ಬ್ರೇಕಿಂಗ್ ನ್ಯೂಸ್
28-04-23 12:39 pm Udupi Correspondent ಕರಾವಳಿ
ಉಡುಪಿ, ಎ.28: ಮೀನು ಮುಟ್ಟಿದ್ದೇನೆಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದೇವಸ್ಥಾನ ಒಳಗೆ ಹೋಗಲು ನಿರಾಕರಿಸಿದ ಘಟನೆ ಕಾಪು ವಿಧಾನಸಭೆ ಕ್ಷೇತ್ರದ ಉಚ್ಚಿಲದಲ್ಲಿ ನಡೆದಿದ್ದು ರಾಹುಲ್ ನಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ನಿನ್ನೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಕಾಪು, ಉಚ್ಚಿಲದಲ್ಲಿ ಮೀನುಗಾರರ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ, ಮೀನುಗಾರ ಮಹಿಳೆಯೊಬ್ಬರು ದೊಡ್ಡ ಗಾತ್ರದ ಅಂಜಲ್ ಮೀನನ್ನು ರಾಹುಲ್ ಗಾಂಧಿಗೆ ಗಿಫ್ಟ್ ಕೊಟ್ಟಿದ್ದರು. ಮೀನು ಪಡೆದ ರಾಹುಲ್, ಬಳಿಕ ಅದನ್ನು ತನ್ನೊಂದಿಗಿದ್ದ ಕೇರಳದ ಸಂಸದರೊಬ್ಬರಿಗೆ ನೀಡಿದ್ದರು. ಸಮಾವೇಶ, ಸಂವಾದ ಮುಗಿದ ಬಳಿಕ ಸ್ಥಳೀಯ ಮುಖಂಡರು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕರೆದೊಯ್ದಿದ್ದರು.


ದೇವಸ್ಥಾನ ಮುಂಭಾಗಕ್ಕೆ ತೆರಳಿದ ಒಳ ಆವರಣಕ್ಕೆ ಬರಲು ಒಪ್ಪಲಿಲ್ಲ. ಕೈಯಲ್ಲಿ ಮೀನು ಮುಟ್ಟಿದ್ದೇನೆ, ಮೈಲಿಗೆ ಆಗೋದು ಬೇಡವೆಂದು ಹೊರಗೆ ನಿಂತು ಬಿಟ್ಟರು. ಬಳಿಕ ಅರ್ಚಕರು ಹೊರಗೆ ಬಂದು ದೇವರ ಪ್ರಸಾದ, ಆರತಿ ಕೊಟ್ಟರಲ್ಲದೆ ಶಾಲು ಹೊದಿಸಿ ಸನ್ಮಾನವನ್ನೂ ಮಾಡಿದರು. ಭಾರತ್ ಜೋಡೊ ಮೂಲಕ ಸರ್ವ ಧರ್ಮಗಳ ಸಾಮರಸ್ಯಕ್ಕೆ ಶ್ರಮಿಸಿದ ರಾಹುಲ್ ಗಾಂಧಿಯೆಂದು ವಿಶೇಷವಾಗಿ ಉಲ್ಲೇಖಿಸಿ ಮಹಾಲಕ್ಷ್ಮಿ ದೇವರ ಕೃಪೆ ಸಿಗಲೆಂದು ಹಾರೈಸಿದರು.



ರಾಹುಲ್ ಗಾಂಧಿ ಮೀನು ಮುಟ್ಟಿದ ನೆಪದಲ್ಲಿ ದೇವಸ್ಥಾನ ಒಳಗೆ ಹೋಗಲು ನಿರಾಕರಿಸಿದ ವಿಚಾರ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೀಡಾಗಿದೆ. ಅಲ್ಲದೆ, ಇದರ ವಿಡಿಯೋ ವೈರಲ್ ಆಗಿದ್ದು ಪ್ರಶಂಸೆಗೂ ಕಾರಣವಾಗಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಮೀನು ತಿಂದು ಧರ್ಮಸ್ಥಳಕ್ಕೆ ಹೋಗಿದ್ದು ವ್ಯಾಪಕ ವಿರೋಧ, ಚರ್ಚೆಗೆ ಕಾರಣವಾಗಿತ್ತು. ಈ ಬಾರಿ ಕಾಂಗ್ರೆಸ್ ಮುಖಂಡರು ಅಂತಹ ಸೂಕ್ಷ್ಮ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಇಟ್ಟಿದ್ದಾರೆ. ಈ ನಡುವೆ, ರಾಷ್ಟ್ರೀಯ ಮುಖಂಡ, ಪಪ್ಪುವೆಂದು ವಿಪಕ್ಷ ನಾಯಕರಿಂದ ಟೀಕೆಗೆ ಒಳಗಾದ ರಾಹುಲ್ ಗಾಂಧಿ ಕರಾವಳಿಯಲ್ಲಿ ಇಲ್ಲಿನ ಸಂಪ್ರದಾಯಕ್ಕೆ ಚ್ಯುತಿ ಬರದಂತೆ ನಡೆದುಕೊಂಡಿದ್ದು ಪ್ರಶಂಸೆಗೆ ಕಾರಣವಾಗಿದೆ.
Congress leader Rahul Gandhi refused to enter the Mahalakshmi temple as he had touched a fish gifted to him by a woman from the fisherwoman community. The incident took place during Rahul's visit to Sri Mahalakshmi temple here in Uchila on Thursday April 27.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm