ಬ್ರೇಕಿಂಗ್ ನ್ಯೂಸ್
11-05-23 10:41 am Mangalore Correspondent ಕರಾವಳಿ
ಉಳ್ಳಾಲ, ಮೇ 11: ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20) ಆತ್ಮ ಹತ್ಯೆಗೈದ ಯುವಕ. ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ನಿನ್ನೆ ರಾತ್ರಿ 11 ರ ವೇಳೆ ಮನೆಗೆ ಬಂದಿದ್ದ ಯತಿರಾಜ್ ಚಿಕ್ಕಮ್ಮ ಮನೆಯಲ್ಲಿರದ ವೇಳೆ ನೇಣು ಬಿಗಿದಿದ್ದಾನೆ. ಇಂದು ಬೆಳಿಗ್ಗೆ ಯತಿರಾಜ್ ನ ಮಾವ ಹುಡುಕಾಡಿದಾಗ ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.ಕೂಡಲೆ ಮನೆಮಂದಿ ನೇಣು ಕುಣಿಕೆಯನ್ನ ಕಡಿದರೂ ಅದಾಗಲೇ ಯತಿರಾಜ್ ಮೃತಪಟ್ಟಿದ್ದ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.



ರೂಪದರ್ಶಿ ಸಾವಿಗೆ ಪ್ರಚೋದನೆ ಆರೋಪ..
2021 ರ ಮಾರ್ಚ್ 10 ರಂದು ಕುಂಪಲದ ಆಶ್ರಯ ಕಾಲನಿ ನಿವಾಸಿ ರೂಪದರ್ಶಿ ಪ್ರೇಕ್ಷ ತನ್ನ ಮನೆಯ ಕೋಣೆಯೊಳಗೆ ಸಿಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಯುವತಿಯ ಪೋಷಕರ ದೂರಿನಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಡಿ ಉಳ್ಳಾಲ ಪೊಲೀಸರು ಯತಿರಾಜನ್ನ ಬಂಧಿಸಿದ್ದರು. ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಯತಿರಾಜ್ ನ್ಯಾಯಾಲಯದಲ್ಲಿ ಈಗಲೂ ಪ್ರಕರಣವನ್ನ ಎದುರಿಸುತ್ತಿದ್ದ. ಯತಿರಾಜ್ ಇದೀಗ ದಿಢೀರನೆ ಆತ್ಮಹತ್ಯೆಗೈದಿದ್ದು ಸಾವಿಗೆ ನಿಖರ ಕಾರಣ ತಿಳಿದಿಲ್ಲ. ನಿರ್ದಿಷ್ಟ ಉದ್ಯೋಗದಲ್ಲಿಲ್ಲದ ಯತಿರಾಜ್ ತನ್ನಲ್ಲಿದ್ದ ಬೈಕನ್ನೂ ಮಾರಿದ್ದು ಖಿನ್ನತೆಗೊಳಗಾಗಿದ್ದನಂತೆ. ಮೃತ ಯತಿರಾಜ್ ತಂದೆ, ತಾಯಿ, ತಮ್ಮನನ್ನ ಅಗಲಿದ್ದಾನೆ.
ವನ್ ಸೈಡ್ ಲವ್ ; ಆಕೆಯ ಮಾಡೆಲಿಂಗ್, ಫೋಟೋ ಶೂಟ್ ಬಗ್ಗೆ ವಿರೋಧ, ಹರೆಯದ ಹುಡುಗಿಯ ದುರಂತ ಅಂತ್ಯ !!
Mangalore Kumpala Model Preksha susicde case, accused Yatin Raj who was facing charges of Abetment to Suicide has now committed suicide at his residence. A modeling girl, who was preparing to travel to Bangalore to participate in a photo shoot, was found dead by hanging-in a room at a Ashraya Colony in Kumpala in March 2021.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm