ಬ್ರೇಕಿಂಗ್ ನ್ಯೂಸ್
24-03-23 10:40 pm Mangalore Correspondent ಕರಾವಳಿ
ಮಂಗಳೂರು, ಮಾ.24: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ಖಂಡಿಸಿ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ. ಬ್ಲ್ಯಾಕ್ ಡೇ ಎಂಬ ಸ್ಲೋಗನ್ ತೋರಿಸಿ, ನೆಲದಲ್ಲಿ ಕುಳಿತು ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಸಭಾ ನಾಯಕ ಬಿಕೆ ಹರಿಪ್ರಸಾದ್, ರಾಹುಲ್ ಗಾಂಧಿ ಅವರ ಸದಸ್ಯತ್ವ ಅನರ್ಹ ಮಾಡಿದ್ದು ಪ್ರಜಾಪ್ರಭುತ್ವ ಬುಡಮೇಲುಗೊಳಿಸುವ ನಡೆ. ರಾಹುಲ್ ಗಾಂಧಿಯವರು 2019ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ನೀರವ್ ಮೋದಿ, ಲಲಿತ್ ಮೋದಿಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಕಳ್ಳರನ್ನು ಕಳ್ಳರು ಎನ್ನದೆ ಹರಿಶ್ಚಂದ್ರರು ಎನ್ನಬೇಕೇ ಎಂದು ಪ್ರಶ್ನಿಸಿದರು.


ರಾಹುಲ್ ಗಾಂಧಿ ಹೇಳಿದ್ದ ಮಾತನ್ನು ನಾವೆಲ್ಲ ಹೇಳಿಕೊಂಡು ಹೋಗುತ್ತೇವೆ. ಮೋದಿ ಹೆಸರಿಟ್ಟವರೇ ಹಲವಾರು ಮಂದಿ ಕಳ್ಳರಿದ್ದಾರೆ, ಅವರೆಲ್ಲ ವಿದೇಶದಲ್ಲಿ ಐಷಾರಾಮಿ ಇದ್ದಾರೆ. ದೇಶದ ದುಡ್ಡು ತಿಂದು ಅವರನ್ನು ನಾವು ಕಳ್ಳರು ಎನ್ನಬೇಕಲ್ಲದೆ ಮತ್ತೇನು ಹೇಳಬೇಕು. ಈ ಕಳ್ಳರನ್ನು ಬಿಜೆಪಿಯವರು ಹರಿಶ್ಚಂದ್ರರು ಎನ್ನುತ್ತಾರೆಯೇ. ಹಾಗೆಂದು ಕರೆದಲ್ಲಿ ನಾವು ನಮ್ಮ ಹೇಳಿಕೆ ಹಿಂಪಡೆಯುತ್ತೇವೆ. ನಾವು ಇದೇ ಮಾತನ್ನು ಹೇಳಿಕೊಂಡು ಹೋಗುತ್ತೇವೆ. ಇವರು ಜೈಲಿಗೆ ಹಾಕೋದಿದ್ದಲ್ಲಿ ನಾವು ರೆಡಿ ಇದ್ದೇವೆ ಎಂದು ಹರಿಪ್ರಸಾದ್ ಹೇಳಿದರು. ಯುಟಿ ಖಾದರ್, ಐವಾನ್ ಡಿಸೋಜ, ಅಭಯಚಂದ್ರ ಜೈನ್, ಜೆ.ಆರ್ ಲೋಬೊ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Congress leader Rahul Gandhi convicted, Congress leaders including Hariprasad protest before MCC in Mangalore.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am