ಬ್ರೇಕಿಂಗ್ ನ್ಯೂಸ್
25-04-23 11:10 pm Mangalore Correspondent ಕರಾವಳಿ
ಮಂಗಳೂರು, ಎ.25 : ಬೇಸಗೆ ಮಳೆಯಿಲ್ಲದೆ ಉಪ್ಪಿನಂಗಡಿ ಭಾಗದಲ್ಲಿ ನೇತ್ರಾವತಿ ನದಿ ಸಂಪೂರ್ಣ ಬತ್ತಿ ಹೋಗಿದ್ದರೆ, ಈಗ ಮಂಗಳೂರು ನಗರಕ್ಕೆ ನೀರು ಪೂರೈಸುವ ತುಂಬೆ ಅಣೆಕಟ್ಟಿನಲ್ಲೂ ನೀರು ಖಾಲಿಯಾಗಿದ್ಯಾ ಅನ್ನುವ ಅನುಮಾನ ಮೂಡಿದೆ. ಪೈಪ್ ಲೈನ್ ಬದಲಿಸುವ ತಾಂತ್ರಿಕ ಕಾರಣದ ನೆಪವೊಡ್ಡಿ ಎಪ್ರಿಲ್ 27 ಮತ್ತು 28ರಂದು ಮಂಗಳೂರು ನಗರಕ್ಕೆ ನೀರು ಪೂರೈಕೆ ಇಲ್ಲ ಎಂದು ಮಹಾನಗರ ಪಾಲಿಕೆ ಪ್ರಕಟಣೆ ನೀಡಿದೆ.
ಈಗಾಗಲೇ ಬಂಟ್ವಾಳ ತಾಲೂಕಿನ ಶಂಭೂರಿನ ಅಣೆಕಟ್ಟಿನಲ್ಲಿ ನೀರು ಖಾಲಿಯಾಗಿದೆ. ಇತ್ತೀಚೆಗೆ ಅಲ್ಲಿದ್ದ ನೀರನ್ನು ತುಂಬೆ ಜಲಾಶಯಕ್ಕೆ ಬಿಡಲಾಗಿತ್ತು. ಆಮೂಲಕ ಚುನಾವಣೆ ಹೊತ್ತಲ್ಲಿ ತುಂಬೆ ಅಣೆಕಟ್ಟು ನೀರು ಖಾಲಿಯಾಗದಂತೆ ನೋಡಿಕೊಳ್ಳಲಾಗಿತ್ತು. ಆದರೆ ಈಗ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಇಳಿಯುತ್ತಿದ್ದು ನೀರನ್ನು ಶೇಖರ ಮಾಡುವುದು ಪಾಲಿಕೆಗೆ ಸವಾಲಾಗಿದೆ.
ಇದೀಗ ಪೈಪ್ ಲೈನ್ ಕಾಮಗಾರಿ ನೆಪದಲ್ಲಿ ಎಪ್ರಿಲ್ 27ರ ಬೆಳಗ್ಗೆ 6ರಿಂದ 29ರ ಬೆಳಗ್ಗೆ 6ರ ವರೆಗೆ ನೀರು ಪೂರೈಕೆ ಇಲ್ಲ ಎಂದು ಪಾಲಿಕೆ ಹೇಳಿದ್ದು ನಗರದ ಜನರು ಸಹಕರಿಸುವಂತೆ ಕೇಳಿಕೊಂಡಿದೆ. ಈಗಾಗಲೇ ನಗರದ ಕೆಲವು ಕಡೆ ನೀರಿನ ಲಭ್ಯತೆ ಇಲ್ಲ. ಸರಿಪಲ್ಲ, ಮರೋಳಿ, ಕುಲಶೇಖರ, ಅಶೋಕನಗರ ಸೇರಿದಂತೆ ಎತ್ತರದ ಜಾಗಕ್ಕೆ ನೀರಿನ ಪೂರೈಕೆ ಆಗುತ್ತಿಲ್ಲ. ಈಗ ಎರಡು ದಿನ ನೀರು ಪೂರೈಕೆ ಕಡಿತ ಮಾಡಿ, ಅಣೆಕಟ್ಟಿನಲ್ಲಿ ನೀರು ಹಿಡಿದಿಡುವ ಪ್ರಯತ್ನಕ್ಕೆ ಪಾಲಿಕೆ ಮುಂದಾಗಿದೆ. ಎತ್ತಿನಹೊಳೆ ಯೋಜನೆಗಾಗಿ ಪಶ್ಚಿಮ ಘಟ್ಟಗಳನ್ನು ಕಡಿದು ಹಾಕಿರುವುದು, ಅದರಿಂದಾಗಿ ಶೋಲಾ ಕಾಡುಗಳ ನಾಶ ಆಗಿರುವುದು ನೇತ್ರಾವತಿ ನದಿ ಬರಡಾಗಲು ಕಾರಣ. ಕಳೆದೆರಡು ವರ್ಷಗಳಲ್ಲಿ ಬೇಸಗೆ ಮಳೆಯಾಗಿದ್ದರಿಂದ ನೀರಿನ ಸಮಸ್ಯೆ ಕಂಡುಬಂದಿರಲಿಲ್ಲ. ಈ ಬಾರಿ ಬೇಸಗೆ ಮಳೆ ಆಗದೇ ಇರುವುದು ಮಂಗಳೂರಿನ ಜನರಿಗೆ ನೇತ್ರಾವತಿ ಶಾಪ ತಟ್ಟುವ ಸಾಧ್ಯತೆಯಿದೆ.
Pipe line repair, No MCC Water Supply in Mangalore for Two Days from April 27 to 29. The Mangalore city corporation will carry out maintenance work, including Header replacement work at LLPS – 1 and 1200 MM pipe repair work at the Thumbay High Lifting Pump Station – 2 -80MLD.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 12:06 pm
HK News Desk
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
15-11-25 01:51 pm
Mangalore Correspondent
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm