ಬ್ರೇಕಿಂಗ್ ನ್ಯೂಸ್
28-10-20 08:41 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 28: ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ದಿನೇಶ್ ಶೆಟ್ಟಿ ಕೊಟ್ಟಿಂಜ ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ನಡೆದಿದೆ.
ಪರಂಗಿಪೇಟೆ ಜಂಕ್ಷನ್ನಲ್ಲಿ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂರು ಮಂದಿ ಆಗಂತುಕರು ಸ್ಟುಡಿಯೋಗೆ ನುಗ್ಗಿ ದಿನೇಶ್ ಕೊಟ್ಟಿಂಜ ಮೇಲೆ ದಾಳಿ ನಡೆಸಿದ್ದಾರೆ. ತಲವಾರು ದಾಳಿಯಿಂದ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ 7.30ರ ಸುಮಾರಿಗೆ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂವರು ಫೋಟೊ ತೆಗೆಯಲೆಂದು ಆಗಮಿಸಿದ್ದರು. ಅದರಲ್ಲಿ ಒಬ್ಬ ಫೋಟೊ ತೆಗೆಯಲೆಂದು ಒಳಕ್ಕೆ ಬಂದಿದ್ದ. ಈ ವೇಳೆ, ದಿನೇಶ್ ಕ್ಯಾಮರಾ ರೆಡಿ ಮಾಡುತ್ತಿದ್ದಾಗ ಮತ್ತಿಬ್ಬರು ಒಳಗೆ ನುಗ್ಗಿ ದಾಳಿ ನಡೆಸಿದ್ದಾರೆ. ದಿನೇಶ್ ಕೂಡಲೇ ಬೊಬ್ಬೆ ಹೊಡೆದಿದ್ದು ಅಕ್ಕಪಕ್ಕದ ಅಂಗಡಿಗಳ ಜನ ಆಗಮಿಸಿ ದುಷ್ಕರ್ಮಿಗಳ ಮೇಲೆ ಚೇರ್ ನಿಂದ ಹೊಡೆಯಲು ಆರಂಭಿಸಿದ್ದಾರೆ. ದುಷ್ಕರ್ಮಿಗಳು ಓಡಿ ಹೋಗಿದ್ದು ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನೇಶ್, ಅಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ.
ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನೇಶ್ ಶೆಟ್ಟಿ ಕೊಟ್ಟಿಂಜ, ಬಿಜೆಪಿ ಮಂಗಳೂರು ಕ್ಷೇತ್ರ ಸಮಿತಿಯಲ್ಲಿ ಪದಾಧಿಕಾರಿಯಾಗಿದ್ದಾರೆ. ಹೊಸ ದಿಗಂತ ಪತ್ರಿಕೆಗೆ ಅರೆಕಾಲಿಕ ವರದಿಗಾರನಾಗಿಯೂ ಕೆಲಸ ಮಾಡುತ್ತಿದ್ದಾರೆ. ದುಷ್ಕರ್ಮಿಗಳು ಪೂರ್ವ ದ್ವೇಷದಿಂದ ಹಲ್ಲೆ ನಡೆಸಿದ್ದಾರೆಯೇ, ಬೇರೇನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ಗೊತ್ತಾಗಿಲ್ಲ.
In a shocking event, photographer Dinesh Shetty of Trisha Studio in Farangipete was reported to have been stabbed inside his studios by miscreants. The incident happened on Wednesday, October 28.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm