ಬ್ರೇಕಿಂಗ್ ನ್ಯೂಸ್
28-10-20 02:57 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಾರ, ವಹಿವಾಟಿನಲ್ಲಿ ತೊಡಗಿರುವ ಗುಜರಾತ್, ರಾಜಸ್ಥಾನ ಮೂಲದ ಮಾರ್ವಾಡಿಗಳನ್ನು ಓಡಿಸಬೇಕೆಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಅಭಿಯಾನಕ್ಕೆ ಪರ - ವಿರೋಧ ಕೇಳಿಬಂದಿದ್ದು ಶಾಂತಿ ಕದಡುವ ಮುನ್ನ ಪೊಲೀಸರು ಎಚ್ಚೆತ್ತುಕೊಳ್ಳಬೇಕೆಂದು ಪ್ರಜ್ಞಾವಂತರು ಆಗ್ರಹಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳು ಮಾರ್ವಾಡಿ ಹಟಾವೋ ಅಭಿಯಾನ ಆರಂಭಿಸಿದ್ದಾರೆ. ನಮ್ಮೂರು ನಮ್ಮ ಜನ, ನಮ್ಮ ವ್ಯಾಪಾರ ನಮ್ಮ ಜನರಿಗೆ... ಮಾರ್ವಾಡಿ ಹಠಾವೋ.. ಎಂಬ ಪೋಸ್ಟ್ ಗಳನ್ನು ಫೇಸ್ಬುಕ್ ಮೂಲಕ ಹಾಕುತ್ತಿದ್ದಾರೆ. ಇದು ಮಾರ್ವಾಡಿಗಳ ಗಮನಕ್ಕೂ ಬಂದಿದ್ದು, ಈ ರೀತಿ ಪೋಸ್ಟ್ ಹಾಕಿದವರ ವಿರುದ್ಧ ಮಾರ್ವಾಡಿ ವರ್ತಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅಭಿಯಾನದ ಹಿಂದೆ ಮುಸ್ಲಿಂ ವರ್ತಕರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಹಿಂದು ಸಂಘಟನೆಗಳೂ ಎಂಟ್ರಿ ಕೊಟ್ಟಿವೆ.


ರಾಜಸ್ಥಾನ ವ್ಯಾಪಾರಿಗಳ ಪರವಾಗಿ ಹಿಂದೂ ಸಂಘಟನೆಗಳು ಬೆಂಬಲ ನೀಡಿವೆ. ಕೆಲವು ಕಾರ್ಯಕರ್ತರು ಬಹಿರಂಗವಾಗಿಯೇ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕುತ್ತಿದ್ದು ಭಾರತದ ಪ್ರಜೆಗಳಿಗೆ ದೇಶದ ಎಲ್ಲಿ ಬೇಕಾದರೂ ವ್ಯಾಪಾರ ಮಾಡಲು ಅವಕಾಶವಿದೆ. ಅವರು ಬಾಂಗ್ಲಾ ದೇಶಿಗರಲ್ಲ. ಪಾಕಿಸ್ತಾನದವರೂ ಅಲ್ಲ.. ನಮ್ಮದೇ ಜನ ಎಂದು ಪ್ರತಿ ಟೀಕೆ ಮಾಡುತ್ತಿದ್ದಾರೆ.
ಇದೇ ವೇಳೆ, ಇಂಥ ಪೋಸ್ಟ್ ಕ್ರಿಯೇಟ್ ಮಾಡಿರುವ ಕಿಡಿಗೇಡಿಗಳ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದು ತನಿಖೆ ಆರಂಭಿಸಿದ್ದಾರೆ. ರಾಜಸ್ಥಾನ ಮೂಲದ ವ್ಯಾಪಾರಿಗಳು ಮೋಸ ಮಾಡುತ್ತಾರೆ ಎಂಬ ವೀಡಿಯೋ ಹರಿಬಿಟ್ಟು ಜನರನ್ನು ಕೆರಳಿಸುವ ಯತ್ನ ನಡೆದಿದ್ದು ಇದರಿಂದಾಗಿ ಗೊಂದಲ, ಅಭಿಯಾನ ಶುರುವಾಗಿದೆ ಎನ್ನಲಾಗುತ್ತಿದೆ.
Marvadis who are living in the parts of Karavali Karnataka should be chased groups start campaign on social media.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am