ಬ್ರೇಕಿಂಗ್ ನ್ಯೂಸ್
06-05-23 09:14 pm Mangalore Correspondent ಕರಾವಳಿ
ಉಳ್ಳಾಲ, ಮೇ 6 : ದೇಶದಲ್ಲಿ ಮಹಿಳೆಯರಿಗೆ ಸ್ಥಾನ, ಮಾನ ಕೊಟ್ಟದ್ದು ಬಿಜೆಪಿ ಮಾತ್ರ. ಕಾಂಗ್ರೆಸ್ ಇಟಲಿಯ ರಾಣಿಯನ್ನೇ ನಂಬಿಕೊಂಡಿದ್ದು, ಮೇ 8ರಂದು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವಾನತಿ ಶ್ರೀನಿವಾಸನ್ ಅವರು ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಧನಲಕ್ಷ್ಮಿ ಗಟ್ಟಿ ಹೇಳಿದ್ದಾರೆ.
ಕುತ್ತಾರು ಪಂಡಿತ್ ಹೌಸ್ನ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನ ಮೇ 8ರಂದು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ಕೊಯಮತ್ತೂರಿನ ಶಾಸಕಿ ವಾನತಿ ಶ್ರೀನಿವಾಸನ್ ಅವರು ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಪಕ್ಷದ ಅಭ್ಯರ್ಥಿ ಸತೀಶ್ ಕುಂಪಲ ಪರ ಮತಯಾಚನೆ ನಡೆಸಲಿದ್ದಾರೆ. ಮೇ 8ರಂದು ಬೆಳಗ್ಗೆ ಜಿಲ್ಲೆಯಾದ್ಯಂತ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವಕೀಲೆಯಾಗಿರುವ ವಾನತಿ ಶ್ರೀನಿವಾಸನ್ ಅವರು ಮಧ್ಯಾಹ್ನ ಮಂಗಳೂರಿನಲ್ಲಿ ವಕೀಲರೊಂದಿಗೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನದ ಬಳಿಕ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ಗಣೇಶ ಮಂದಿರದಿಂದ ಒಳಪೇಟೆಯ ಅಂಬೇಡ್ಕರ್ ಮೈದಾನದ ವರೆಗೆ ಮಹಿಳೆಯರೊಂದಿಗೆ ಕಾಲ್ನಡಿಗೆ ಜಾಥಾದಲ್ಲಿ ಅವರು ಭಾಗವಹಿಸಲಿದ್ದಾರೆಂದು ಹೇಳಿದರು.
ಬಿಜೆಪಿ ರಾಜ್ಯದಲ್ಲಿ 12 ಮಹಿಳೆಯರಿಗೆ ವಿದಾನಸಭೆ ಚುನಾವಣೆಗೆ ಸ್ಫರ್ಧಿಸಲು ಟಿಕೆಟ್ ಕೊಟ್ಟಿದ್ದು ದ.ಕ ದಲ್ಲೂ ಆಶಾ ತಿಮ್ಮಪ್ಪ ಗೌಡ ಮತ್ತು ಭಾಗೀರಥಿಯವರಿಗೆ ಸ್ಥಾನ ಕಲ್ಪಿಸಿ ಕೊಟ್ಟಿದೆ. ನಾರಿಯರಿಗೆ ಸಮ್ಮಾನ ಅಂತ ವಿರೋಧ ಪಕ್ಷಗಳು ಬಾಯಲ್ಲಿ ಬೊಗಳಿದ್ದು ಬಿಟ್ಟರೆ ಅದನ್ನ ಕಾರ್ಯರೂಪಕ್ಕೆ ತಂದದ್ದು ಬಿಜೆಪಿ ಮಾತ್ರ ಎಂದರು.
ಮೇ 8ರಂದು ತೊಕ್ಕೊಟ್ಟು ಅಂಬೇಡ್ಕರ್ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಕಾಂಗ್ರೆಸ್ ನಿಂದ ನೊಂದ ಪ್ರಮುಖ ಸಹೋದರಿಯರು ವಾನತಿ ಶ್ರೀನಿವಾಸನ್ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರಲಿದ್ದಾರೆ ಎಂದರು.
ಮಾತಿನಲ್ಲೇ ನಾರಿ ಸಮಾನತೆಯನ್ನ ಹೇಳುವ ಕಾಂಗ್ರೆಸಿನವರು ಪರಕೀಯ ಇಟಲಿ ರಾಣಿಯನ್ನೇ ನಂಬಿ ಬದುಕುತ್ತಿದ್ದಾರೆ. ಬಿಜೆಪಿ ಸರಕಾರ ರಾಷ್ಟ್ರಪತಿ ಹುದ್ದೆಯನ್ನೇ ಆದಿವಾಸಿ ದ್ರೌಪದಿ ಮುರ್ಮುಗೆ ಕೊಡುವುದರ ಮೂಲಕ ನಾರಿ ಶಕ್ತಿಯನ್ನ ಜಾಗತಿಕ ಮಟ್ಟದಲ್ಲಿ ಮೇಳೈಸುವಂತೆ ಮಾಡಿದೆ ಎಂದರು. ಬಿಜೆಪಿ ಕ್ಷೇತ್ರ ಚುನಾವಣಾ ಉಸ್ತುವಾರಿ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಪ್ರಮುಖರಾದ ಹೇಮಂತ್ ಶೆಟ್ಟಿ, ದಿವ್ಯಾ ಶೆಟ್ಟಿ, ಸಪ್ನಾ ಶೆಟ್ಟಿ, ರಮಣಿ ಸೋಮೇಶ್ವರ, ಶಶಿಕಲಾ ಗಟ್ಟಿ ಮೊದಲಾದವರು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
It was only the BJP that gave women a place and dignity in the country. Bjp Mahila Morcha district president Dhanalakshmi Gatti said the Congress relies on the Queen of Italy and on May 8, BJP Mahila Morcha national president Vanathi Srinivasan will campaign on foot in Ullal.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm