ಬ್ರೇಕಿಂಗ್ ನ್ಯೂಸ್
29-10-20 08:48 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 29: ಬಿಜೆಪಿ ಮುಖಂಡ ಹಾಗು ಫೋಟೋಗ್ರಾಫರ್ ದಿನೇಶ್ ಶೆಟ್ಟಿ ಕೊಟ್ಟಿಂಜ ಎಂಬವರ ಮೇಲಿನ ದಾಳಿ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೇವಲ 3 ಗಂಟೆ ಅವಧಿಯಲ್ಲಿ ಆರೋಪಿಗಳನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.
ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್(19), ಅಬ್ದುಲ್ ರೆಹಮಾನ್(22), ಮತ್ತು ಮಹಮ್ಮದ್ ಸೈಪುದ್ದೀನ್(22) ಬಂಧಿತರಾಗಿದ್ದು ಪೊಲೀಸರ ವಿಚಾರಣೆಯಲ್ಲಿ ತಮ್ಮ ಕೃತ್ಯದ ಉದ್ದೇಶವನ್ನು ಬಾಯ್ಬಿಟ್ಟಿದ್ದಾರೆ. ಬಂಟ್ವಾಳ ಪಿಎಸ್ಐ ಪ್ರಸನ್ನ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದು ಇನ್ನೊಬ್ಬ ಆರೋಪಿ ಸವಾದ್ ಬಂಧನಕ್ಕೆ ಬಲೆ ಬೀಸಿದೆ.
ಬುಧವಾರ (ನಿನ್ನೆ) ಸಂಜೆ ಸುಮಾರು 7:15ರ ಹೊತ್ತಿಗೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ದಿನೇಶ್ ತಮ್ಮ ಪೋಟೊ ಸ್ಟುಡಿಯೋದಲ್ಲಿದ್ದಾಗ ನಾಲ್ವರು ಯುವಕರು ಫೋಟೊ ತೆಗೆಸುವ ನೆಪದಲ್ಲಿ ಬಂದಿದ್ದರು. ಈ ಸಂದರ್ಭ ದಿನೇಶ್ ಅವರ ಮೇಲೆ ತಲವಾರಿನಿಂದ ದಾಳಿ ನಡೆಸಲಾಗಿತ್ತು. ಈ ವೇಳೆ ಅಲ್ಲಿದ್ದ ಶೇಖರ ಪೂಜಾರಿ ಎಂಬವರು ಹಲ್ಲೆ ತಪ್ಪಿಸಲು ಆರೋಪಿಗಳಿಗೆ ಜೋರಾಗಿ ಅಲ್ಲೇ ಇದ್ದ ಚೇರ್ ನಿಂದ ಹೊಡೆದಿದ್ದು ಅವರ ಕೈಗೆ ಗಾಯವಾಗಿತ್ತು. ಬಳಿಕ ಅಕ್ಕಪಕ್ಕದ ವ್ಯಾಪಾರಸ್ಥರು ಸೇರಿದಾಗ ಆರೋಪಿಗಳು ಪರಾರಿಯಾಗಿದ್ದರು.
ಕೊಲ್ಲಲು ಬಂದಿದ್ದ ದುಷ್ಕರ್ಮಿಗಳು !
ಇತ್ತೀಚೆಗೆ ಪರಂಗಿಪೇಟೆ ಬಳಿಯ ಕುಂಪನಮಜಲು ಎಂಬಲ್ಲಿ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿತ್ತು. ಈ ಪ್ರಕರಣದಲ್ಲಿ ದಿನೇಶ್, ಹೆಣ್ಣು ಮಗುವಿನ ಕಡೆಯವರಿಗೆ ಬೆಂಬಲ ನೀಡಿದ್ದೇ ಈ ದಾಳಿಗೆ ಕಾರಣ ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ನಮ್ಮ ವಿಷಯಕ್ಕೆ ನೀನ್ಯಾಕೆ ಬಂದಿದ್ದೀಯಾ.. ಅಂತ ಪ್ರಶ್ನಿಸಿ ಫೋಟೊ ತೆಗೆಸುವ ನೆಪದಲ್ಲಿ ಬಂದಿದ್ದ ಯುವಕರು ತಲವಾರು ದಾಳಿ ನಡೆಸಿದ್ದಾರೆ.
ಘಟನೆಯ ದ್ವೇಷದಿಂದ ದಿನೇಶ್ ಅವರನ್ನು ಕೊಲ್ಲುವ ಉದ್ದೇಶದಿಂದ ತಲವಾರು ದಾಳಿ ನಡೆಸಲಾಗಿತ್ತು. ತಲವಾರು ದಾಳಿಯಿಂದಾಗಿ ದಿನೇಶ್ ಅವರ ತಲೆ, ಬಲ ಕೈಗೆ ಹಾಗೂ ಎಡ ಕಿಬ್ಬೊಟ್ಟೆಗೆ ತೀವ್ರ ಗಾಯವಾಗಿದ್ದು, ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಿನೇಶ್ ಬಿಜೆಪಿ ಪರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನಾಗಿದ್ದು ಪುದು ಮಹಾಶಕ್ತಿ ಕೇಂದ್ರದ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರಾಗಿದ್ದಾರೆ.
An attempt to kill photographer Dinesh, owner of Trisha Studio at Farangipet, was made by a gang of four youngsters. Three of them have been held by the police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am