ಬ್ರೇಕಿಂಗ್ ನ್ಯೂಸ್
27-10-20 06:33 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 27 : ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊನೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಮೇಲಿನಿಂದ ಕಂಟೇನರ್ ಲಾರಿ ಹರಿದು ಬೈಕಿನಲ್ಲಿದ್ದ ದಂಪತಿ ದುರಂತ ಸಾವು ಕಂಡಿದ್ದಾರೆ. ಹಿಂಬದಿ ಸವಾರೆಯಾಗಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬೈಕ್ ಸವಾರಿ ಮಾಡುತ್ತಿದ್ದ ಯುವಕ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ರಾಯನ್ ಫೆರ್ನಾಂಡಿಸ್ (35) ಮತ್ತು ಅವರ ಪತ್ನಿ ಪ್ರಿಯಾ ಫೆರ್ನಾಂಡಿಸ್ (32) ಮೃತರು ಎಂದು ತಿಳಿದು ಬಂದಿದೆ. ಪ್ರಿಯಾ ಅವರನ್ನು ರಾಯನ್ ತಮ್ಮ ಕೆಟಿಎಂ ಬೈಕಿನಲ್ಲಿ ಪಿಕ್ ಮಾಡಿ ಮನೆಗೆ ಬರುತ್ತಿದ್ದರು. ತೊಕ್ಕೊಟ್ಟು ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ತಿರುವು ಪಡೆಯಲು ನಿಂತಿದ್ದ ವೇಳೆ ಬಲಭಾಗದಿಂದ ಬಂದ ಕಂಟೇನರ್ ಲಾರಿ ಬೈಕ್ ಮೇಲಿನಿಂದ ಹರಿದುಕೊಂಡು ಹೋಗಿದೆ. ನೋಡ ನೋಡುತ್ತಲೇ ಭೀಕರ ಅಪಘಾತ ನಡೆದಿದ್ದು ಮಹಿಳೆ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ರಾಯನ್ ಮತ್ತು ಪ್ರಿಯಾ ಮಂಗಳೂರಿನ ಬಜಾಲ್ ನಿವಾಸಿಗಳಾಗಿದ್ದು ವಾರದ ಹಿಂದಷ್ಟೇ ಉಳ್ಳಾಲಕ್ಕೆ ನಿವಾಸ ಬದಲಾಯಿಸಿದ್ದರು. ರಾಯನ್ ಮತ್ತು ಪ್ರಿಯಾ ಇಬ್ಬರೂ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದರು.



ಮೇಲ್ಸೇತುವೆ ಕೊನೆಯಲ್ಲಿ ಉಳ್ಳಾಲಕ್ಕೆ ಟರ್ನ್ ಆಗುವ ಪಾಯಿಂಟ್ ಅಪಘಾತಕ್ಕೆ ಕಾರಣವಾಗುತ್ತಿದ್ದು ಕಳೆದ ಒಂದು ತಿಂಗಳಲ್ಲಿ ಹಲವಾರು ಅಪಘಾತಗಳಾಗಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Lorry rams on bike couple riders dies on spot near Thokuttu, Mangalore Bridge on Tuesday, October 27, 2020. The Deceased have been identified as Rayan and Priya residents of Bajal.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am