ಬ್ರೇಕಿಂಗ್ ನ್ಯೂಸ್
12-04-23 08:15 pm Udupi Correspondent ಕರಾವಳಿ
ಉಡುಪಿ, ಎ.12 : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾದ ಇಬ್ಬರು ರೌಡಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ತಿಳಿಸಿದ್ದಾರೆ.
ಸುಪಾರಿ ಕಿಲ್ಲರ್ ಎಂದು ಕುಖ್ಯಾತಿ ಹೊಂದಿರುವ ಸೈಫುದ್ದೀನ್ ಅಲಿಯಾಸ್ ಸೈಫ್ ಮತ್ತು ಬೈಂದೂರು ಮೂಲದ ರವಿಚಂದ್ರ ಎಂಬವರ ಮೇಲೆ ಗೂಂಡಾ ಕಾಯ್ದೆ ಹೇರಲಾಗಿದೆ. ಉಡುಪಿ ತಾಲೂಕಿನ ಆತ್ರಾಡಿ ಗ್ರಾಮದ ನಿವಾಸಿ ಸೈಫುದ್ದೀನ್, ಹಿರಿಯಡ್ಕ ಹಾಗೂ ಉಡುಪಿ ನಗರ ಠಾಣೆಯಲ್ಲಿ ರೌಡಿ ಶೀಟರ್. 1995 ರಿಂದ ಅಪರಾಧ ಚಟುವಟಿಕೆಯಲ್ಲಿ ನಿರತನಾಗಿದ್ದು ಉಡುಪಿ ನಗರ, ಹಿರಿಯಡ್ಕ, ಮಣಿಪಾಲ ಮತ್ತು ಕುಂದಾಪುರ ಠಾಣೆಗಳಲ್ಲಿ ಪ್ರಕರಣಗಳನ್ನು ಹೊಂದಿದ್ದಾನೆ. ಕೊಲೆ, ಕೊಲೆಯತ್ನ, ದೊಂಬಿ, ಹಲ್ಲೆ, ವಂಚನೆ ಸಹಿತ 19 ಪ್ರಕರಣಗಳು ಈತನ ವಿರುದ್ಧ ದಾಖಲಾಗಿದೆ. ಇದಲ್ಲದೆ, 34 ಜನ ಸಹಚರರ ಬಣವನ್ನು ಸೈಫುದ್ದೀನ್ ಹೊಂದಿದ್ದಾನೆ.
ಮುಂಬರುವ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆ ಇರುವುದರಿಂದ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸುವ ಬಗ್ಗೆ ಸಲ್ಲಿಸಿದ ವರದಿಯ ಮೇರೆಗೆ, ಜಿಲ್ಲಾಧಿಕಾರಿಯವರು ಕ್ರಮ ಜರುಗಿಸಿ ಬಂಧನ ಆದೇಶ ಹೊರಡಿಸಿದ್ದಾರೆ. ಸೈಫುದ್ದೀನ್ ಅಲಿಯಾಸ್ ಸೈಫು ಎಂಬಾತನನ್ನು ಕೇಂದ್ರ ಕಾರಾಗೃಹ ಬೆಳಗಾವಿಯಲ್ಲಿ ಬಂಧನದಲ್ಲಿ ಇಡಲಾಗಿದೆ.
ಬೈಂದೂರು ತಾಲೂಕಿನ ನಂದನವನ ಗ್ರಾಮದ, ರವಿ ಅಲಿಯಾಸ್ ರವಿಚಂದ್ರ ಎಂಬಾತ ಬೈಂದೂರು ಹಾಗೂ ಹಿರಿಯಡ್ಕ ಠಾಣೆಯಲ್ಲಿ ರೌಡಿ ಹಾಳೆಯನ್ನು ಹೊಂದಿದ್ದಾನೆ. 1996 ರಿಂದ ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದು, ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಹಿರಿಯಡ್ಕ ಠಾಣೆಗಳಲ್ಲಿ ಅಪರಾಧ ಕೃತ್ಯ ಎಸಗಿದ್ದಾನೆ. ಜೊತೆಗೆ ದಕ್ಷಿಣ ಕನ್ನಡ, ಕಾರವಾರ ಹಾಗೂ ಶಿವಮೊಗ್ಗ ಜಿಲ್ಲೆಯ ಠಾಣೆಗಳಲ್ಲಿಯೂ ಪ್ರಕರಣಗಳಿವೆ. ಹಲ್ಲೆ, ದೊಂಬಿ, ಸುಲಿಗೆ, ಕೊಲೆ ಪ್ರಯತ್ನ, ಅಪಹರಣ, ಕೋಮು ಗಲಭೆ ಸಹಿತ 21 ಪ್ರಕರಣಗಳು ದಾಖಲಾಗಿದೆ. ಈತನೊಂದಿಗೆ 65 ಜನ ಸಹಚರರ ಬಣವನ್ನು ಹೊಂದಿದ್ದಾನೆ. ರವಿಚಂದ್ರನನ್ನು ಕೇಂದ್ರ ಕಾರಾಗೃಹ ಕಲಬುರಗಿಯಲ್ಲಿ ಬಂಧನದಲ್ಲಿ ಇಡಲಾಗಿದೆ ಎಂದು ಉಡುಪಿ ಎಸ್ಪಿ ಮಚೀಂದ್ರ ಹಾಕೆ ತಿಳಿಸಿದ್ದಾರೆ.
Police have arrested two rowdy sheeters for their involvement in anti-social activities across various police station limits in the district, ahead of the upcoming elections. The arrested individuals have been detained under the Goonda Act.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm