ಬ್ರೇಕಿಂಗ್ ನ್ಯೂಸ್
04-05-23 10:52 pm HK News Desk ಕರಾವಳಿ
ಪುತ್ತೂರು, ಮೇ 4: ಪುತ್ತೂರಿನಲ್ಲಿ ದಿನದಿಂದ ದಿನಕ್ಕೆ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಪರ ಜನ ಬೆಂಬಲ ಹೆಚ್ಚುತ್ತಿದೆ. ಬುಧವಾರ ಸಂಜೆ ವಿಟ್ಲದಲ್ಲಿ ನಡೆಸಿದ ರೋಡ್ ಶೋದಲ್ಲಿ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಸೇರಿದ್ದು, ಇತಿಹಾಸದಲ್ಲಿ ದಾಖಲಾಯಿತು. ವಿಟ್ಲ ಪೇಟೆಯಲ್ಲಿ ಎರಡು ಕಿಮೀ ಉದ್ದಕ್ಕೆ ನಡೆದ ರೋಡ್ ಶೋದಲ್ಲಿ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದು, ಕೇಸರಿ ಕಲರವ ಮೂಡಿಸಿತ್ತು.
ವಿಟ್ಲ ಮುಖ್ಯ ಪೇಟೆಯಲ್ಲಿ ಕಾರ್ಯಕರ್ತರ ಮತ್ತು ಅರುಣ್ ಪುತ್ತಿಲರ ರೋಡ್ ಶೋ ಮುಗಿದು ಅರಮನೆ ಗದ್ದೆಯಲ್ಲಿ ಸಂಜೆ ಹೊತ್ತಿಗೆ ಸಮಾವೇಶ ನಡೆಯಿತು. ರೋಡ್ ಶೋದಲ್ಲಿ ಬೇರಾವುದೇ ಭಾಷಣಕಾರರು ಇರಲಿಲ್ಲ. ಸ್ಟಾರ್ ಕ್ಯಾಂಪೇನರ್ ಕೂಡ ಇರಲಿಲ್ಲ. ಅರುಣ್ ಪುತ್ತಿಲರೇ ಎಲ್ಲರಿಗೂ ಸ್ಟಾರ್ ಆಗಿದ್ದರು.


ಸಮಾವೇಶ ಉದ್ದೇಶಿಸಿ ಮಾತನಾಡಿದ ಅರುಣ್ ಪುತ್ತಿಲ, ಅಧಿಕಾರಕ್ಕಾಗಿ ಆಸೆ ಪಟ್ಟವನಲ್ಲ. ಕಾಂಗ್ರೆಸ್ ಹಾಗೂ ಎಸ್ಡಿಪಿಐ ವಿರುದ್ಧ ಹೋರಾಟದ ಭಾಗವಾಗಿ ಕಣಕ್ಕಿಳಿಯಬೇಕೆಂಬ ಕಾರ್ಯಕರ್ತರ ಆಶಯದಂತೆ ಸ್ಪರ್ಧಿಸುತ್ತಿದ್ದೇನೆ. ಇದರ ಹೊರತಾಗಿ ಯಾವುದೇ ಪಕ್ಷದ ವಿರುದ್ಧ ಹೋರಾಟ ಇದಲ್ಲ ಎಂದು ಹೇಳಿದರು. ಸೌಮ್ಯಾ ಭಟ್, ಅಕ್ಷತಾ ಕೊಲೆ ಪ್ರಕರಣ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ನಮ್ಮ ಕಣ್ಣ ಮುಂದೆ ಹಾದು ಬರುತ್ತದೆ. ಹಿಂದುತ್ವದ ಹೆಸರಿನಲ್ಲಿ ಸ್ಪರ್ಧಿಸುತ್ತಿದ್ದೇನೆ. ಆರೆಸ್ಸೆಸ್ ಹಿರಿಯರು, ಮಠಾಧೀಶರು, ಸಂಘ ಪರಿವಾರದ ಕಾರ್ಯಕರ್ತರ ಆಶಯದಂತೆ ಸ್ಪರ್ಧಿಸುತ್ತಿದ್ದೇನೆ. ನೀವೆಲ್ಲ ನನ್ನ ಜೊತೆಗಿದ್ದೀರೆಂದು ನಂಬಿಕೊಂಡಿದ್ದೇನೆ ಎಂದು
ಭಾವುಕರಾದರು.
ಸಮಾವೇಶದಲ್ಲಿ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಧರ್ಮ- ಅಧರ್ಮದ ನಡುವಿನ ಹೋರಾಟ ಇದೆಂದು ಭಾಸವಾಗುತ್ತಿದೆ. ಪಕ್ಷದ ಪ್ರಮುಖರು ಅವರ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದು ಬಿಟ್ಟು ಅರುಣ್ ಪುತ್ತಿಲರ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇದು ಬೇಸರದ ಸಂಗತಿ. ಅರುಣ ಪುತ್ತಿಲರಿಗೆ ದೊರಕಿದ ಅಪಾರ ಪ್ರಮಾಣದ ಜನಬೆಂಬಲ ನೋಡಿದಾಗ ಅಚ್ಚರಿಯಾಗುತ್ತದೆ. ಇದೇ ರೀತಿಯ ಜನಬೆಂಬಲ ನಾಡಿದ್ದು ಮತದಾನ ದಿನಕ್ಕೆ ಮತಗಳಾಗಿ ಪರಿವರ್ತನೆ ಆಗಬೇಕು ಎಂದು ಹೇಳಿದರು.
Arun Puthila star campaign in Vitla, thousands join hands in Road show. Arun Puthila himself campaigned as star campaigner.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm