ಬ್ರೇಕಿಂಗ್ ನ್ಯೂಸ್
13-04-23 07:30 pm Mangalore Correspondent ಕರಾವಳಿ
ಮಂಗಳೂರು, ಎ.13 : ಪುತ್ತೂರಿನ ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದಕ್ಕೆ ಆಕ್ರೋಶಗೊಂಡಿದ್ದ ಕಾರ್ಯಕರ್ತರು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಹಾಗು ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಅವರು ಶಾಸಕ ಮಠಂದೂರು ಅವರನ್ನು ಸಮಾಧಾನ ಪಡಿಸಲು ಪುತ್ತೂರಿನ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಜಿಲ್ಲಾಧ್ಯಕ್ಷರನ್ನು ತಡೆದು ನಿಲ್ಲಿಸಿದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಂಜೀವ ಮಠಂದೂರು ಅವರನ್ನ ಕಡೆಗಣಿಸಲು ಕಾರಣವೇನು..? ಟಿಕೆಟ್ ವಿಚಾರದಲ್ಲಿ ಜಿಲ್ಲೆಯ ಪದಾಧಿಕಾರಿಗಳ ನಿರ್ಣಯಕ್ಕೆ ಬೆಲೆ ಇಲ್ಲವೇ..? ಹಾಗಾದರೆ ನೀವು ಅ ಹುದ್ದೆಯಲ್ಲಿರುವುದು ಯಾಕೆ..?ಸಂಜೀವ ಮಠಂದೂರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಿದ್ದಾರೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಪ್ರಾಮಾಣಿಕರಿಗೆ ಬಿಜೆಪಿಯಲ್ಲಿ ಬೆಲೆ ಇಲ್ಲ ಎಂದಾಯಿತು. ನಾವು ಬಿಜೆಪಿ ಪರವಾಗಿ ಕೆಲಸ ಮಾಡುವುದಿಲ್ಲ. ನೀವೇ ಪ್ರಚಾರ ಕಾರ್ಯ ನಡೆಸಿ. ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸಿಕೊಳ್ಳಿ ಎಂದು ಅಸಹನೆ ವ್ಯಕ್ತಪಡಿಸಿದರು.
ಮನೆಯ ಒಳಕ್ಕೆ ಹೋಗಲು ಬಿಡದೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಯತ್ನಿಸಿದ ಜಿಲ್ಲಾಧ್ಯಕ್ಷ ಸುದರ್ಶನ್, ತನಗೂ ಮೂರು ಬಾರಿ ಟಿಕೆಟ್ ಪಡೆಯಲು ಯತ್ನ ಮಾಡಿದರೂ ಅವಕಾಶ ಸಿಗಲಿಲ್ಲ. ಹಾಗಂತ, ನಾನು ಪಕ್ಷದ ಬಗ್ಗೆ ಅಸಹನೆ ತೋರುವುದು, ದೂರ ನಿಂತರಾಗುವುದೇ ಎಂದು ಮರು ಪ್ರಶ್ನೆ ಹಾಕಿದರು. ಈಗ ಸಂಜೀವ ಮಠಂದೂರು ಅವರಿಗೆ ಟಿಕೆಟ್ ನೀಡದೇ ಇರುವುದರ ಕಾರಣವೇನು ಎಂಬ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಕಾರ್ಯಕರ್ತರು ಆಗ್ರಹಿಸಿದರು. ಒಂದು ಹಂತದಲ್ಲಿ ನೀವು ವಿಡಿಯೋ ಮಾಡಬೇಡಿ ಎಂದು ಸುದರ್ಶನ್ ಕೇಳಿಕೊಂಡರೂ, ಕಾರ್ಯಕರ್ತರು ಕೇಳಲಿಲ್ಲ. ವಿಡಿಯೋ ನಮಗೆ ಬೇಕೆಂದು ಹೇಳಿ ವಿಡಿಯೋ ಮಾಡಿದ್ದಾರೆ. ಇದೀಗ ಜಿಲ್ಲಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಳ್ಳುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Puttur Denial of ticket sanjeeva Matandoor supporters take BJP district president Sudarshan Moodbidri to task. Supporters of disgruntled MLA Sanjeeva Matandoor expressed their discontentment with BJP district president Sudarshan Moodbidri for denying a BJP ticket to Matandoor in the upcoming legislative assembly elections in the state.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 07:09 pm
HK News Desk
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
15-11-25 07:42 pm
Mangalore Correspondent
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm