ಬ್ರೇಕಿಂಗ್ ನ್ಯೂಸ್
15-04-23 10:19 pm Mangalore Correspondent ಕರಾವಳಿ
ಉಳ್ಳಾಲ, ಎ.15 : ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಜನತೆ ಚಿರತೆಯೊಂದನ್ನ ಕಂಡಿದ್ದು ಈ ಕುರಿತು ಅರಣ್ಯ ಇಲಾಖೆಗೆ ನೀಡಿದ ಮಾಹಿತಿ ಮೇರೆಗೆ ಚಿರತೆ ಹಿಡಿಯಲು ಬೋನು ಇಡಲಾಗಿದೆ. ಅರಣ್ಯಾಧಿಕಾರಿ ಮಾತ್ರ ಅದು ಬೇರೆ ತಳಿಯ ಬೆಕ್ಕಾಗಿರಬಹುದೆಂದು ಕಾರ್ಯಾಚರಣೆ ಮೊದಲೇ ಸಬೂಬು ನೀಡಿದ್ದಾರೆ.
ಪಜೀರು ಗ್ರಾಮದ ಅಂಗಡಿಕೆರೆ, ಗುಂಪಕಲ್ಲು, ಉಜ್ಜೊಟ್ಟು, ಮಲಾರ್ ಪರಿಸರದಲ್ಲಿ ಎ.13 ರಂದು ಸಂಜೆ ಹೊತ್ತಿಗೆ ಚಿರತೆ ಮರಿಗಳನ್ನು ಕಂಡಿದ್ದೇವೆ ಎಂದು ಪ್ರತ್ಯಕ್ಷದರ್ಶಿಗಳು ದೂರಿಕೊಂಡಿದ್ದರು. ಚಿರತೆ ಗುಮ್ಮದಿಂದ ಸ್ಥಳೀಯರು, ಮಕ್ಕಳು, ದೊಡ್ಡವರು ಪ್ರದೇಶದಲ್ಲಿ ಆತಂಕದಿಂದಲೇ ಸುತ್ತಾಡುತ್ತಿದ್ದಾರೆ. ಚಿರತೆ ಆಗಿದ್ದಲ್ಲಿ ಯಾವ ಸಮಯದಲ್ಲಿ ಬೇಕಾದರೂ ದಾಳಿ ಮಾಡಬಹುದು. ಈ ನಿಟ್ಟಿನಲ್ಲಿ ಗ್ರಾಮಸ್ಥರಿಗೆ ರಕ್ಷಣೆ ಒದಗಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರಿಕೊಂಡಿದ್ದರು. ಸ್ಥಳಕ್ಕಾಗಮಿಸಿದ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿ ಒಂದು ಬೋನನ್ನು ಇಟ್ಟಿದ್ದಾರೆ .
ಬೇರೆ ತಳಿಯ ಬೆಕ್ಕೂ ಆಗಿರಬಹುದು!
ಕಾರ್ಯಾಚರಣೆ ಮೊದಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ವಿವಿಧ ತಳಿಯ ಬೆಕ್ಕುಗಳು ಚಿರತೆಯಂತೆ ಕಂಡುಬರುತ್ತವೆ. ಪಜೀರು ಭಾಗದಲ್ಲಿ ಈವರೆಗೆ ಚಿರತೆಗಳು ಬಂದಿರುವ ದಾಖಲೆಗಳು ಇಲ್ಲ. ಸ್ಥಳದಲ್ಲಿ ಹೆಜ್ಜೆ ಗುರುತುಗಳು ಚಿರತೆಯಂತೆ
ಗೋಚರಿಸುತ್ತದೆ, ಆದರೆ ಸ್ಪಷ್ಟವಾಗಿ ಗೋಚರಿಸುತ್ತಿಲ್ಲ. ಮುಂಜಾಗ್ರತಾ ಕ್ರಮವಾಗಿ ಬೋನನ್ನು ಇಟ್ಟಿದ್ದೇವೆ. ಸ್ಥಳದಲ್ಲಿ ನಾಯಿಯನ್ನೂ ಕಟ್ಟಲಾಗಿದೆ ಎಂದಿದ್ದಾರೆ.
ಮಹಾಬಲ ಅವರು ಈ ಮೊದಲು ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಚಿರತೆ ಇರುವಿಕೆಯ ಬಗ್ಗೆ ಸ್ಥಳೀಯರು ದೂರಿ ಕೊಂಡಿದ್ದಾಗ ಇದೇ ರೀತಿಯ ಬೆಕ್ಕಿನ ಕಥೆಯನ್ನೇ ಹೇಳಿದ್ದರು. ಪಜೀರು ಪರಿಸರದಲ್ಲಿ ಸಾಕು ನಾಯಿಗಳು ಕಾಣೆಯಾಗಿದ್ದು ಚಿರತೆಯೇ ಒಯ್ದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.ಇದೀಗ ಗ್ರಾಮಸ್ಥರ ಬೇಡಿಕೆ ಪರಿಗಣಿಸಿ ಅಧಿಕಾರಿಗಳು ಬೋನು ಇಟ್ಟಿದ್ದಾರೆ.
Ullal Pajir people panic of seeing leapord, forest officals say it's Marbled cat, keep bone for trap in Mangalore.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 01:20 pm
Mangalore Correspondent
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm