ಬ್ರೇಕಿಂಗ್ ನ್ಯೂಸ್
06-05-23 10:42 pm Mangalore Correspondent ಕರಾವಳಿ
ಬಂಟ್ವಾಳ, ಮೇ 6: ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರವಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅದ್ದೂರಿ ರೋಡ್ ಶೋ ನಡೆಸಿದ್ದಾರೆ. ಬಿಸಿ ರೋಡ್ ಪೇಟೆಯಲ್ಲಿ ನಡೆದ ರೋಡ್ ಶೋದಲ್ಲಿ ಕೇಸರಿ ಕಾರ್ಯಕರ್ತರ ಹೆದ್ದೆರೆಯೇ ಕಾಣಿಸಿಕೊಂಡಿದ್ದು ಸಾವಿರಾರು ಕಾರ್ಯಕರ್ತರು ಸೇರಿ ಸಂಭ್ರಮಿಸಿದ್ದಾರೆ.
ಪೊಳಲಿ ರಾಜರಾಜೇಶ್ವರಿ ದೇವಿಗೆ ನನ್ನ ನಮನ. ಕಟೀಲು ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿಗೆ ಕೋಟಿ ಕೋಟಿ ನಮಸ್ಕಾರಗಳು. ಪರಶುರಾಮನ ಭೂಮಿಗೆ ಕೋಟಿ ಕೋಟಿ ನಮನ ಎನ್ನುತ್ತಲೇ ಭಾಷಣ ಆರಂಭಿಸಿದ ಯೋಗಿ ಆದಿತ್ಯನಾಥ್, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ವಿಕಾಸದ ಮೂಲಕ ನಿಮ್ಮ ಮುಂದೆ ಬಂದಿದೆ. ಕಾಂಗ್ರೆಸ್ ರಾಷ್ಟ್ರ ವಿರೋಧಿ ಮತ್ತು ನಕಾರಾತ್ಮಕ ವಿಷಯಗಳ ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ. ಇವತ್ತು ಭಾರತವನ್ನು ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಪಡಿಸಲಾಗ್ತಿದೆ. ಇದಕ್ಕಾಗಿ ಕ್ಷೇತ್ರದ ಜನತೆ ಬಿಜೆಪಿಗೆ ಮತ ನೀಡಬೇಕಾಗಿದೆ ಎಂದರು.


ಕಾಂಗ್ರೆಸ್ ಸರ್ಕಾರ ಬಂದ್ರೆ ಭಜರಂಗದಳ ಬ್ಯಾನ್ ಮಾಡ್ತೀವಿ ಅಂದಿದಾರೆ. ಭಜರಂಗದಳ ಒಂದು ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ. ಭಜರಂಗದಳ ರಾಷ್ಟ್ರವಾದಿ ಸಂಘಟನೆ, ಕರ್ನಾಟಕದ ಜನರು ಇದನ್ನ ಒಪ್ಪಲ್ಲ. ಇದೇ ವೇಳೆ, ಕಾಂಗ್ರೆಸ್ ರಾಷ್ಟ್ರ ವಿರೋಧಿ ಸಂಘಟನೆ ಪಿಎಫ್ಐಯನ್ನು ಪ್ರೋತ್ಸಾಹಿಸುತ್ತದೆ. ಎರಡು ತದ್ವಿರುದ್ಧ ವಿಚಾರಗಳ ಬಗ್ಗೆ ಜನರು ಗಮನ ಹರಿಸಬೇಕು ಎಂದರು.


ವಿಧಾನಸಭೆ ಚುನಾವಣೆಯಲ್ಲಿ ರಾಜೇಶ್ ನಾಯ್ಕ್ ರನ್ನ ಗೆಲ್ಲಿಸಬೇಕು ಯಾಕಂದ್ರೆ, ಅಭಿವೃದ್ಧಿ ಮತ್ತು ರಾಷ್ಟ್ರವಾದ ಗೆಲ್ಲಬೇಕಾಗಿದೆ. ಶ್ರೀರಾಮನ ಜನ್ಮಸ್ಥಳದಿಂದ ಹನುಮನ ಜನ್ಮಸ್ಥಳಕ್ಕೆ ನಾನು ಬಂದಿದ್ದೇನೆ. ಜನವರಿಯಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಆಗಲಿದೆ. ಭಜರಂಗಿಬಲಿ ಜನ್ಮಸ್ಥಳದ ಕರ್ನಾಟಕದ ಜನರಿಗೆ ಈಗಲೇ ಆಮಂತ್ರಣ ನೀಡ್ತಾ ಇದೀನಿ. ಇಡೀ ಉತ್ತರ ಪ್ರದೇಶ ನಿಮ್ಮನ್ನ ರಾಮನ ಜನ್ಮಭೂಮಿಗೆ ಸ್ವಾಗತಿಸುತ್ತದೆ ಎಂದು ಹೇಳಿದರು.


ರೋಡ್ ಶೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಇದ್ದರು. ರೋಡ್ ಶೋ ಸಲುವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಲ್ಲಿಸಲಾಗಿತ್ತು. ಕೈಕಂಬ ದ್ವಾರದ ವರೆಗೂ ಜಾಥಾ ನಡೆದು ಬಂತು. ಭಾರೀ ಸಂಖ್ಯೆಯಲ್ಲಿ ಕೇಸರಿ ಕಾರ್ಯಕರ್ತರು ಸೇರಿದ್ದು ಹಿಂದು ಹೆದ್ದೆರೆ ಎದ್ದು ನಿಂತಂತೆ ಕಂಡಿತ್ತು.
Uttar Pradesh (UP) chief minister (CM) Yogi Adityanath campaigned for BJP candidates in Puttur, Bantwal and Karkala on Saturday May 6. He campaigned for Asha Thimmappa Gowda in Puttur. A massive road show started from Shri Mahalingeshwara Temple.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm