ಬ್ರೇಕಿಂಗ್ ನ್ಯೂಸ್
10-05-23 05:49 pm Mangalore Correspondent ಕರಾವಳಿ
ಉಳ್ಳಾಲ, ಮೇ 10 : ರಾಜ್ಯದೆಲ್ಲೆಡೆ ಚುನಾವಣೆ ನಡೆಯುತ್ತಿದ್ದ ವೇಳೆ ಸೋಮೇಶ್ವರ ರುದ್ರಪಾದೆಯಲ್ಲಿ ಹದಿಹರೆಯದ ಯುವತಿಯೋರ್ವಳು ತನ್ನ ಬಾಲ್ಯ ಸ್ನೇಹಿತೆಯೆದುರೇ ಆಯತಪ್ಪಿ ಜಾರಿ ಬಿದ್ದು ಸಮುದ್ರಪಾಲಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಗಳೂರಲ್ಲಿ ಬಿಕಾಂ ಕಲಿಯುತ್ತಿರುವ ಮೂಲತಃ ಬಾಗಲಕೋಟೆ ಜಿಲ್ಲೆಯ, ಬಾದಾಮಿ ತಾಲೂಕು ತೆಗ್ಗಿ ಗ್ರಾಮದ ನಿವಾಸಿ ಕಾವೇರಿ(20) ಮೃತಪಟ್ಟ ಯುವತಿ. ಕಾವೇರಿ ನಿನ್ನೆ ಹುಟ್ಟುಹಬ್ಬ ಆಚರಿಸಿದ್ದು ಇಂದು ತನ್ನ ಬಾಲ್ಯ ಸ್ನೇಹಿತೆ ಕಾವೇರಿಯೊಂದಿಗೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದಳು. ಸ್ನೇಹಿತೆಯರಿಬ್ಬರು ಸಮುದ್ರ ತೀರದ ರುದ್ರ ಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಕಾವೇರಿ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದಾಳೆ.


ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಈಜು ರಕ್ಷಕ ಸಿಬ್ಬಂದಿ ಮೋಹನ್ ಚಂದ್ರ, ಸ್ಥಳೀಯ ಮೀನುಗಾರರಾದ ಯೋಗೀಶ್ , ಪ್ರವೀಣ್, ಸೋಮೇಶ್ವರ ದೇವಸ್ಥಾನದ ಸಿಬ್ಬಂದಿ ವಿನಾಯಕ್ ಮತ್ತು ಸ್ಥಳೀಯರು ಸೇರಿ ಸಮುದ್ರದಲ್ಲಿ ಈಜಾಡಿ ಕಾವೇರಿಯನ್ನ ದಡಕ್ಕೆ ಎಳೆ ತಂದರೂ ಅಷ್ಟರಲ್ಲಿ ಕಾವೇರಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಕಾವೇರಿ ಪೋಷಕರು ಕೂಲಿ ಕೆಲಸಗಾರರಾಗಿದ್ದು ಮಂಗಳೂರಿನ ಉರ್ವಾ ಸ್ಟೋರಲ್ಲಿ ಕಳೆದ ಅನೇಕ ವರುಷಗಳಿಂದ ನೆಲೆಸಿದ್ದರು. ತಮ್ಮ ಏಕೈಕ ಮಗಳನ್ನ ಕಷ್ಟ ಪಟ್ಟು ಮಂಗಳೂರು ನಗರದ ಸ್ವಸ್ತಿಕ್ ಕಾಲೇಜಲ್ಲಿ ಬಿಕಾಂ ಓದಿಸುತ್ತಿದ್ದರು. ಪ್ರತಿಭಾನ್ವಿತೆಯಾಗಿದ್ದ ಕಾವೇರಿ ಬಿಕಾಂ ವ್ಯಾಸಂಗದ ಜೊತೆಗೆ ಸಿಎ ಕೂಡ ಅಧ್ಯಯನ ನಡೆಸುತ್ತಿದ್ದಳಂತೆ.
ಮೃತ ಕಾವೇರಿ ಜೊತೆ ಬಂದಿದ್ದ ಬಾಲ್ಯ ಸ್ನೇಹಿತೆಯೂ ಕೂಡ ಮಂಗಳೂರು ನಗರದ ಕಾಲೇಜೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದಾಳೆ. ವಿಚಾರ ತಿಳಿದು ಸ್ಥಳಕ್ಕೆ ಬಂದಿದ್ದ ಮೃತ ಕಾವೇರಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore 20 year old girl from Badami drowns at Someshwar Beach In Ullal. The deceased has been identified as Kaveri. She was pursing B.com at a Private college in the city.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm