ಬ್ರೇಕಿಂಗ್ ನ್ಯೂಸ್
09-05-23 05:24 pm Mangalore Correspondent ಕರಾವಳಿ
ಉಳ್ಳಾಲ, ಮೇ 9 : ಮನೆಯ ಬಾಲ್ಕನಿ ಮತ್ತು ಟೆರೇಸ್ ಅಲ್ಲದೆ ಮನೆಯಂಗಳದಲ್ಲಿ ಒಣ ಹಾಕಿದ್ದ ಮಹಿಳೆಯರ ಬೆಲೆ ಬಾಳುವ ಸಲ್ವಾರ್, ಒಳ ಉಡುಪುಗಳನ್ನ ಕದ್ದೊಯ್ದಿದ್ದಲ್ಲದೆ, ಮನೆ ಬಾಗಿಲ ಲಾಕರ್ ಗೆ ಕಿಡಿಗೇಡಿಗಳು ಕಾಂಡೋಮ್ ಸಿಕ್ಕಿಸಿ ವಿಕೃತಿ ಮೆರೆದ ಘಟನೆ ನಿನ್ನೆ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉಳ್ಳಾಲ ಬೈಲಿನ ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ಸುಂದರ್ ಎನ್ನುವವರ ಮನೆ ಮೇಲಿರುವ ಬಾಡಿಗೆ ನಿವಾಸಿಗಳ ಬೆಲೆ ಬಾಳುವ ಬಟ್ಟೆಗಳನ್ನ ಯಾರೋ ವಿಕೃತರು ಕಳವುಗೈದಿದ್ದಾರೆ. ಬಾಡಿಗೆ ಮನೆಯ ಮಹಿಳೆ ಮತ್ತು ಆಕೆಯ ಮಗಳ ಬೆಲೆ ಬಾಳುವ ಸಲ್ವಾರ್, ಮತ್ತು ಒಳ ಉಡುಪುಗಳನ್ನ ಬಾಲ್ಕನಿ ಮತ್ತು ಟೆರೇಸ್ ಮೇಲೆ ನಿನ್ನೆ ಸಂಜೆ ಒಣ ಹಾಕಲಾಗಿತ್ತು. ಇಂದು ಬೆಳಗ್ಗೆ ಬಾಡಿಗೆ ಮನೆ ಯಜಮಾನ ಎದ್ದಾಗ ಮುಖ್ಯ ಬಾಗಿಲಿನ ಲಾಕರ್ ಗೆ ಕಾಂಡೋಮನ್ನ ಸಿಕ್ಕಿಸಿರುವುದು ಬೆಳಕಿಗೆ ಬಂದಿದೆ. ಸ್ವಲ್ಪ ಹೊತ್ತಲ್ಲಿ ಒಣ ಹಾಕಲಾಗಿದ್ದ ಮಹಿಳೆಯರ ಉಡುಪುಗಳು ಕಳವಾಗಿದ್ದು ತಿಳಿದಿದೆ. ವಿಶೇಷವೆಂದರೆ ಬಾಡಿಗೆ ಯಜಮಾನನ ಬೆಲೆ ಬಾಳುವ ಶರ್ಟ್, ಟಿ ಶರ್ಟ್, ಪ್ಯಾಂಟ್ ಗಳನ್ನ ಬಿಟ್ಟು ಹೋಗಿದ್ದಾರೆ. ಪಕ್ಕದ ಮನೆಯಿಂದಲೂ ಮಹಿಳೆಯರ ಉಡುಪು, ಒಳ ಉಡುಪುಗಳನ್ನ ಕದ್ದೊಯ್ಯಲಾಗಿದೆ.

ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುವ ಕುಟುಂಬದ ಸುಮಾರು 7 ಸಾವಿರ ಮೌಲ್ಯದ ಉಡುಪನ್ನ ಕಳವುಗೈಯಲಾಗಿದೆ. ಮೇಲ್ನೋಟಕ್ಕೆ ಯಾರೋ ವಿಕೃತ ಕಾಮಿಗಳೇ ಈ ಕೃತ್ಯ ನಡೆಸಿರುವುದಾಗಿ ಶಂಕಿಸಲಾಗಿದೆ. ಸಿಸಿ ಕ್ಯಾಮೆರಾ, ಸಾಕು ನಾಯಿಗಳಿಲ್ಲದ ಮನೆಯವರು ತಮ್ಮ ಅಮೂಲ್ಯವಾದ ಉಡುಪುಗಳನ್ನ ಹೊರಗಡೆ ಒಣ ಹಾಕುವುದು ಕಷ್ಟ ಆಗಿದೆ.
Mangalore Miscreants steal womens undergarments and costly dress, place condoms on house main door and flee in Ullal.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm