ಬ್ರೇಕಿಂಗ್ ನ್ಯೂಸ್
29-04-23 02:58 pm Mangaluru Correspondent ಕರಾವಳಿ
ಪುತ್ತೂರು, ಎ.29: ಪುತ್ತೂರಿನಲ್ಲಿ ಅಭ್ಯರ್ಥಿ ಆಯ್ಕೆಯನ್ನು ಯಾರೋ ಇಬ್ಬರು ಕುಳಿತು ಮಾಡಿದ್ದಲ್ಲ. ಪಕ್ಷದ ಶಕ್ತಿಕೇಂದ್ರದಿಂದ ಹಿಡಿದು ಚುನಾವಣಾ ಸಮಿತಿ, ಸಂಸದೀಯ ವರೆಗೂ ವಿಶ್ಲೇಷಣೆ ಮಾಡುತ್ತದೆ. ಕೊನೆಯದಾಗಿ ಪ್ರಧಾನಿ ಮೋದಿಯೇ ಅಭ್ಯರ್ಥಿ ಆಯ್ಕೆ ಮಾಡೋದು. ಕಾಂಗ್ರೆಸಿನ ಹಾಗೆ ಒಂದಿಬ್ಬರು ಕುಳಿತು ಮಾಡುವ ಪ್ರಕ್ರಿಯೆ ಅಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷ 1960 ರ ಕಾಲದ ಹಳೆ ಟೇಪ್ ರೆಕಾರ್ಡಿಂಗ್ ಇದ್ದಹಾಗೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಲ್ಲಿ ಈ ಕಾನೂನು ವಾಪಾಸು ಪಡೀತೆನೆ, ಆ ಕಾನೂನು ಮಾಡಲು ಬಿಡೋದಿಲ್ಲ ಎನ್ನುತ್ತಿದೆ. ಇದೇ ಕಾರಣಕ್ಕೆ ಗೃಹಮಂತ್ರಿ ಅಮಿತ್ ಶಾ ಕಾಂಗ್ರೆಸ್ ಪಕ್ಷವನ್ನು ರಿವರ್ಸ್ ಗೇರ್ ಗೆ ಹೋಲಿಸಿದ್ದು, ಕಾಂಗ್ರೆಸ್ ರಿವರ್ಸ್ ಗೇರ್ ಹಾಕಿ ಓಡುತ್ತಿದೆ.
ಆದರೆ ಬಿಜೆಪಿ ಡಬಲ್ ಇಂಜಿನ್ ಮೂಲಕ ಮುಂದಕ್ಕೆ ಓಡುತ್ತಿದೆ. ಇದೇ ಕಾಂಗ್ರೆಸ್ ಮತ್ತು ಬಿಜೆಪಿಗೆ ಇರುವ ವ್ಯತ್ಯಾಸ. ರಾಜ್ಯಕ್ಕೆ ಪ್ರಿಯಾಂಕ ಗಾಂಧಿಯವರನ್ನು ಕರೆಸಿ ದೋಸೆ ಮಾಡಿಸಿದ ಮಾತ್ರಕ್ಕೆ ಇಲ್ಲಿನ ಜನ ಮತ ಹಾಕಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರ ಗೆಲುವು ನಿಶ್ಚಿತ. ಸಂಘಟನೆಯಲ್ಲಿ ಕೆಲಸ ಮಾಡಿದ ಆಧಾರದಲ್ಲಿ ಆಶಾ ತಿಮ್ಮಪ್ಪ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಬಿಜೆಪಿಯಲ್ಲಿ ಕಾಂಗ್ರೆಸ್ ಪಕ್ಷದಂತೆ ಕೇವಲ ಇಬ್ಬರು ಕುಳಿತು ಅಭ್ಯರ್ಥಿಯನ್ನು ಆಯ್ಕೆ ಮಾಡುವ ವ್ಯವಸ್ಥೆಯಿಲ್ಲ.
ತಳಮಟ್ಟದ ಶಕ್ತಿಕೇಂದ್ರ, ಜಿಲ್ಲಾ ಕೇಂದ್ರ, ರಾಜ್ಯ ಚುನಾವಣಾ ಸಮಿತಿ, ಕೇಂದ್ರ ಚುನಾವಣಾ ಸಮಿತಿ, ಪಾರ್ಲಿಮೆಂಟರಿ ಸಮಿತಿ ಚರ್ಚೆ ನಡೆಸಿದ ಬಳಿಕ ಪ್ರಧಾನಿ ಮೋದಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತಗೊಳಿಸುತ್ತಾರೆ ಎಂದರು. ಗೆಲ್ಲುವ ಪಕ್ಷದಲ್ಲಿ ಆಕಾಂಕ್ಷಿಗಳು ಇರೋದು ಸಾಮಾನ್ಯವಾಗಿದ್ದು, ಪುತ್ತೂರಿನಲ್ಲೂ ಈ ಬಾರಿ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ. ಪಕ್ಷ ಎಲ್ಲರಿಗೂ ಸ್ಥಾನಮಾನವನ್ನು ಕೊಡುತ್ತೆ, ಆದರೆ ಸ್ವಲ್ಪ ಸಮಾಧಾನದಲ್ಲಿ ಕಾಯಬೇಕು ಎಂದ ಅವರು ಯುವಜನತೆಗೆ ಬಿಜೆಪಿ ಖಂಡಿತವಾಗಿಯೂ ಅವಕಾಶ ನೀಡುತ್ತದೆ ಎಂದರು
BJP President of Tamil Nadu K Annamalai in Puttur, Candidate Asha Thimmappa Gowda is selected by PM Modi to contest not like congress that selects its candidates by some state leaders he slammed.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm