ಬ್ರೇಕಿಂಗ್ ನ್ಯೂಸ್
22-03-23 02:41 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ರಾ.ಹೆ. 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಫೈರ್ ಸೇಪ್ಟಿ ಇಟ್ಕೊಳ್ಳದೆ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್ ವಾಣಿಜ್ಯ ಕಟ್ಟಡದಲ್ಲಿರುವ ಮನ್ಹಾಸ್ ಹೊಟೇಲಿನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಹತ್ತಿಕೊಂಡಿತ್ತು. ಸ್ಥಳೀಯರು, ಕಟ್ಟಡದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರೂ ಬೆಂಕಿ ವ್ಯಾಪಿಸತೊಡಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಕಟ್ಟಡದ ಐದನೇ ಮಹಡಿಯೇರಿ ಚಿಮಣಿಯಲ್ಲಿ ಹತ್ತಿಕೊಂಡ ಬೆಂಕಿಯನ್ನ ನಂದಿಸಿದ್ದಾರೆ.




ಅಗ್ನಿ ಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಸಂಭವನೀಯ ದೊಡ್ಡ ಬೆಂಕಿ ಅವಘಡ ತಪ್ಪಿದಂತಾಗಿದೆ. ಕಟ್ಟಡದ ತುದಿಯ ಗೋಡೆ ಅಂಚಿನಲ್ಲಿ ಸಾಹಸ ಮೆರೆದು ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿಗಳನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ. ಅಗ್ನಿ ಶಾಮಕದ ವಾಹನ ಕಟ್ಟಡವನ್ನು ಸುತ್ತಲೂ ಸ್ಥಳಾವಕಾಶ ನೀಡದೆ, ಸೆಟ್ ಬ್ಯಾಕ್ ಬಿಡದೆ ಕನಿಷ್ಟ ಫೈರ್ ಸೇಪ್ಟಿ ಪರಿಕರಗಳನ್ನೂ ಅಳವಡಿಸದ ಈ ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ ಕೊಟ್ಟವರಾದರೂ ಯಾರು..? ಇಂತಹ ನಿಯಮ ಬಾಹಿರ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ.
Mangalore Fire breaks at Commercial complex in Kallapu, Ullal. Public appreciate fire brigade team for their timely work.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am