ಬ್ರೇಕಿಂಗ್ ನ್ಯೂಸ್
11-05-23 10:41 am Mangalore Correspondent ಕರಾವಳಿ
ಉಳ್ಳಾಲ, ಮೇ 11: ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20) ಆತ್ಮ ಹತ್ಯೆಗೈದ ಯುವಕ. ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ನಿನ್ನೆ ರಾತ್ರಿ 11 ರ ವೇಳೆ ಮನೆಗೆ ಬಂದಿದ್ದ ಯತಿರಾಜ್ ಚಿಕ್ಕಮ್ಮ ಮನೆಯಲ್ಲಿರದ ವೇಳೆ ನೇಣು ಬಿಗಿದಿದ್ದಾನೆ. ಇಂದು ಬೆಳಿಗ್ಗೆ ಯತಿರಾಜ್ ನ ಮಾವ ಹುಡುಕಾಡಿದಾಗ ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.ಕೂಡಲೆ ಮನೆಮಂದಿ ನೇಣು ಕುಣಿಕೆಯನ್ನ ಕಡಿದರೂ ಅದಾಗಲೇ ಯತಿರಾಜ್ ಮೃತಪಟ್ಟಿದ್ದ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.



ರೂಪದರ್ಶಿ ಸಾವಿಗೆ ಪ್ರಚೋದನೆ ಆರೋಪ..
2021 ರ ಮಾರ್ಚ್ 10 ರಂದು ಕುಂಪಲದ ಆಶ್ರಯ ಕಾಲನಿ ನಿವಾಸಿ ರೂಪದರ್ಶಿ ಪ್ರೇಕ್ಷ ತನ್ನ ಮನೆಯ ಕೋಣೆಯೊಳಗೆ ಸಿಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಯುವತಿಯ ಪೋಷಕರ ದೂರಿನಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಡಿ ಉಳ್ಳಾಲ ಪೊಲೀಸರು ಯತಿರಾಜನ್ನ ಬಂಧಿಸಿದ್ದರು. ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಯತಿರಾಜ್ ನ್ಯಾಯಾಲಯದಲ್ಲಿ ಈಗಲೂ ಪ್ರಕರಣವನ್ನ ಎದುರಿಸುತ್ತಿದ್ದ. ಯತಿರಾಜ್ ಇದೀಗ ದಿಢೀರನೆ ಆತ್ಮಹತ್ಯೆಗೈದಿದ್ದು ಸಾವಿಗೆ ನಿಖರ ಕಾರಣ ತಿಳಿದಿಲ್ಲ. ನಿರ್ದಿಷ್ಟ ಉದ್ಯೋಗದಲ್ಲಿಲ್ಲದ ಯತಿರಾಜ್ ತನ್ನಲ್ಲಿದ್ದ ಬೈಕನ್ನೂ ಮಾರಿದ್ದು ಖಿನ್ನತೆಗೊಳಗಾಗಿದ್ದನಂತೆ. ಮೃತ ಯತಿರಾಜ್ ತಂದೆ, ತಾಯಿ, ತಮ್ಮನನ್ನ ಅಗಲಿದ್ದಾನೆ.
ವನ್ ಸೈಡ್ ಲವ್ ; ಆಕೆಯ ಮಾಡೆಲಿಂಗ್, ಫೋಟೋ ಶೂಟ್ ಬಗ್ಗೆ ವಿರೋಧ, ಹರೆಯದ ಹುಡುಗಿಯ ದುರಂತ ಅಂತ್ಯ !!
Mangalore Kumpala Model Preksha susicde case, accused Yatin Raj who was facing charges of Abetment to Suicide has now committed suicide at his residence. A modeling girl, who was preparing to travel to Bangalore to participate in a photo shoot, was found dead by hanging-in a room at a Ashraya Colony in Kumpala in March 2021.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm