ಬ್ರೇಕಿಂಗ್ ನ್ಯೂಸ್
28-10-20 10:22 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ವಿರೋಧಿ ಅಭಿಯಾನದ ಅಂಗವಾಗಿ ಹಳೆ ಆರೋಪಿಗಳನ್ನು ಕರೆಸಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪರೇಡ್ ನಡೆಸಲಾಯಿತು.
ಇತ್ತೀಚೆಗೆ ಮಣಿಪಾಲದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ಆರೋಪಿಗಳನ್ನು ಕರೆಸಿ ವಾರ್ನ್ ಮಾಡಲಾಗಿದೆ.
ಬೈಂದೂರು ಠಾಣೆ ವ್ಯಾಪ್ತಿಯ 2, ಕುಂದಾಪುರ ಠಾಣಾ ವ್ಯಾಪ್ತಿಯ 18, ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ 4, ಕೋಟಾ ಠಾಣಾ ವ್ಯಾಪ್ತಿಯ 2, ಉಡುಪಿ ನಗರ ಠಾಣೆಯ 12, ಮಲ್ಪೆ ಠಾಣೆ 5, ಮಣಿಪಾಲ ಠಾಣೆ 16, ಸೈಬರ್ ಠಾಣೆಯ ಇಬ್ಬರು, ಕಾರ್ಕಳ ನಗರ ಠಾಣಾ ವ್ಯಾಪ್ತಿ 2, ಪಡುಬಿದ್ರಿ ಠಾಣಾ ವ್ಯಾಪ್ತಿಯ ೫, ಕಾಪು ಠಾಣಾ ವ್ಯಾಪ್ತಿಯ 3, ಹಿರಿಯಡ್ಕ ಠಾಣಾ ವ್ಯಾಪ್ತಿಯ 1 ಸೇರಿ ಒಟ್ಟು 57 ಮಂದಿ ಪರೇಡ್ ನಲ್ಲಿ ಪಾಲ್ಗೊಂಡಿದ್ದರು.

ಆರೋಪಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಪಿ ವಿಷ್ಣುವರ್ಧನ್, ಸಮಾಜದ್ರೋಹಿ ಚಟುವಟಿಕೆಗಳಲ್ಲಿ ಮುಂದುವರೆದಿದ್ದು ಕಂಡುಬಂದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
ಮಾದಕ ದ್ರವ್ಯ ಸಾಗಾಟ / ಮಾರಾಟಗಾರರ ಮಾಹಿತಿ ನೀಡಿದಲ್ಲಿ ವಿವರವನ್ನು ಗುಪ್ತವಾಗಿ ಇಡಲಾಗುವುದು. ಈ ಪಿಡುಗನ್ನು ನಿವಾರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ಎಎಸ್ಪಿ ಕುಮಾರಚಂದ್ರ, ಸಹಾಯಕಎಸ್ಪಿ ಟಿ.ಆರ್.ಜೈಶಂಕರ್, ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ, ಉಡುಪಿ ವೃತ್ತ ನಿರೀಕ್ಷಕರಾದ ಮಂಜುನಾಥ ಹಾಗೂ ಜಿಲ್ಲೆಯ ಇತರ ಠಾಣೆಗಳ ಪೊಲೀಸ್ ಉಪನಿರೀಕ್ಷಕರು ಭಾಗವಹಿಸಿದ್ದರು.
A parade of accused in the ganja selling and transportation cases was held at the Chandu Maidan, Udupi on Wednesday, October 28.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am