದಾಗಿ ಡಾ| ಕುಮಾರ್ ತಿಳಿಸಿದ್ದಾರೆ.
Chief Election Commissioner of Indid has announced that all senior citizens above 80 and people with disability will get a vote-from-home option in the Karnataka Assembly elections.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am