ಬ್ರೇಕಿಂಗ್ ನ್ಯೂಸ್
15-04-23 09:56 pm Mangalore Correspondent ಕರಾವಳಿ
ಸುಳ್ಯ, ಎ.15: ಸುಳ್ಯದಲ್ಲಿ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ವಿರುದ್ಧ ಕಾರ್ಯಕರ್ತರು ಬಂಡಾಯ ಎದ್ದಿರುವ ಬಗ್ಗೆ ಸುಳ್ಯದ ಚುನಾವಣಾ ಕಚೇರಿಯಲ್ಲೇ ಅಭಿಪ್ರಾಯ ಸಂಗ್ರಹ ನಡೆಯಿತು. ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದರು.
ಸಭೆಯಲ್ಲಿ 400ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದರು. ಸೇರಿದ ಕಾರ್ಯಕರ್ತರ ಪೈಕಿ 90 ಶೇಕಡಾ ಮಂದಿ ನಂದಕುಮಾರ್ ಅವರೇ ತಮ್ಮ ಅಭ್ಯರ್ಥಿಯಾಗಬೇಕೆಂದು ಅಹವಾಲು ಮಂಡಿಸಿದ್ದಾರೆ. ಈ ನಡುವೆ, ಕಾಂಗ್ರೆಸ್ ಮುಖಂಡ ಧನಂಜಯ ಅಡ್ಪಂಗಾಯ ಅವರು ಕಾರ್ಯಕರ್ತರ ಅಭಿಪ್ರಾಯ ಕೇಳಬೇಕಿಲ್ಲ. ಮುಖಂಡರ ಅಭಿಪ್ರಾಯ ಮಾತ್ರ ಸಾಕು ಎಂದು ಹೇಳಿದ್ದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ಕೆಲಹೊತ್ತು ಅಡ್ಪಂಗಾಯ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ರಮಾನಾಥ ರೈ ಪ್ರತಿಕ್ರಿಯಿಸಿ, ನಾವೆಲ್ಲ ಕಾಂಗ್ರೆಸಿಗರು. ಪಕ್ಷದ ಕಾರ್ಯಕರ್ತರು. ಮುಖಂಡರು ಎನ್ನುವ ಭೇದ ಇಲ್ಲ. ಎಲ್ಲರ ಅಭಿಪ್ರಾಯಕ್ಕೂ ಸಮಾನ ಆದ್ಯತೆ ಇದೆ. ನನಗೆ ವಸ್ತುಸ್ಥಿತಿಯ ವರದಿ ಕೊಡಲು ಹೇಳಿದ್ದಾರೆ. ಯಥಾವತ್ ವರದಿಯನ್ನು ಕೊಡುತ್ತೇನೆ ಎಂದು ಹೇಳಿದರು.

ಭರತ್ ಮುಂಡೋಡಿ, ಧನಂಜಯ ಅಡ್ಪಂಗಾಯ ಮತ್ತಿತರರು ಸೇರಿ ಕೆಲವು ನಾಯಕರಷ್ಟೇ ಕೃಷ್ಣಪ್ಪ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಸಾಮಾನ್ಯ ಕಾರ್ಯಕರ್ತರಿಂದ ತೊಡಗಿ ಕಡಬ ಮತ್ತು ಸುಳ್ಯ ಬ್ಲಾಕ್ ಮಟ್ಟದ ನಾಯಕರೆಲ್ಲ ನಂದಕುಮಾರ್ ಪರವಾಗಿ ಅಭಿಪ್ರಾಯ ಹೇಳಿದರು. ಸಭೆಯಲ್ಲಿ ನಂದಕುಮಾರ್ ಕೂಡ ಉಪಸ್ಥಿತರಿದ್ದರು. ಜಿಗಣಿ ಕೃಷ್ಣಪ್ಪ ಸುಳ್ಯ ಕ್ಷೇತ್ರದಲ್ಲಿ ಇದ್ದರೂ, ಸಭೆಗೆ ಬಂದಿರಲಿಲ್ಲ. ಸುಳ್ಯದಲ್ಲಿ ಘೋಷಿತ ಅಭ್ಯರ್ಥಿ ಕೃಷ್ಣಪ್ಪ ವಿರುದ್ಧ ಕಾರ್ಯಕರ್ತರ ಅಸಹಕಾರ, ಆಕ್ರೋಶದ ಹಿನ್ನೆಲೆಯಲ್ಲಿ ಕ್ಷೇತ್ರದ ವಸ್ತುಸ್ತಿತಿ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ವರದಿ ಕೊಡಲು ಮಾಜಿ ಸಚಿವ ರಮಾನಾಥ ರೈಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚಿಸಿದ್ದರು.
Sullia Nandakumar bags more favour in sullia by Congress members, Ramanath Rai to send report to Kpcc.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm