ಬ್ರೇಕಿಂಗ್ ನ್ಯೂಸ್
06-05-23 10:42 pm Mangalore Correspondent ಕರಾವಳಿ
ಬಂಟ್ವಾಳ, ಮೇ 6: ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರವಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅದ್ದೂರಿ ರೋಡ್ ಶೋ ನಡೆಸಿದ್ದಾರೆ. ಬಿಸಿ ರೋಡ್ ಪೇಟೆಯಲ್ಲಿ ನಡೆದ ರೋಡ್ ಶೋದಲ್ಲಿ ಕೇಸರಿ ಕಾರ್ಯಕರ್ತರ ಹೆದ್ದೆರೆಯೇ ಕಾಣಿಸಿಕೊಂಡಿದ್ದು ಸಾವಿರಾರು ಕಾರ್ಯಕರ್ತರು ಸೇರಿ ಸಂಭ್ರಮಿಸಿದ್ದಾರೆ.
ಪೊಳಲಿ ರಾಜರಾಜೇಶ್ವರಿ ದೇವಿಗೆ ನನ್ನ ನಮನ. ಕಟೀಲು ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿಗೆ ಕೋಟಿ ಕೋಟಿ ನಮಸ್ಕಾರಗಳು. ಪರಶುರಾಮನ ಭೂಮಿಗೆ ಕೋಟಿ ಕೋಟಿ ನಮನ ಎನ್ನುತ್ತಲೇ ಭಾಷಣ ಆರಂಭಿಸಿದ ಯೋಗಿ ಆದಿತ್ಯನಾಥ್, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ವಿಕಾಸದ ಮೂಲಕ ನಿಮ್ಮ ಮುಂದೆ ಬಂದಿದೆ. ಕಾಂಗ್ರೆಸ್ ರಾಷ್ಟ್ರ ವಿರೋಧಿ ಮತ್ತು ನಕಾರಾತ್ಮಕ ವಿಷಯಗಳ ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ. ಇವತ್ತು ಭಾರತವನ್ನು ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಪಡಿಸಲಾಗ್ತಿದೆ. ಇದಕ್ಕಾಗಿ ಕ್ಷೇತ್ರದ ಜನತೆ ಬಿಜೆಪಿಗೆ ಮತ ನೀಡಬೇಕಾಗಿದೆ ಎಂದರು.


ಕಾಂಗ್ರೆಸ್ ಸರ್ಕಾರ ಬಂದ್ರೆ ಭಜರಂಗದಳ ಬ್ಯಾನ್ ಮಾಡ್ತೀವಿ ಅಂದಿದಾರೆ. ಭಜರಂಗದಳ ಒಂದು ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ. ಭಜರಂಗದಳ ರಾಷ್ಟ್ರವಾದಿ ಸಂಘಟನೆ, ಕರ್ನಾಟಕದ ಜನರು ಇದನ್ನ ಒಪ್ಪಲ್ಲ. ಇದೇ ವೇಳೆ, ಕಾಂಗ್ರೆಸ್ ರಾಷ್ಟ್ರ ವಿರೋಧಿ ಸಂಘಟನೆ ಪಿಎಫ್ಐಯನ್ನು ಪ್ರೋತ್ಸಾಹಿಸುತ್ತದೆ. ಎರಡು ತದ್ವಿರುದ್ಧ ವಿಚಾರಗಳ ಬಗ್ಗೆ ಜನರು ಗಮನ ಹರಿಸಬೇಕು ಎಂದರು.


ವಿಧಾನಸಭೆ ಚುನಾವಣೆಯಲ್ಲಿ ರಾಜೇಶ್ ನಾಯ್ಕ್ ರನ್ನ ಗೆಲ್ಲಿಸಬೇಕು ಯಾಕಂದ್ರೆ, ಅಭಿವೃದ್ಧಿ ಮತ್ತು ರಾಷ್ಟ್ರವಾದ ಗೆಲ್ಲಬೇಕಾಗಿದೆ. ಶ್ರೀರಾಮನ ಜನ್ಮಸ್ಥಳದಿಂದ ಹನುಮನ ಜನ್ಮಸ್ಥಳಕ್ಕೆ ನಾನು ಬಂದಿದ್ದೇನೆ. ಜನವರಿಯಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಆಗಲಿದೆ. ಭಜರಂಗಿಬಲಿ ಜನ್ಮಸ್ಥಳದ ಕರ್ನಾಟಕದ ಜನರಿಗೆ ಈಗಲೇ ಆಮಂತ್ರಣ ನೀಡ್ತಾ ಇದೀನಿ. ಇಡೀ ಉತ್ತರ ಪ್ರದೇಶ ನಿಮ್ಮನ್ನ ರಾಮನ ಜನ್ಮಭೂಮಿಗೆ ಸ್ವಾಗತಿಸುತ್ತದೆ ಎಂದು ಹೇಳಿದರು.


ರೋಡ್ ಶೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಇದ್ದರು. ರೋಡ್ ಶೋ ಸಲುವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಲ್ಲಿಸಲಾಗಿತ್ತು. ಕೈಕಂಬ ದ್ವಾರದ ವರೆಗೂ ಜಾಥಾ ನಡೆದು ಬಂತು. ಭಾರೀ ಸಂಖ್ಯೆಯಲ್ಲಿ ಕೇಸರಿ ಕಾರ್ಯಕರ್ತರು ಸೇರಿದ್ದು ಹಿಂದು ಹೆದ್ದೆರೆ ಎದ್ದು ನಿಂತಂತೆ ಕಂಡಿತ್ತು.
Uttar Pradesh (UP) chief minister (CM) Yogi Adityanath campaigned for BJP candidates in Puttur, Bantwal and Karkala on Saturday May 6. He campaigned for Asha Thimmappa Gowda in Puttur. A massive road show started from Shri Mahalingeshwara Temple.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm