ಬ್ರೇಕಿಂಗ್ ನ್ಯೂಸ್
28-10-20 08:41 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 28: ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ದಿನೇಶ್ ಶೆಟ್ಟಿ ಕೊಟ್ಟಿಂಜ ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ನಡೆದಿದೆ.
ಪರಂಗಿಪೇಟೆ ಜಂಕ್ಷನ್ನಲ್ಲಿ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂರು ಮಂದಿ ಆಗಂತುಕರು ಸ್ಟುಡಿಯೋಗೆ ನುಗ್ಗಿ ದಿನೇಶ್ ಕೊಟ್ಟಿಂಜ ಮೇಲೆ ದಾಳಿ ನಡೆಸಿದ್ದಾರೆ. ತಲವಾರು ದಾಳಿಯಿಂದ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ 7.30ರ ಸುಮಾರಿಗೆ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂವರು ಫೋಟೊ ತೆಗೆಯಲೆಂದು ಆಗಮಿಸಿದ್ದರು. ಅದರಲ್ಲಿ ಒಬ್ಬ ಫೋಟೊ ತೆಗೆಯಲೆಂದು ಒಳಕ್ಕೆ ಬಂದಿದ್ದ. ಈ ವೇಳೆ, ದಿನೇಶ್ ಕ್ಯಾಮರಾ ರೆಡಿ ಮಾಡುತ್ತಿದ್ದಾಗ ಮತ್ತಿಬ್ಬರು ಒಳಗೆ ನುಗ್ಗಿ ದಾಳಿ ನಡೆಸಿದ್ದಾರೆ. ದಿನೇಶ್ ಕೂಡಲೇ ಬೊಬ್ಬೆ ಹೊಡೆದಿದ್ದು ಅಕ್ಕಪಕ್ಕದ ಅಂಗಡಿಗಳ ಜನ ಆಗಮಿಸಿ ದುಷ್ಕರ್ಮಿಗಳ ಮೇಲೆ ಚೇರ್ ನಿಂದ ಹೊಡೆಯಲು ಆರಂಭಿಸಿದ್ದಾರೆ. ದುಷ್ಕರ್ಮಿಗಳು ಓಡಿ ಹೋಗಿದ್ದು ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನೇಶ್, ಅಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ.
ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನೇಶ್ ಶೆಟ್ಟಿ ಕೊಟ್ಟಿಂಜ, ಬಿಜೆಪಿ ಮಂಗಳೂರು ಕ್ಷೇತ್ರ ಸಮಿತಿಯಲ್ಲಿ ಪದಾಧಿಕಾರಿಯಾಗಿದ್ದಾರೆ. ಹೊಸ ದಿಗಂತ ಪತ್ರಿಕೆಗೆ ಅರೆಕಾಲಿಕ ವರದಿಗಾರನಾಗಿಯೂ ಕೆಲಸ ಮಾಡುತ್ತಿದ್ದಾರೆ. ದುಷ್ಕರ್ಮಿಗಳು ಪೂರ್ವ ದ್ವೇಷದಿಂದ ಹಲ್ಲೆ ನಡೆಸಿದ್ದಾರೆಯೇ, ಬೇರೇನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ಗೊತ್ತಾಗಿಲ್ಲ.
In a shocking event, photographer Dinesh Shetty of Trisha Studio in Farangipete was reported to have been stabbed inside his studios by miscreants. The incident happened on Wednesday, October 28.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 12:56 pm
Mangalore Correspondent
Mangalore FIR, Dharmasthala, Criminal Activit...
04-07-25 10:54 pm
Puttur pregnant girl, Ashok Rai: ಯುವತಿ ಹೇಳಿಕೆ...
04-07-25 09:44 pm
Ullal Suicide, Mangalore, Railway track: ಮೊಬೈ...
04-07-25 02:38 pm
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
05-07-25 01:20 pm
Mangalore Correspondent
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm