ಬ್ರೇಕಿಂಗ್ ನ್ಯೂಸ್
10-05-23 11:11 am Mangalore Correspondent ಕರಾವಳಿ
ಮಂಗಳೂರು, ಮೇ 10 : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬೆಳಗ್ಗಿನಿಂದಲೇ ಬಿರುಸಿನ ಮತದಾನ ನಡೆದಿದೆ. ಮೊದಲ ಎರಡು ಗಂಟೆಯ ಅಂದರೆ, 9 ಗಂಟೆ ವರೆಗಿನ ಮತದಾನದಲ್ಲಿ ಜಿಲ್ಲೆಯಲ್ಲಿ 12.47 ಶೇಕಡಾ ಮತದಾನ ದಾಖಲಾಗಿದೆ.
ಹಗಲಿನಲ್ಲಿ ಭಾರೀ ಬಿಸಿಲು ಇರುವುದರಿದಲೋ ಏನೋ ಮಂಗಳೂರು ನಗರ ಸೇರಿದಂತೆ ಬಹುತೇಕ ಹೆಚ್ಚಿನ ಮತಗಟ್ಟೆಗಳಲ್ಲಿ ಬೆಳಗ್ಗೆಯೇ ಮತದಾರರು ಸಾಲುಗಟ್ಟಿದ್ದರು. ಹಿರಿಯ ನಾಗರಿಕರು ಕೂಡ ಇನ್ನೊಬ್ಬರ ಸಹಾಯದಿಂದ ಮತ ಚಲಾಯಿಸಲು ಆಗಮಿಸಿದ್ದರು. ಈ ಬಾರಿ 80 ವರ್ಷ ಮೀರಿದವರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ನೀಡಲಾಗಿತ್ತು. ಆದರೆ ಇದಕ್ಕೆ ನೋಂದಣಿ ಮಾಡದವರಿಗೆ ವೋಟ್ ಮಾಡಲು ಅವಕಾಶ ಇರಲಿಲ್ಲ.


















ಮಂಗಳೂರಿನ ಲೇಡಿಹಿಲ್ ಬಳಿಯ ಉರ್ವಾ ಶಾಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ ಚಲಾಯಿಸಿದ್ದಾರೆ. ಸರತಿ ಸಾಲಿನಲ್ಲಿ ನಿಂತುಕೊಂಡೇ ಮತ ಹಾಕಿದ್ದಾರೆ. ಇದೇ ವೇಳೆ, ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿನಗರ ಮತಗಟ್ಟೆಯಲ್ಲಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಜೆಆರ್ ಲೋಬೊ ಕುಟುಂಬ ಸಹಿತ ಬಂದು ಕಂಕನಾಡಿಯ ಬೆಂದೂರುವೆಲ್ ಶಾಲೆಯಲ್ಲಿ ಮತ ಚಲಾಯಿಸಿದ್ದಾರೆ.
ಈ ಬಾರಿ ಜಿಲ್ಲಾಡಳಿತದ ಸ್ವೀಪ್ ಕಮಿಟಿ ಮತದಾನ ಜಾಗೃತಿಗೆ ಬಹಳಷ್ಟು ಕೆಲಸ ಮಾಡಿತ್ತು. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಮತದಾನ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ. 9 ಗಂಟೆ ವರೆಗಿನ ಮಾಹಿತಿ ಪ್ರಕಾರ, ಮಂಗಳೂರು ಉತ್ತರದಲ್ಲಿ 15.50 ಪರ್ಸೆಂಟ್, ಪುತ್ತೂರಿನಲ್ಲಿ 13.34 ಪರ್ಸೆಂಟ್ ಮತದಾನ ಆಗಿದೆ.
ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಕೆಪಿಟಿ ಮತಗಟ್ಟೆಯಲ್ಲಿ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ್ದಾರೆ. ಉಳಿದಂತೆ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಗರ್ಡಾಡಿಯ ಶಾಲೆಯಲ್ಲಿ, ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಮುಂಡೂರಿನ ಮತಗಟ್ಟೆಯಲ್ಲಿ ಮತ ಹಾಕಿದರು.
ಉಳ್ಳಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಬೋಳಿಯಾರ್ ಗ್ರಾಮದ ಜಾರದಗುಡ್ಡೆ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿ, ಪತ್ನಿ, ಪುತ್ರಿ ಮತ್ತು ಬೆಂಬಲಿಗರೊಂದಿಗೆ ಫೋಟೊಗೆ ಪೋಸು ನೀಡಿದರು. ಶಾಸಕ ಯು.ಟಿ ಖಾದರ್ ಅವರ ಏಕೈಕ ಪುತ್ರಿ ಹವ್ವಾ ನಸೀಮ ತಮ್ಮ ಮೊದಲ ಹಕ್ಕನ್ನು ಜಾರದಗುಡ್ಡೆ ಶಾಲೆಯಲ್ಲಿ ತಂದೆ, ತಾಯಿಯ ಜೊತೆಗೆ ಚಲಾಯಿಸಿದರು.
Karnataka Election 2023 live, people throng to polling booths in large numbers, JR Lobo, Vedevyas Kamat, Khader, Poonja, UT Khader, Bharath Shetty, Arun Puthila casted thier votes with famiily. Voters queued up in front of their respective polling booths in large numbers in Dakshina Kannada (DK) and Udupi districts as polling for the Karnataka assembly elections began at 7 am.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm