ಬ್ರೇಕಿಂಗ್ ನ್ಯೂಸ್
04-04-23 01:21 pm Mangalore Correspondent ಕರಾವಳಿ
ಮಂಗಳೂರು, ಎ.4 : ಮಾನವೀಯ ಕಾರ್ಯಕ್ಕೆ ಮನಸ್ಸು ಮುಖ್ಯ ಅಂತಾರೆ. ಇಲ್ಲೊಬ್ಬರು ವೃದ್ಧ ಮಹಿಳೆ ತನ್ನ ಮನೆ ಬಳಿಯ ರೈಲು ಹಳಿಯಲ್ಲಿ ಬೃಹತ್ ಮರ ಬಿದ್ದಿರುವುದನ್ನು ಕಂಡು ತಾನೇ ತರಾತುರಿಯಲ್ಲಿ ಕೆಂಪು ವಸ್ತ್ರ ತೋರಿಸಿ ರೈಲು ನಿಲ್ಲಿಸಿ ಸಂಭಾವ್ಯ ಅನಾಹುತ ತಪ್ಪಿಸಿದ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿಯ ನಿವಾಸಿ, 70 ವರ್ಷದ ಚಂದ್ರಾವತಿ ಸಮಯ ಪ್ರಜ್ಞೆ ಮೆರೆದ ಮಹಿಳೆ. ಮನೆ ಬಳಿಯ ತೋಟಕ್ಕೆ ತೆರಳಿದ್ದ ಮಹಿಳೆ ರೈಲು ಹಳಿಗೆ ಮರ ಬಿದ್ದಿರುವುದನ್ನು ಗಮನಿಸಿದ್ದಾರೆ. ಮನೆಗೆ ತೆರಳಿ ಅಕ್ಕಪಕ್ಕದವರನ್ನು ಫೋನ್ ಮಾಡಿ ಕರೆಯೋಣ ಎಂದು ದಾಪುಗಾಲು ಹಾಕುತ್ತಿದ್ದಾಗಲೇ ಮಹಿಳೆಗೆ ರೈಲಿನ ಹಾರನ್ ಕೇಳಿಸಿತ್ತು.
ಕೂಡಲೇ ಮನೆಗೆ ತೆರಳಿದ ಮಹಿಳೆ, ಕೆಂಪು ಬಟ್ಟೆಯನ್ನು ಹಿಡಿದು ರೈಲು ಹಳಿಯತ್ತ ಓಡಿದ್ದಾರೆ. ರೈಲು ಬರುತ್ತಿದ್ದ ಜಾಗದಿಂದ ಇನ್ನೊಂದು ಬದಿಯ ಹಳಿಯಲ್ಲಿ ನಿಂತು ಕೆಂಪು ಬಟ್ಟೆ ತೋರಿಸಿ ಅಪಾಯದ ಮುನ್ಸೂಚನೆ ನೀಡಿದ್ದಾರೆ. ಇದನ್ನು ಗಮನಿಸಿದ ಲೋಕೋ ಪೈಲಟ್ ರೈಲನ್ನು ನಿಧಾನಗೊಳಿಸಿದ್ದು ಹತ್ತಿರ ಬಂದಂತೆ ಮುಂದೆ ಹಳಿಗೆ ಅಡ್ಡಲಾಗಿ ಮರ ಬಿದ್ದಿರುವುದು ಕಂಡುಬಂದಿದೆ. ಆನಂತರ, ರೈಲು ನಿಲ್ಲಿಸಿ ರೈಲ್ವೇ ಸಿಬಂದಿ ಮತ್ತು ಸ್ಥಳೀಯರು ಸೇರಿ ಮರವನ್ನು ಕಡಿದು ತೆರವುಗೊಳಿಸಿದ್ದಾರೆ.
ರೈಲು ಹಳಿಗೆ ಮರ ಬಿದ್ದಿದ್ದನ್ನ ಕಂಡು ಸಂಭಾವ್ಯ ಅನಾಹುತ ತಪ್ಪಿಸಿದ ವೃದ್ಧ ಮಹಿಳೆಯನ್ನು ಸ್ಥಳೀಯರು ಮತ್ತು ರೈಲು ಸಿಬಂದಿ ಪ್ರಶಂಸೆ ಮಾಡಿದ್ದಾರೆ. ಮಂಗಳೂರು- ಮುಂಬೈ ಸಂಚರಿಸುವ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅದಾಗಿದ್ದು ವೇಗವಾಗಿ ಮರದ ಮೇಲಿನಿಂದ ತೆರಳುತ್ತಿದ್ದರೆ ಹಳಿ ತಪ್ಪುವ ಅಪಾಯ ಇತ್ತು.
Mangalore 70 year old woman averts major train accident at Pachanady betweens Padil Jokatte. Chandravati, who lives in Mandara near Pachanady, noticed a tree had fallen on the train track just as the Matsyagandha train was making its way from Mangaluru to Mumbai.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 07:09 pm
HK News Desk
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
15-11-25 07:42 pm
Mangalore Correspondent
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm