ಬ್ರೇಕಿಂಗ್ ನ್ಯೂಸ್
16-05-23 06:43 pm Mangalore Correspondent ಕರಾವಳಿ
ಪುತ್ತೂರು, ಮೇ 16: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಏಳು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಏಳು ಮಂದಿಯ ಪೈಕಿ ನಾಲ್ವರು ಕಟ್ಟರ್ ಬಿಜೆಪಿ ಕಾರ್ಯಕರ್ತರೇ ಆಗಿದ್ದು ಮೊನ್ನೆ ಬಿಜೆಪಿ ಪರವಾಗಿಯೇ ಚುನಾವಣೆಗೆ ದುಡಿದಿದ್ದರು. ಮೂವರು ಕಾರ್ಯಕರ್ತರು ಅರುಣ್ ಪುತ್ತಿಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ಚುನಾವಣೆ ಫಲಿತಾಂಶದಲ್ಲಿ ಅರುಣ್ ಪುತ್ತಿಲ ಗೆಲುವಿನ ಹತ್ತಿರ ಹೋಗಿದ್ದ ಬಳಿಕ ಪುತ್ತೂರಿನ ಬಿಜೆಪಿ ಕಾರ್ಯಕರ್ತರೆಲ್ಲ ಪುತ್ತಿಲ ಪರ ನಿಂತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಿದ್ದ ಕಾರ್ಯಕರ್ತರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಪುತ್ತೂರಿನಲ್ಲಿ ಹೀನಾಯ ಸೋಲಿಗೆ ಇವರಿಬ್ಬರೇ ಕಾರಣ ಎಂದು ಸಿಟ್ಟಿನಲ್ಲಿ ಕಾರ್ಯಕರ್ತರೇ ಸೇರಿಕೊಂಡು ಭಾನುವಾರ ರಾತ್ರಿ ಬ್ಯಾನರ್ ಹಾಕಿದ್ದರು.
ಬ್ಯಾನರ್ ಫೋಟೋ ವೈರಲ್ ಆಗಿ ಬಿಜೆಪಿ ನಾಯಕರಿಗೆ ಇರಿಸು ಮುರಿಸು ಆಗುತ್ತಲೇ ಪೊಲೀಸರಿಗೆ ಒತ್ತಡ ಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ, ಬೆಂಡೆತ್ತಬೇಕು ಎಂದು ಸ್ಥಳೀಯ ನಳಿನ್ ಪರ ಇರುವ ಬಿಜೆಪಿ ಪುಢಾರಿಗಳು ಪೊಲೀಸರಿಗೆ ಸೂಚನೆ ನೀಡಿದ್ದರು. ಪ್ರಮುಖ ಒಬ್ಬ ಆರೋಪಿಯನ್ನು ಬಿಟ್ಟು ಏಳು ಮಂದಿಯನ್ನು ಬಂಧಿಸಿದ ಪೊಲೀಸರು ಠಾಣೆಯಲ್ಲಿ ಕೂಡಿಹಾಕಿ, ಬೆತ್ತ ಪುಡಿ ಮಾಡಿದ್ದಾರೆಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ವಿಷಯ ತಿಳಿದ ಅರುಣ್ ಪುತ್ತಿಲ ಸೋಮವಾರ ರಾತ್ರಿ 1 ಗಂಟೆ ವೇಳೆಗೆ ಠಾಣೆಗೆ ತೆರಳಿ ಏಳು ಮಂದಿಯನ್ನೂ ಬಿಡುಗಡೆ ಮಾಡಿಸಿದ್ದಾರೆ. ಆರೋಪಿಗಳನ್ನು ಮುಚ್ಚಳಿಕೆ ಬರೆಸಿ, ಪೊಲೀಸರು ಕಳಿಸಿಕೊಟ್ಟಿದ್ದಾರೆ. ಈ ಘಟನೆ ಪುತ್ತೂರಿನಲ್ಲಿ ಸಂಘಟನೆಯೊಳಗೆ ಮತ್ತಷ್ಟು ಬಿರುಕು ಮೂಡಲು ಕಾರಣವಾಗಿದೆ.
Puttur Poster Sadananda Gowda, BJP Nalin kateel garlanded with footwear, 7 arrested, Arun Puthila gets them released from Police station. The writing on the banner says, “Heartfelt obituary to both of you
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm