ಬ್ರೇಕಿಂಗ್ ನ್ಯೂಸ್
13-04-23 03:07 pm Udupi Correspondent ಕರಾವಳಿ
ಉಡುಪಿ, ಎ.13: ಮಂಗಳೂರಿನಿಂದ ಕೊಲ್ಲೂರಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿರೂರಿನ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ನಿಂದ ಇಳಿಯುತ್ತಿದ್ದಾಗಲೇ ಪರಿಸರದಲ್ಲಿ ಮುಳಿ ಹುಲ್ಲಿಗೆ ಬೆಂಕಿ ಹತ್ತಿಕೊಂಡು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಕರಾವಳಿಯಲ್ಲಿ ಟೆಂಪಲ್ ರನ್ ನಡೆಸುತ್ತಿರುವ ಬಸವರಾಜ ಬೊಮ್ಮಾಯಿ ಅವರು ಕೊಲ್ಲೂರಿಗೆ ತೆರಳಲು ಕಾಪ್ಟರ್ ನಲ್ಲಿ ಅರೆಶಿರೂರು ಹೆಲಿಪ್ಯಾಡ್ ಗೆ ಬಂದಿದ್ದಾರೆ. ಹೆಲಿಕಾಪ್ಟರ್ ಇಳಿಯುವ ಸಂದರ್ಭ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಸಿಎಂ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿದ್ದು ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಆದರೆ ವಿಐಪಿ ವ್ಯಕ್ತಿ ಬರುವ ಸಂದರ್ಭದಲ್ಲಿ ಹೆಲಿಪ್ಯಾಡ್ ನಲ್ಲಿ ಬೆಂಕಿ ಹತ್ತಿಕೊಂಡಿದ್ದು ಭದ್ರತಾ ಲೋಪ ಅನ್ನುವಂತಾಗಿದೆ.



ಮುಖ್ಯಮಂತ್ರಿ ಮೊದಲಿಗೆ ಮಂಗಳೂರಿನಿಂದ ವಾಹನದಲ್ಲಿ ಕೊಲ್ಲೂರಿಗೆ ಬರಲಿದ್ದಾರೆ ಎಂಬ ಮಾಹಿತಿ ಉಡುಪಿ ಜಿಲ್ಲಾಡಳಿತಕ್ಕೆ ಸಿಕ್ಕಿತ್ತು. ಆದರೆ ಕೊನೆ ಕ್ಷಣದಲ್ಲಿ ಸಿಎಂ ಹೆಲಿಕಾಪ್ಟರ್ನಲ್ಲಿ ಬರುವುದು ಖಾತ್ರಿಯಾಗಿದೆ. ಶಿರೂರಿನ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್ ಆಗಲು ರೆಡಿ ಮಾಡಲಾಗಿತ್ತು. ತರಾತುರಿಯಲ್ಲಿ ನಿರ್ಧಾರ ಆಗಿದ್ದರಿಂದ ಜಾಗದ ಬಳಿ ಬೆಳೆದಿದ್ದ ಹುಲ್ಲುಗಳನ್ನು ಕತ್ತರಿಸಿರಲಿಲ್ಲ. ಪರಿಣಾಮ ಹೆಲಿಕಾಪ್ಟರ್ ರೆಕ್ಕೆಯ ಗಾಳಿಯಿಂದಾಗಿ ಬಿಸಿಲಿಗೆ ಕಾದಿದ್ದ ಮುಳಿ ಹುಲ್ಲಿಗೆ ಬೆಂಕಿ ಹರಡಿದೆ. ಹೊಗೆಯೊಂದಿಗೆ ಬೆಂಕಿ ಹೊತ್ತಿಕೊಂಡಿದ್ದು ಒಂದು ಕ್ಷಣ ಅಲ್ಲಿದ್ದ ಭದ್ರತಾ ಸಿಬಂದಿ ಅಚ್ಚರಿಗೊಳ್ಳುವಂತಾಯ್ತು. ಆದರೆ ಬೆಂಕಿ ಕಾಣಿಸಿಕೊಳ್ಳುವಷ್ಟರಲ್ಲಿ ಮುಖ್ಯಮಂತ್ರಿ ಅಲ್ಲಿಂದ ಇಳಿದು ವಾಹನದಲ್ಲಿ ಹೋಗಿಯಾಗಿತ್ತು. ಎಸ್ಕಾರ್ಟ್ ವಾಹನವೂ ಹೋದ ನಂತರ ಬೆಂಕಿ ಕಾಣಿಸಿದ್ದು ಸಿಬಂದಿ ಕೂಡಲೇ ನಂದಿಸಿದ್ದಾರೆ.
A minor fire was noticed close to Are Shiroor helipad, near Baindoor in Udupi district, before Karnataka Chief Minister Basavaraj Bommai’s helicopter was to land, on April 13. Fire and Emergency Services personnel put off the fire immediately.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 07:09 pm
HK News Desk
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
15-11-25 07:42 pm
Mangalore Correspondent
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm