ಬ್ರೇಕಿಂಗ್ ನ್ಯೂಸ್
25-03-23 12:20 pm Mangalore Correspondent ಕರಾವಳಿ
ಉಳ್ಳಾಲ, ಮಾ.25 : ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಯುವಕನೋರ್ವ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (25) ಆತ್ಮಹತ್ಯೆಗೈದ ದುರ್ದೈವಿ. ಅಕ್ಷಯ್ ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿವಸಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದನಂತೆ. ಮೊಬೈಲ್ ಶಾಪ್ ಮಾಲಕರು ಕರೆ ಮಾಡಿದರೂ ಅಕ್ಷಯ್ ಕರೆ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿದೆ. ಇಂದು ಬೆಳಗ್ಗೆ ಅಕ್ಷಯ್ ತಾಯಿ, ಮನೆ ಹತ್ತಿರದ ಬೀಡಿ ಬ್ರಾಂಚಿಗೆ ಬೀಡಿ ಕೊಡಲು ತೆರಳಿದ್ದ ವೇಳೆ ಮನೆಯ ಹಾಲಿನ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ.
ಖಿನ್ನತೆಯಿಂದ ಅಕ್ಷಯ್ ಆತ್ಮ ಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಮೃತ ಅಕ್ಷಯ್ ತಾಯಿ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಕುಂಪಲದಲ್ಲಿ ಸರಣಿ ಮರಣಮೃದಂಗ
ವರ್ಷದ ಹಿಂದೆ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಾ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿವೆ. ಕಳೆದ ವಾರವಷ್ಟೆ ನಂತೂರಿನಲ್ಲಿ ನಡೆದ ಅಪಘಾತದಲ್ಲಿ ಚಿಕ್ಕಪ್ಪನ ಜತೆ ಸ್ಕೂಟರಲ್ಲಿದ್ದ ಕುಂಪಲ ಗುರುನಗರದ ವಿದ್ಯಾರ್ಥಿನಿ ಭೂಮಿಕ(17) ಸಾವನ್ನಪ್ಪಿದ್ದರು. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳೊಂದರಲ್ಲೇ ಕುಂಪಲ ಪ್ರದೇಶದ ರಿಕ್ಷಾ ಚಾಲಕರಾದ ಜಯಪ್ರಕಾಶ್(42), ಜಯಂತ್ ಎಸ್.ಕುಂಪಲ(48) ಮತ್ತು ಧನಂಜಯ ರಾವ್ (53) ಎಂಬ ಮೂವರು ಅಕಾಲಿಕವಾಗಿ ಸಾವನ್ನಪ್ಪಿದ್ದರು.
25 year old commits suicide at Kumpala in Mangalore. The deceased has been identified as Akshay. He was said to be working at a mobile store in city. Repeated suicides are been reported from kumpala since a month.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm