ಬ್ರೇಕಿಂಗ್ ನ್ಯೂಸ್
25-04-23 11:10 pm Mangalore Correspondent ಕರಾವಳಿ
ಮಂಗಳೂರು, ಎ.25 : ಬೇಸಗೆ ಮಳೆಯಿಲ್ಲದೆ ಉಪ್ಪಿನಂಗಡಿ ಭಾಗದಲ್ಲಿ ನೇತ್ರಾವತಿ ನದಿ ಸಂಪೂರ್ಣ ಬತ್ತಿ ಹೋಗಿದ್ದರೆ, ಈಗ ಮಂಗಳೂರು ನಗರಕ್ಕೆ ನೀರು ಪೂರೈಸುವ ತುಂಬೆ ಅಣೆಕಟ್ಟಿನಲ್ಲೂ ನೀರು ಖಾಲಿಯಾಗಿದ್ಯಾ ಅನ್ನುವ ಅನುಮಾನ ಮೂಡಿದೆ. ಪೈಪ್ ಲೈನ್ ಬದಲಿಸುವ ತಾಂತ್ರಿಕ ಕಾರಣದ ನೆಪವೊಡ್ಡಿ ಎಪ್ರಿಲ್ 27 ಮತ್ತು 28ರಂದು ಮಂಗಳೂರು ನಗರಕ್ಕೆ ನೀರು ಪೂರೈಕೆ ಇಲ್ಲ ಎಂದು ಮಹಾನಗರ ಪಾಲಿಕೆ ಪ್ರಕಟಣೆ ನೀಡಿದೆ.
ಈಗಾಗಲೇ ಬಂಟ್ವಾಳ ತಾಲೂಕಿನ ಶಂಭೂರಿನ ಅಣೆಕಟ್ಟಿನಲ್ಲಿ ನೀರು ಖಾಲಿಯಾಗಿದೆ. ಇತ್ತೀಚೆಗೆ ಅಲ್ಲಿದ್ದ ನೀರನ್ನು ತುಂಬೆ ಜಲಾಶಯಕ್ಕೆ ಬಿಡಲಾಗಿತ್ತು. ಆಮೂಲಕ ಚುನಾವಣೆ ಹೊತ್ತಲ್ಲಿ ತುಂಬೆ ಅಣೆಕಟ್ಟು ನೀರು ಖಾಲಿಯಾಗದಂತೆ ನೋಡಿಕೊಳ್ಳಲಾಗಿತ್ತು. ಆದರೆ ಈಗ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಇಳಿಯುತ್ತಿದ್ದು ನೀರನ್ನು ಶೇಖರ ಮಾಡುವುದು ಪಾಲಿಕೆಗೆ ಸವಾಲಾಗಿದೆ.
ಇದೀಗ ಪೈಪ್ ಲೈನ್ ಕಾಮಗಾರಿ ನೆಪದಲ್ಲಿ ಎಪ್ರಿಲ್ 27ರ ಬೆಳಗ್ಗೆ 6ರಿಂದ 29ರ ಬೆಳಗ್ಗೆ 6ರ ವರೆಗೆ ನೀರು ಪೂರೈಕೆ ಇಲ್ಲ ಎಂದು ಪಾಲಿಕೆ ಹೇಳಿದ್ದು ನಗರದ ಜನರು ಸಹಕರಿಸುವಂತೆ ಕೇಳಿಕೊಂಡಿದೆ. ಈಗಾಗಲೇ ನಗರದ ಕೆಲವು ಕಡೆ ನೀರಿನ ಲಭ್ಯತೆ ಇಲ್ಲ. ಸರಿಪಲ್ಲ, ಮರೋಳಿ, ಕುಲಶೇಖರ, ಅಶೋಕನಗರ ಸೇರಿದಂತೆ ಎತ್ತರದ ಜಾಗಕ್ಕೆ ನೀರಿನ ಪೂರೈಕೆ ಆಗುತ್ತಿಲ್ಲ. ಈಗ ಎರಡು ದಿನ ನೀರು ಪೂರೈಕೆ ಕಡಿತ ಮಾಡಿ, ಅಣೆಕಟ್ಟಿನಲ್ಲಿ ನೀರು ಹಿಡಿದಿಡುವ ಪ್ರಯತ್ನಕ್ಕೆ ಪಾಲಿಕೆ ಮುಂದಾಗಿದೆ. ಎತ್ತಿನಹೊಳೆ ಯೋಜನೆಗಾಗಿ ಪಶ್ಚಿಮ ಘಟ್ಟಗಳನ್ನು ಕಡಿದು ಹಾಕಿರುವುದು, ಅದರಿಂದಾಗಿ ಶೋಲಾ ಕಾಡುಗಳ ನಾಶ ಆಗಿರುವುದು ನೇತ್ರಾವತಿ ನದಿ ಬರಡಾಗಲು ಕಾರಣ. ಕಳೆದೆರಡು ವರ್ಷಗಳಲ್ಲಿ ಬೇಸಗೆ ಮಳೆಯಾಗಿದ್ದರಿಂದ ನೀರಿನ ಸಮಸ್ಯೆ ಕಂಡುಬಂದಿರಲಿಲ್ಲ. ಈ ಬಾರಿ ಬೇಸಗೆ ಮಳೆ ಆಗದೇ ಇರುವುದು ಮಂಗಳೂರಿನ ಜನರಿಗೆ ನೇತ್ರಾವತಿ ಶಾಪ ತಟ್ಟುವ ಸಾಧ್ಯತೆಯಿದೆ.
Pipe line repair, No MCC Water Supply in Mangalore for Two Days from April 27 to 29. The Mangalore city corporation will carry out maintenance work, including Header replacement work at LLPS – 1 and 1200 MM pipe repair work at the Thumbay High Lifting Pump Station – 2 -80MLD.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 09:06 pm
Mangalore Correspondent
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm