ಬ್ರೇಕಿಂಗ್ ನ್ಯೂಸ್
08-05-23 10:26 pm Mangalore Correspondent ಕರಾವಳಿ
ಉಳ್ಳಾಲ, ಮೇ 8 : ಹನುಮನ ಜನ್ಮಭೂಮಿಯಲ್ಲಿ ಬಜರಂಗದಳ ನಿಷೇಧ ಸಾಧ್ಯವೇ..?ಬಜರಂಗಿಗಳನ್ನ ಮುಟ್ಟುವ ಧೈರ್ಯ ,ತಾಕತ್ತು ಕಾಂಗ್ರೆಸ್ಗೆ ಇದೆಯೇ ಎಂದು ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾ ಅಧ್ಯಕ್ಷೆ,ಕೊಯಮತ್ತೂರು ಶಾಸಕಿ ವಾನತಿ ಶ್ರೀನಿವಾಸನ್ ಸವಾಲು ಹಾಕಿದರು.
ತೊಕ್ಕೊಟ್ಟು ಒಳಪೇಟೆಯ ಡಾ. ಬಿ.ಆರ್.ಅಂಬೇಡ್ಕರ್ ಮೈದಾನದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ದೇಶ ಮೊದಲು ಎಂದು ಹೇಳುವ ಪಕ್ಷ ಬಿಜೆಪಿ ಮಾತ್ರ ಇತರ ಪಕ್ಷಗಳಿಗೆ ಅದರ ಮಹತ್ವವೂ ಗೊತ್ತಿಲ್ಲ. ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರನ್ನು ಮಂಗಳೂರಿನಿಂದ ಬೆಂಗಳೂರಿಗೆ ಕಳುಹಿಸಲೇ ಬೇಕು ಎಂದರು.ಬಿಜೆಪಿಯ ಮಹಾನಾಯಕ ಕೇಂದ್ರದಲ್ಲಿ ನಮ್ಮ ರಕ್ಷಣೆಗೆ ನಿಂತಿದ್ದಾರೆ. ಬಜರಂಗದಳವನ್ನು ನಿಷೇಧಿಸಲು ಹೊರಟ ಕಾಂಗ್ರೆಸ್ ಅದರ ತಂಟೆಗೆ ಹೋದರೆ ಬಿಡೋದು ಯಾರು ಎಂದು ಪ್ರಶ್ನಿಸಿದರು. ಬಿಜೆಪಿಯಲ್ಲಿ ಮಾತ್ರ ನಾರಿಶಕ್ತಿಗೆ ಮಹತ್ವ ಸಿಕ್ಕಿದ್ದು ದೇಶದಲ್ಲಿ ಮೊದಲ ಬಾರಿಗೆ ನಿರ್ಮಲಾ ಸೀತಾರಾಮನ್, ದಿ. ಸುಶ್ಮಾ ಸ್ವರಾಜ್, ಶೋಭಾ ಕರಂದ್ಲಾಜೆ ಮೊದಲಾದ ಮಹಿಳಾ ಶಕ್ತಿಗೆ ಮೊದಲ ಬಾರಿ ಈ ದೇಶದ ಬಿಜೆಪಿ ಸರಕಾರ ನೀಡಿದ ಅಧಿಕಾರವನ್ನು ಜವಬ್ದಾರಿಯುತವಾಗಿ ನಿರ್ವಹಿಸಿದ್ದಾರೆ ಎಂದರು.
ಈ ಸಂದರ್ಭ ಕಾಂಗ್ರೆಸ್ ನ ಹಿರಿಯ ನಾಯಕಿಯರಾದ ಸತ್ಯವತಿ, ವಿನಯ, ಶೋಭಾ ಸೇರಿದಂತೆ ಮೂವತ್ತು ಮಂದಿ ಮಹಿಳೆಯರು ಬಿಜೆಪಿಗೆ ಸೇರ್ಪಡೆಗೊಂಡರು.
ಮಂಗಳೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಮಾತನಾಡಿ ಹಕ್ಕುಪತ್ರ ವಿತರಣೆ ತಡೆಯುವ ಕ್ರಮ ಈ ವಿಧಾನಸಭಾ ಕ್ಷೇತ್ರದ ಶಾಸಕರಿಂದ ಮಾತ್ರ ಆಗಿದ್ದು ಪಂಚಾಯಿತಿಯಲ್ಲಿ ನಿರ್ವಸಿತರ ಪಟ್ಟಿ ಇದ್ದು ಎಲ್ಲೂ ಕೂಡಾ ಕಾಂಗ್ರೆಸ್ ಶಾಸಕರು ನ್ಯಾಯ ಒದಗಿಸದೆ ತಾರತಮ್ಯ ನೀತಿಯೇ ಮಾಡಿದ್ದು ಅವರಿಗೆ ಅದು ಮುಳುವಾಗಲಿದೆ ಎಂದರು.





ಸಮಾವೇಶಕ್ಕು ಮುನ್ನ ತೊಕ್ಕೊಟ್ಟು ಒಳಪೇಟೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆಯರು ಕಾಲ್ನಡಿಗೆ ಜಾಥಾದಲ್ಲಿ ಮತ ಯಾಚನೆ ನಡೆಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಬಿಜೆಪಿ ಮಹಿಳಾ ಮೋರ್ಚದ ಜಿಲ್ಲಾಧ್ಯಕ್ಷೆ ಧನಲಕ್ಷ್ಮಿ ಗಟ್ಟಿ,ರವೀಶ್ ತಂತ್ರಿ ಕುಂಟಾರು, ಸಂತೋಷ್ ಕುಮಾರ್ ರೈ ಬೋಳಿಯಾರ್, ಮೋನಪ್ಪ ಭಂಡಾರಿ, ರವೀಂದ್ರ ಶೆಟ್ಟಿ ಉಳಿದೊಟ್ಟು ಮೊದಲಾದವರು ಇದ್ದರು.
Mangalore Is banning Bagarang dal ever possible in India by congress slams BJP Morcha Vanati srinivas in Ullal.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm