ಬ್ರೇಕಿಂಗ್ ನ್ಯೂಸ್
22-03-23 09:02 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಹೊರ ಗುತ್ತಿಗೆ ನೌಕರರು, ಪೌರ ಕಾರ್ಮಿಕರು ತಮ್ಮ ನೇರ ನೇಮಕಾತಿ, ನೇರ ಪಾವತಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದು ಬುಧವಾರ ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದಾಗಿ ನಗರ ಭಾಗದಲ್ಲಿ ತ್ಯಾಜ್ಯ ರಾಶಿ ಬೀಳುತ್ತಿದ್ದು ಮಂಗಳೂರು ಸ್ಮಾರ್ಟ್ ಸಿಟಿ ಗಬ್ಬು ನಾರುವಂತಾಗಿದೆ. ಅಪಾರ್ಟ್ಮೆಂಟ್, ಹೊಟೇಲ್ ಮುಂದೆ ರಾಶಿ ಬಿದ್ದ ತ್ಯಾಜ್ಯ ಸಂಗ್ರಹಕ್ಕೆ ಮಹಾನಗರ ಪಾಲಿಕೆಯಿಂದ ಪರ್ಯಾಯ ವ್ಯವಸ್ಥೆ ಮಾಡಿದರೂ, ರಸ್ತೆ ಬದಿಗಳಲ್ಲಿ ಕಸದ ರಾಶಿ ದಾರಿಹೋಕರ ಮೂಗಿಗೆ ವಿಚಿತ್ರ ವಾಸನೆ ಬಡಿಯತೊಡಗಿದೆ.
ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಮಂಗಳೂರಿನ ಪಾಲಿಕೆಯಲ್ಲಿ 60 ವಾರ್ಡ್ಗಳಿಗೆ ಕಸ ಸಂಗ್ರಹದ ಹೊಣೆಯನ್ನು ಆಯಾ ಭಾಗದ ಕಾರ್ಪೊರೇಟರ್ ಗಳಿಗೆ ವಹಿಸಲಾಗಿದೆ. ಹೀಗಾಗಿ ಕಾರ್ಪೊರೇಟರ್ ಉಸ್ತುವಾರಿಯಲ್ಲಿ ಕಸ ಸಂಗ್ರಹದ ವಾಹನಗಳು ಓಡಾಡಿದರೂ ಪೂರ್ತಿಯಾಗಿ ಕಸ ತೆಗೆಯಲು ಸಾಧ್ಯವಾಗುತ್ತಿಲ್ಲ. ಒಂದು ವಾರದಿಂದ ಕಸದ ರಾಶಿ ಬಿದ್ದಿರುವುದು, ಕೆಲವು ಕಡೆ ರಸ್ತೆ ಬದಿಗಳಲ್ಲಿ ಕಸವನ್ನು ಸುರಿಯುವ ಕೃತ್ಯ ಏರಿಕೆ ಕಂಡಿದೆ.
ದೊಡ್ಡ ಕಟ್ಟಡ, ಹೋಟೆಲ್, ಕೆಲವು ಅಪಾರ್ಟ್ಮೆಂಟ್ ಆಸುಪಾಸಿನಲ್ಲಿ ಹೆಚ್ಚು ತ್ಯಾಜ್ಯ ಸಂಗ್ರಹವಾಗುತ್ತಿದ್ದು ತ್ಯಾಜ್ಯ ವಿಲೇವಾರಿ ಸವಾಲಾಗಿದೆ. ಜೊತೆಗೆ, ಮನೆ ಮನೆಯ ಕಸ ಸಂಗ್ರಹವೂ ಆಗುತ್ತಿಲ್ಲ. ಕಾರ್ಮಿಕರ ಮುಷ್ಕರಕ್ಕೆ ಬೆಂಬಲವಾಗಿ ಕಾಂಗ್ರೆಸ್ ಸೇರಿದಂತೆ ಸಮಾನ ಮನಸ್ಕರಿಂದ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯ ಸರ್ಕಾರಕ್ಕೆ ಕಗ್ಗಂಟು ಮಾಡಿದೆ.
ರಾಜ್ಯದೆಲ್ಲೆಡೆಯ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ, ಹೊರಗುತ್ತಿಗೆ ಕಾರ್ಮಿಕರ ಜತೆ ಮಾತುಕತೆ ನಡೆಸಿಕೊಂಡು ಮಹತ್ವದ ನಿರ್ಧಾರಗಳಿಗೆ ಆದೇಶ ಕೊಡಿಸುವ ಭರವಸೆ ನೀಡಿದ್ದಾರೆ. ಕಸದ ವಾಹನ ಚಾಲಕರು, ಯುಜಿಡಿ ಕಾರ್ಮಿಕರು ಸೇರಿದಂತೆ ಎಲ್ಲರನ್ನು ನೇರಪಾವತಿಗೆ ತರಲು ಮಾ.24ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿಅಂಗೀಕಾರ ಪಡೆಯಲಾಗುವುದು ಎಂದಿದ್ದಾರೆ.
Sanitation workers protest steps into 10th day, Mangalore city filled with garbage, residents face issues.
04-07-25 06:52 pm
Bangalore Correspondent
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 02:38 pm
Mangalore Correspondent
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
Mangalore Police, Drugs, Sudheer Kumar Reddy:...
03-07-25 10:50 pm
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
04-07-25 06:21 pm
Mangalore Correspondent
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm