ಬ್ರೇಕಿಂಗ್ ನ್ಯೂಸ್
08-05-23 10:18 pm Mangalore Correspondent ಕರಾವಳಿ
ಮಂಗಳೂರು, ಮೇ 8 : ರಾಜ್ಯದಲ್ಲಿ ಸಂಪೂರ್ಣ ಗೋಹತ್ಯಾ ನಿಷೇಧವನ್ನು ರಾಜ್ಯದ ಬಿಜೆಪಿ ಸರಕಾರ ಜಾರಿಗೆ ತಂದಿದ್ದರೂ, ಗೋಕಟುಕರು ಅದನ್ನು ಉಲ್ಲಂಘಿಸಿ ಗೋಹತ್ಯೆ ನಿರಂತರವಾಗಿ ಮಾಡುತ್ತಾ ಬಂದಿದ್ದರು. ಉತ್ತರ ಕ್ಷೇತ್ರದಲ್ಲಿ ಮೂರು ಕಡೆ ಅವ್ಯಾಹತವಾಗಿ ಗೋಹತ್ಯೆ ನಡೆಯುತ್ತಿರುವುದು ಗಮನಕ್ಕೆ ಬಂದ ತಕ್ಷಣ ಶಾಸಕ ಡಾ. ಭರತ್ ಶೆಟ್ಟಿ ಅದನ್ನು ರಾಜ್ಯದ ಗೋಹತ್ಯೆ ನಿಷೇಧ ಕಾಯ್ದೆಯಡಿ ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಸೂಚಿಸಿದ್ದರು. ಅಲ್ಲದೆ, ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲು ಕ್ರಮ ಕೈಗೊಂಡಿದ್ದರು. ಈ ಧೈರ್ಯವನ್ನು ರಾಜ್ಯದಲ್ಲಿ ತೋರಿಸಿದ ಮೊದಲ ಶಾಸಕ ಡಾ.ಭರತ್ ಶೆಟ್ಟಿ ಎಂದು ಮಂಗಳೂರು ನಗರ ಉತ್ತರ ಬಿಜೆಪಿ ಮಂಡಲದ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ ಹೇಳಿದ್ದಾರೆ.
ಅವರು ಕ್ಷೇತ್ರವ್ಯಾಪಿ ಪ್ರಚಾರದಲ್ಲಿ ನಿರತರಾಗಿದ್ದಾಗ ಭೇಟಿಯಾದ ವರದಿಗಾರರೊಂದಿಗೆ ಮಾತನಾಡುತ್ತಾ ಈ ಅನಿಸಿಕೆ ವ್ಯಕ್ತಪಡಿಸಿದ್ದರು. ಗೋಹಂತಕರಿಗೆ ಬಿಸಿ ಮುಟ್ಟಿಸುವ ಅಗತ್ಯ ಇತ್ತು. ಅವರು ಕಾಯ್ದೆ, ಕಾನೂನು, ನಿಯಮಗಳನ್ನು ಕ್ಯಾರೇ ಮಾಡುತ್ತಿರಲಿಲ್ಲ. ಅಂತವರನ್ನು ಕಾನೂನಿನ ಪರಿಧಿಯೊಳಗೆ ತರಲು ಧೈರ್ಯ, ಸಾಹಸ ಬೇಕು. ಅದನ್ನು ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ತೋರಿಸಿದ್ದಾರೆ. ಇದರ ನಂತರ ಜಿಲ್ಲೆಯಲ್ಲಿ ಅಕ್ರಮ ಕಸಾಯಿಗಳ ವಿರುದ್ಧ ಧ್ವನಿ ಪ್ರಬಲವಾಯಿತು ಎಂದು ಅವರು ತಿಳಿಸಿದರು.


ಒಬ್ಬ ಶಾಸಕ ಸರಕಾರದ ನಿಯಮಗಳನ್ನು ಅನುಸರಿಸಿ ಏನೆಲ್ಲಾ ಮಾಡಲು ಸಾಧ್ಯವಿದೆ ಎಂದು ತೋರಿಸಿಕೊಟ್ಟವರು ಡಾ. ಭರತ್ ಶೆಟ್ಟಿ. ಅವರು ಅಕ್ರಮ ಕಸಾಯಿ ಖಾನೆಗಳನ್ನು ಮುಚ್ಚಿಸಿದ ನಂತರ ಅವರಿಗೆ ಮತಾಂಧರ ಬೆದರಿಕೆ ಕರೆಗಳು, ಒತ್ತಡ ಎಲ್ಲವೂ ಬಂದಿದೆ. ಆದರೂ ಎದೆಗುಂದದೆ ಅವರು ತಮ್ಮ ನಿಲುವಿನಲ್ಲಿ ಅಚಲರಾಗಿ ನಿಂತು ಮುನ್ನುಗ್ಗಿದ್ದಾರೆ. ಈ ಮೂಲಕ ರಾಜ್ಯ ಸರಕಾರ ಜಾರಿಗೆ ತಂದ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತಂದು ಗೋಪ್ರೇಮಿಗಳಲ್ಲಿ ಭರವಸೆ ಮೂಡಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದಲ್ಲಿ ತಲವಾರು ತೋರಿಸಿ ಮನೆಗಳ ಕೊಟ್ಟಿಗೆಯಿಂದ ಗೋವುಗಳನ್ನು ಎಳೆದುಕೊಂಡ ಹೋದ ಒಂದೇ ಒಂದು ಉದಾಹರಣೆ ಇಲ್ಲ. ಅದಕ್ಕೆ ಮುಖ್ಯ ಕಾರಣ ಭರತ್ ಶೆಟ್ಟಿಯವರ ದಕ್ಷ ಆಡಳಿತ.
ಶಾಸಕರು ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಯಾವುದೇ ಹಸ್ತಕ್ಷೇಪ ಮಾಡದೇ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುವಂತೆ ಮಾಡಿದ್ದಾರೆ. ಇನ್ನು ಹಿಂದುತ್ವದೊಂದಿಗೆ ಅಭಿವೃದ್ಧಿಯನ್ನು ಕೂಡ ಶಾಸಕ ಡಾ. ಭರತ್ ಶೆಟ್ಟಿ ವೈಯವರು ಜೊತೆ ಜೊತೆಯಾಗಿ ತೆಗೆದುಕೊಂಡಿದ್ದಾರೆ. ಅದಕ್ಕೆ ಕ್ಷೇತ್ರದಲ್ಲಿ ಆಗಿರುವ 2,250 ಕೋಟಿ ರೂ ಅಭಿವೃದ್ಧಿ ಯೋಜನೆಗಳೇ ಸಾಕ್ಷಿ. ಇಂತಹ ಶಾಸಕರನ್ನು ಜನ ಮತ್ತೊಮ್ಮೆ ಆರಿಸಲು ಬಯಸುತ್ತಿದ್ದಾರೆ ಎಂದು ತಿಲಕರಾಜ್ ಕೃಷ್ಣಾಪುರ ಹೇಳಿದ್ದಾರೆ.
Mangalore MLA Bharath Shetty plays major role in passing anti cow slaughter law in Karnataka says North BJP President Tilikraj Krishnapura.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm