ಬ್ರೇಕಿಂಗ್ ನ್ಯೂಸ್
15-04-23 03:03 pm Mangalore Correspondent ಕರಾವಳಿ
ಮಂಗಳೂರು, ಎ.15: ಅಸೆಂಬ್ಲಿ ಚುನಾವಣೆಗೆ ಕಾಂಗ್ರೆಸ್ 43 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮಂಗಳೂರು ನಗರ ದಕ್ಷಿಣ ಕ್ಷೇತ್ರಕ್ಕೆ ಜೆ.ಆರ್.ಲೋಬೊ ಟಿಕೆಟ್ ಪಡೆದಿದ್ದಾರೆ. ಪುತ್ತೂರಿನಲ್ಲಿ ಅಶೋಕ್ ಕುಮಾರ್ ರೈ, ಕಾರ್ಕಳದಲ್ಲಿ ಉದಯ ಕುಮಾರ್ ಶೆಟ್ಟಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಇನ್ನೂ ಸಸ್ಪೆನ್ಸ್ ಮುಂದುವರಿದಿದೆ.
ಪುತ್ತೂರಿನಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಟಿಕೆಟ್ ಗಿಟ್ಟಿಸಲು ಭಾರೀ ಪ್ರಯತ್ನ ಪಟ್ಟಿದ್ದರು. ಆದರೆ ಎರಡು ತಿಂಗಳ ಹಿಂದೆ ಕಾಂಗ್ರೆಸ್ ಸೇರಿದ್ದ ಅಶೋಕ್ ಕುಮಾರ್ ರೈ ಟಿಕೆಟ್ ಗಿಟ್ಟಿಸಿದ್ದಾರೆ. ಕಾರ್ಕಳದಲ್ಲಿ ಉದಯ್ ಕುಮಾರ್ ಶೆಟ್ಟಿ ಮತ್ತು ಮಂಜುನಾಥ ಪೂಜಾರಿ ಟಿಕೆಟ್ ಗಿಟ್ಟಿಸಲು ಲಾಬಿ ನಡೆಸಿದ್ದರು. ಮಂಜುನಾಥ ಪೂಜಾರಿಗೆ ಟಿಕೆಟ್ ಸಿಗುತ್ತೆ ಎನ್ನಲಾಗುತ್ತಿತ್ತು. ಆದರೆ ಉದಯ ಕುಮಾರ್ ಶೆಟ್ಟಿ ಪ್ರಭಾವ ಬೀರುವ ಮೂಲಕ ಟಿಕೆಟ್ ಪಡೆದುಕೊಂಡಿದ್ದಾರೆ.


ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ಕ್ರಿಸ್ತಿಯನ್ ಕೋಟಾ ಬದಲು ಬಿಲ್ಲವರಿಗೆ ಟಿಕೆಟ್ ಸಿಗುತ್ತದೆ ಎನ್ನಲಾಗುತ್ತಿತ್ತು. ಒಂದು ಹಂತದಲ್ಲಿ ಬಿಲ್ಲವ ಮುಖಂಡ, ವಕೀಲ ಪದ್ಮರಾಜ್ ರಾಮಯ್ಯ ಟಿಕೆಟ್ ಫೈನಲ್ ಆಗಿದೆ ಎನ್ನುವ ಮಾತು ಕೇಳಿಬಂದಿತ್ತು. ಆದರೆ ಕ್ರಿಸ್ತಿಯನ್ ಕೋಟಾ ಬದಲಿಸಿದರೆ ಪರಿಣಾಮ ನೆಟ್ಟಗಿರದು ಎಂದು ಕ್ರಿಸ್ತಿಯನ್ ಮುಖಂಡರು ಹೈಕಮಾಂಡ್ ಮಟ್ಟದಲ್ಲಿ ಬೆದರಿಕೆ ಹಾಕಿದ್ದು ಲೋಬೊಗೆ ಟಿಕೆಟ್ ಸಿಗುವಂತೆ ಮಾಡಿದೆ.
ಕಾಂಗ್ರೆಸ್ ಒಟ್ಟು 217 ಕ್ಷೇತ್ರಗಳಿಗೆ ಈವರೆಗೆ ಏಳು ಕ್ಷೇತ್ರಗಳ ಟಿಕೆಟ್ ಇನ್ನೂ ಬಾಕಿಯಿಟ್ಟಿದೆ. ಮಂಗಳೂರು ನಗರ ಉತ್ತರ ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿ ಘೋಷಣೆಯಾಗಿಲ್ಲ. ಉತ್ತರ ಕ್ಷೇತ್ರದಲ್ಲಿ ಮೊಯ್ದೀನ್ ಬಾವ ಮತ್ತು ಇನಾಯತ್ ಆಲಿ ತಮಗೇ ಟಿಕೆಟ್ ಎಂದು ಲಾಬಿ ನಡೆಸುತ್ತಿದ್ದಾರೆ. ಇದರಿಂದಾಗಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಘೋಷಣೆಯನ್ನೂ ಇನ್ನೂ ಪೆಂಡಿಂಗ್ ಇಡಲಾಗಿದೆ. ದಕ್ಷಿಣ ಕನ್ನಡ- ಉಡುಪಿಯಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರವೊಂದೇ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗದೆ ಬಾಕಿಯಿದೆ.
ಉಳಿದಂತೆ, ನಿನ್ನೆಯಷ್ಟೇ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ವೀರಶೈವ- ಪಂಚಮಸಾಲಿ ಮುಖಂಡ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪಡೆದಿದ್ದಾರೆ. ಬಿಜೆಪಿ ಟಿಕೆಟ್ ಸಿಕ್ಕಿಲ್ಲವೆಂದು ಬಂಡಾಯ ಎದ್ದಿದ್ದ ಸವದಿ ಅವರನ್ನು ಕಾಂಗ್ರೆಸಿಗೆ ಸೆಳೆದುಕೊಳ್ಳಲಾಗಿತ್ತು. ಅರಸೀಕೆರೆ ಕ್ಷೇತ್ರದಲ್ಲಿ ಜೆಡಿಎಸ್ ಬಿಟ್ಟು ಹೋಗಿದ್ದ ಶಿವಲಿಂಗೇಗೌಡ ಟಿಕೆಟ್ ಪಡೆದಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಎಚ್.ಸಿ.ಯೋಗೇಶ್ ಟಿಕೆಟ್ ಪಡೆದಿದ್ದಾರೆ. ಈಶ್ವರಪ್ಪ ಪ್ರತಿನಿಧಿಸುವ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ನಿಂದ ಟಿಕೆಟ್ ಫೈನಲ್ ಆಗಿಲ್ಲ. ಕುಮಟಾ ಕ್ಷೇತ್ರದಲ್ಲಿ ಸ್ಥಳೀಯ ಕಾಂಗ್ರೆಸಿಗರ ವಿರೋಧ ಮಧ್ಯೆಯೂ ಮಾರ್ಗರೆಟ್ ಪುತ್ರ ನಿವೇದಿತ್ ಆಳ್ವಾ ಟಿಕೆಟ್ ಪಡೆದಿದ್ದಾರೆ.
Mangalore JR Lobo gets city south ticket from Congress, Nivedit Alva for Kumta.Ashok Rai gets ticekt for Puttur.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm