ಎಲ್ಲ ಹಿಂದು ಕಾರ್ಯಕರ್ತರ ಹತ್ಯೆ ಬಗ್ಗೆ ಎನ್ಐಎ ತನಿಖೆ ನಡೆಸಿ ; ದೇಶದ್ರೋಹ ಪ್ರಕರಣದ ಆರೋಪಿ ಚುನಾವಣೆ ನಿಂತಿದ್ದನ್ನು ಸಹಿಸಲ್ಲ 

04-05-23 07:18 pm       Mangalore Correspondent   ಕರಾವಳಿ

ಪ್ರವೀಣ್ ನೆಟ್ಟಾರು ಪ್ರಕರಣದ ರೀತಿಯಲ್ಲೇ ಹತ್ಯೆ ಹಿಂದಿನ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ. 

ಪುತ್ತೂರು, ಮೇ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಎಲ್ಲ ಹಿಂದು ಕಾರ್ಯಕರ್ತರ ಕೊಲೆ ಪ್ರಕರಣದ ಬಗ್ಗೆ ಎನ್ಐಎ ತಂಡದಿಂದ ತನಿಖೆ ಮಾಡಬೇಕು. ಪ್ರವೀಣ್ ನೆಟ್ಟಾರು ಪ್ರಕರಣದ ರೀತಿಯಲ್ಲೇ ಹತ್ಯೆ ಹಿಂದಿನ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ. 

ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರಣ್ ಪಂಪ್ವೆಲ್, ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಎನ್ಐಎ ತನಿಖೆ ನಡೆಸಿದ್ದರಿಂದ ನೈಜ ಆರೋಪಿಗಳ ಬಂಧನ ಆಗಿದೆ. ಆದರೆ ಜೈಲಿನಲ್ಲಿರುವ ಆರೋಪಿಯನ್ನೇ ಪುತ್ತೂರಿನಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ. ಇದಕ್ಕೆ ಚುನಾವಣೆ ಆಯೋಗ ಅವಕಾಶ ನೀಡಿದ್ದು ಹೇಗೆ? ದೇಶದ್ರೋಹ ಕಾಯ್ದೆಯಡಿ ಬಂಧಿಸಲ್ಪಟ್ಟ ವ್ಯಕ್ತಿಯನ್ನು ಚುನಾವಣೆಗೆ ನಿಲ್ಲಿಸಿ ಇವರು ಯಾವ ರೀತಿಯ ಸಂದೇಶ ಕೊಡುತ್ತಿದ್ದಾರೆ ಎಂದು ಶರಣ್ ಪ್ರಶ್ನಿಸಿದರು. 

ದ.ಕ. ಜಿಲ್ಲೆಯಲ್ಲಿ ಪ್ರಶಾಂತ್ ಪೂಜಾರಿ, ದೀಪಕ್ ರಾವ್, ಶರತ್ ಮಡಿವಾಳ ಸೇರಿದಂತೆ ಕೊಲೆಯಾದ ಎಲ್ಲ ಹಿಂದು ಕಾರ್ಯಕರ್ತರ ಪ್ರಕರಣದ ತನಿಖೆಯಾಗಬೇಕು. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಯಾವ ರೀತಿಯ ತನಿಖೆಯಾಗಿದೆ , ಅದೇ ರೀತಿಯ ತನಿಖೆ ಉಳಿದ ಪ್ರಕರಣಗಳಲ್ಲೂ ಆಗಬೇಕು. ಪಿಎಫ್ಐ ಸಂಘಟನೆ ನಿಷೇಧಕ್ಕಾಗಿ ವಿಶ್ವ ಹಿಂದು ಪರಿಷತ್ ನಿರಂತರವಾಗಿ ಪ್ರತಿಭಟನೆಯನ್ನು ಮಾಡಿತ್ತು. ಕಡೆಗೂ ಕೇಂದ್ರ ಸರಕಾರ ಪಿಎಫ್ಐ ನಿಷೇಧ ಮಾಡಿದೆ. ನಿಷೇಧ ನಮ್ಮ ಪಾಲಿಗೆ ಸಿಕ್ಕಿದ ಜಯ. ಆದರೆ ಇದೀಗ ನಿಷೇಧಿತ ಸಂಘಟನೆಯ ಆರೋಪಿಯೇ ಚುನಾವಣೆಗೆ ಸ್ಪರ್ಧಿಸುತ್ತಿರುವುದನ್ನು ನಾವು ಸಹಿಸಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.

Praveen Nettaru prime accused to contest from SDPI in Jail, Sharan Pumpwell slams Election commission in Puttur.