ಬ್ರೇಕಿಂಗ್ ನ್ಯೂಸ್
16-05-23 06:43 pm Mangalore Correspondent ಕರಾವಳಿ
ಪುತ್ತೂರು, ಮೇ 16: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಏಳು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಏಳು ಮಂದಿಯ ಪೈಕಿ ನಾಲ್ವರು ಕಟ್ಟರ್ ಬಿಜೆಪಿ ಕಾರ್ಯಕರ್ತರೇ ಆಗಿದ್ದು ಮೊನ್ನೆ ಬಿಜೆಪಿ ಪರವಾಗಿಯೇ ಚುನಾವಣೆಗೆ ದುಡಿದಿದ್ದರು. ಮೂವರು ಕಾರ್ಯಕರ್ತರು ಅರುಣ್ ಪುತ್ತಿಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ಚುನಾವಣೆ ಫಲಿತಾಂಶದಲ್ಲಿ ಅರುಣ್ ಪುತ್ತಿಲ ಗೆಲುವಿನ ಹತ್ತಿರ ಹೋಗಿದ್ದ ಬಳಿಕ ಪುತ್ತೂರಿನ ಬಿಜೆಪಿ ಕಾರ್ಯಕರ್ತರೆಲ್ಲ ಪುತ್ತಿಲ ಪರ ನಿಂತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಿದ್ದ ಕಾರ್ಯಕರ್ತರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಪುತ್ತೂರಿನಲ್ಲಿ ಹೀನಾಯ ಸೋಲಿಗೆ ಇವರಿಬ್ಬರೇ ಕಾರಣ ಎಂದು ಸಿಟ್ಟಿನಲ್ಲಿ ಕಾರ್ಯಕರ್ತರೇ ಸೇರಿಕೊಂಡು ಭಾನುವಾರ ರಾತ್ರಿ ಬ್ಯಾನರ್ ಹಾಕಿದ್ದರು.
ಬ್ಯಾನರ್ ಫೋಟೋ ವೈರಲ್ ಆಗಿ ಬಿಜೆಪಿ ನಾಯಕರಿಗೆ ಇರಿಸು ಮುರಿಸು ಆಗುತ್ತಲೇ ಪೊಲೀಸರಿಗೆ ಒತ್ತಡ ಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ, ಬೆಂಡೆತ್ತಬೇಕು ಎಂದು ಸ್ಥಳೀಯ ನಳಿನ್ ಪರ ಇರುವ ಬಿಜೆಪಿ ಪುಢಾರಿಗಳು ಪೊಲೀಸರಿಗೆ ಸೂಚನೆ ನೀಡಿದ್ದರು. ಪ್ರಮುಖ ಒಬ್ಬ ಆರೋಪಿಯನ್ನು ಬಿಟ್ಟು ಏಳು ಮಂದಿಯನ್ನು ಬಂಧಿಸಿದ ಪೊಲೀಸರು ಠಾಣೆಯಲ್ಲಿ ಕೂಡಿಹಾಕಿ, ಬೆತ್ತ ಪುಡಿ ಮಾಡಿದ್ದಾರೆಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ವಿಷಯ ತಿಳಿದ ಅರುಣ್ ಪುತ್ತಿಲ ಸೋಮವಾರ ರಾತ್ರಿ 1 ಗಂಟೆ ವೇಳೆಗೆ ಠಾಣೆಗೆ ತೆರಳಿ ಏಳು ಮಂದಿಯನ್ನೂ ಬಿಡುಗಡೆ ಮಾಡಿಸಿದ್ದಾರೆ. ಆರೋಪಿಗಳನ್ನು ಮುಚ್ಚಳಿಕೆ ಬರೆಸಿ, ಪೊಲೀಸರು ಕಳಿಸಿಕೊಟ್ಟಿದ್ದಾರೆ. ಈ ಘಟನೆ ಪುತ್ತೂರಿನಲ್ಲಿ ಸಂಘಟನೆಯೊಳಗೆ ಮತ್ತಷ್ಟು ಬಿರುಕು ಮೂಡಲು ಕಾರಣವಾಗಿದೆ.
Puttur Poster Sadananda Gowda, BJP Nalin kateel garlanded with footwear, 7 arrested, Arun Puthila gets them released from Police station. The writing on the banner says, “Heartfelt obituary to both of you
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 10:52 pm
HK News Desk
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm