ಬ್ರೇಕಿಂಗ್ ನ್ಯೂಸ್
17-04-23 10:34 pm Mangalore Correspondent ಕರಾವಳಿ
ಮಂಗಳೂರು, ಎ.17: ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಭಾರೀ ಜನಸಾಗರದೊಂದಿಗೆ ಮೆರವಣಿಗೆಯಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದರು. ಕುದ್ರೋಳಿ ದೇವಸ್ಥಾನದಲ್ಲಿ ಪೂಜೆಗೈದು ಬಳಿಕ ಅದ್ದೂರಿ ಮೆರವಣಿಗೆ ಬಂದು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.
ಇದೇ ವೇಳೆ ಮಾತನಾಡಿದ ವೇದವ್ಯಾಸ ಕಾಮತ್, ಕುದ್ರೋಳಿ ದೇವಸ್ಥಾನದಲ್ಲಿ ಪ್ರತಿ ಬಾರಿ ದೇವರಿಗೆ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸುವ ಸಂಪ್ರದಾಯ ಪಾಲಿಸಿದ್ದೇನೆ. ಅದೇ ರೀತಿಯಲ್ಲಿ ಕದ್ರಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಬಜಿಲಕೇರಿ ಮುಖ್ಯಪ್ರಾಣ ದೇವಸ್ಥಾನಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದೇನೆ. ನಾಮಪತ್ರ ಸಲ್ಲಿಸುವಾಗ ಸೇರಿದ ಜನಸ್ತೋಮ ನೋಡುವಾಗ ಇದು ಗೆಲುವಿನ ನಂತರದ ವಿಜಯಯಾತ್ರೆಯಂತೆ ಕಾಣುತ್ತಿದೆ ಎಂದು ಹೇಳಿದರು.



ಪುಷ್ಪಗಳಿಂದ ಸಿಂಗರಿಸಿದ ಜೀಪಿನಲ್ಲಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರನ್ನು ಕುದ್ರೋಳಿಯಿಂದ ಲಾಲ್ ಭಾಗ್ ತನಕ ಮೆರವಣಿಗೆ ಒಯ್ಯಲಾಯಿತು. ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ದಕ್ಷಿಣದಲ್ಲಿ ವೇದವ್ಯಾಸ ಕಾಮತ್ ಮಾಡಿರುವ ಅಭಿವೃದ್ಧಿಯನ್ನು ಜನ ಮೆಚ್ಚಿಕೊಂಡಿದ್ದಾರೆ. ಅವರ ಗೆಲುವು ಇಲ್ಲಿಂದಲೇ ಮುಂದುವರೆಯಲಿದೆ ಎಂದರು.
ಪಾದಯಾತ್ರೆಯಲ್ಲಿ ಚೆಂಡೆ ವಾದನ, ಕಲ್ಲಡ್ಕ ಬೊಂಬೆಗಳು, ಹಾಡುಗಳು ಕಾರ್ಯಕರ್ತರ ಖುಷಿಯನ್ನು ಹೆಚ್ಚಿಸಿದವು. ವೇದವ್ಯಾಸ ಕಾಮತ್ ಅವರನ್ನು ಮೆಚ್ಚಿ ರಚಿಸಲಾದ ವಿಶೇಷ ಹಾಡಿಗೆ ಕಾರ್ಯಕರ್ತರು ಹೆಜ್ಜೆ ಹಾಕುವ ಮೂಲಕ ಸಂಭ್ರಮಿಸಿದರು. ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಸಂಚಾಲಕ ನಿತಿನ್ ಕುಮಾರ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ವಕೀಲ ರವೀಂದ್ರ ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಪ್ರಮುಖರಾದ ಉಮಾನಾಥ ಅಮೀನ್, ಸಿಎ ಗೌತಮ್ ಪೈ ಉಪಸ್ಥಿತರಿದ್ದರು.
Sitting Mangaluru South MLA Vedavyas Kamath filed his nomination papers ahead of the state Assembly election here at the Mangaluru City Corporation office on Monday April 17.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am