ಬ್ರೇಕಿಂಗ್ ನ್ಯೂಸ್
09-05-23 05:24 pm Mangalore Correspondent ಕರಾವಳಿ
ಉಳ್ಳಾಲ, ಮೇ 9 : ಮನೆಯ ಬಾಲ್ಕನಿ ಮತ್ತು ಟೆರೇಸ್ ಅಲ್ಲದೆ ಮನೆಯಂಗಳದಲ್ಲಿ ಒಣ ಹಾಕಿದ್ದ ಮಹಿಳೆಯರ ಬೆಲೆ ಬಾಳುವ ಸಲ್ವಾರ್, ಒಳ ಉಡುಪುಗಳನ್ನ ಕದ್ದೊಯ್ದಿದ್ದಲ್ಲದೆ, ಮನೆ ಬಾಗಿಲ ಲಾಕರ್ ಗೆ ಕಿಡಿಗೇಡಿಗಳು ಕಾಂಡೋಮ್ ಸಿಕ್ಕಿಸಿ ವಿಕೃತಿ ಮೆರೆದ ಘಟನೆ ನಿನ್ನೆ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉಳ್ಳಾಲ ಬೈಲಿನ ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ಸುಂದರ್ ಎನ್ನುವವರ ಮನೆ ಮೇಲಿರುವ ಬಾಡಿಗೆ ನಿವಾಸಿಗಳ ಬೆಲೆ ಬಾಳುವ ಬಟ್ಟೆಗಳನ್ನ ಯಾರೋ ವಿಕೃತರು ಕಳವುಗೈದಿದ್ದಾರೆ. ಬಾಡಿಗೆ ಮನೆಯ ಮಹಿಳೆ ಮತ್ತು ಆಕೆಯ ಮಗಳ ಬೆಲೆ ಬಾಳುವ ಸಲ್ವಾರ್, ಮತ್ತು ಒಳ ಉಡುಪುಗಳನ್ನ ಬಾಲ್ಕನಿ ಮತ್ತು ಟೆರೇಸ್ ಮೇಲೆ ನಿನ್ನೆ ಸಂಜೆ ಒಣ ಹಾಕಲಾಗಿತ್ತು. ಇಂದು ಬೆಳಗ್ಗೆ ಬಾಡಿಗೆ ಮನೆ ಯಜಮಾನ ಎದ್ದಾಗ ಮುಖ್ಯ ಬಾಗಿಲಿನ ಲಾಕರ್ ಗೆ ಕಾಂಡೋಮನ್ನ ಸಿಕ್ಕಿಸಿರುವುದು ಬೆಳಕಿಗೆ ಬಂದಿದೆ. ಸ್ವಲ್ಪ ಹೊತ್ತಲ್ಲಿ ಒಣ ಹಾಕಲಾಗಿದ್ದ ಮಹಿಳೆಯರ ಉಡುಪುಗಳು ಕಳವಾಗಿದ್ದು ತಿಳಿದಿದೆ. ವಿಶೇಷವೆಂದರೆ ಬಾಡಿಗೆ ಯಜಮಾನನ ಬೆಲೆ ಬಾಳುವ ಶರ್ಟ್, ಟಿ ಶರ್ಟ್, ಪ್ಯಾಂಟ್ ಗಳನ್ನ ಬಿಟ್ಟು ಹೋಗಿದ್ದಾರೆ. ಪಕ್ಕದ ಮನೆಯಿಂದಲೂ ಮಹಿಳೆಯರ ಉಡುಪು, ಒಳ ಉಡುಪುಗಳನ್ನ ಕದ್ದೊಯ್ಯಲಾಗಿದೆ.

ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುವ ಕುಟುಂಬದ ಸುಮಾರು 7 ಸಾವಿರ ಮೌಲ್ಯದ ಉಡುಪನ್ನ ಕಳವುಗೈಯಲಾಗಿದೆ. ಮೇಲ್ನೋಟಕ್ಕೆ ಯಾರೋ ವಿಕೃತ ಕಾಮಿಗಳೇ ಈ ಕೃತ್ಯ ನಡೆಸಿರುವುದಾಗಿ ಶಂಕಿಸಲಾಗಿದೆ. ಸಿಸಿ ಕ್ಯಾಮೆರಾ, ಸಾಕು ನಾಯಿಗಳಿಲ್ಲದ ಮನೆಯವರು ತಮ್ಮ ಅಮೂಲ್ಯವಾದ ಉಡುಪುಗಳನ್ನ ಹೊರಗಡೆ ಒಣ ಹಾಕುವುದು ಕಷ್ಟ ಆಗಿದೆ.
Mangalore Miscreants steal womens undergarments and costly dress, place condoms on house main door and flee in Ullal.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm