ಬ್ರೇಕಿಂಗ್ ನ್ಯೂಸ್
09-05-23 04:51 pm Mangalore Correspondent ಕರಾವಳಿ
ಮಂಗಳೂರು, ಮೇ 9: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದ ಕೇನ್ಯ ಕಣ್ಕಲ್ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರಾದ ಹಂಸಿಕಾ (15), ಆವಂತಿಕಾ (11) ಮೃತರು.
ನದಿ ನೀರಲ್ಲಿ ಮಕ್ಕಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಸಿದಾಗ ಮಕ್ಕಳ ಮೃತದೇಹ ಸಿಕ್ಕಿವೆ.
ಕೇನ್ಯ ಉದಯ ಅಮ್ಮಣ್ಣಾಯ ಅವರ ಸಹೋದರ ಸತೀಶ್ ಅಮ್ಮಣ್ಣಾಯ ಅವರು ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದಾರೆ. ಸತೀಶ್ ಅವರ ಇಬ್ಬರು ಹೆಣ್ಣು ಮಕ್ಕಳು ಶಾಲೆಗೆ ರಜೆ ಇದ್ದುದರಿಂದ ಬಳ್ಪದ ಚಿಕ್ಕಪ್ಪನ ಮನೆಗೆ ಸೋಮವಾರ ಬೆಳಿಗ್ಗೆ ಬಂದಿದ್ದರು.
ಮನೆ ಸಮೀಪವೇ ಇರುವ ಕುಮಾರಧಾರ ನದಿಗೆ ಸಂಜೆ ವೇಳೆಗೆ ಕುಟುಂಬದವರ ಜೊತೆಗೆ ತೆರಳಿದ್ದರು. ಈ ವೇಳೆ ಹೆಣ್ಣು ಮಕ್ಕಳಿಬ್ಬರು ನೀರಿಗೆ ಇಳಿದಿದ್ದು, ಮುಳುಗಿ ನಾಪತ್ತೆಯಾಗಿದ್ದರು.
ಇದು ಗಮನಕ್ಕೆ ಬರುತ್ತಿದ್ದಂತೆಯೇ ಮನೆಮಂದಿ ನೀರಿನಲ್ಲಿ ಹುಡುಕಿದ್ದರು. ಸ್ಥಳೀಯ ಈಜುಗಾರರೂ ನದಿ ನೀರಲ್ಲಿ ಮುಳುಗಿ ಹುಡುಕಾಟ ನಡೆಸಿದ್ದರು. ಸುಳ್ಯದಿಂದ ಅಗ್ನಿಶಾಮಕ ದಳವನ್ನು ಕರೆಸಿ ನೀರಿನಲ್ಲಿ ಶೋಧ ನಡೆಸಲಾಯಿತು. ರಾತ್ರಿ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾದವು.
ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ನದಿಯ ಆಳ ತಿಳಿಯದೇ ಬಾಲಕಿಯರು ನದಿಗೆ ಇಳಿದಿರಬಹುದು. ಕಾಲು ಜಾರಿ ನೀರಲ್ಲಿ ಮುಳುಗಿ ಮೃತಪಟ್ಟಿರಬಹುದು’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
Girls drowned in river, Young sisters from Bangalore drowned in Kumaradhara river at Kadaba in Sullia who had come on summer vacations to Mangalore.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm