ಬ್ರೇಕಿಂಗ್ ನ್ಯೂಸ್
16-05-23 06:43 pm Mangalore Correspondent ಕರಾವಳಿ
ಪುತ್ತೂರು, ಮೇ 16: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಏಳು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಏಳು ಮಂದಿಯ ಪೈಕಿ ನಾಲ್ವರು ಕಟ್ಟರ್ ಬಿಜೆಪಿ ಕಾರ್ಯಕರ್ತರೇ ಆಗಿದ್ದು ಮೊನ್ನೆ ಬಿಜೆಪಿ ಪರವಾಗಿಯೇ ಚುನಾವಣೆಗೆ ದುಡಿದಿದ್ದರು. ಮೂವರು ಕಾರ್ಯಕರ್ತರು ಅರುಣ್ ಪುತ್ತಿಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ಚುನಾವಣೆ ಫಲಿತಾಂಶದಲ್ಲಿ ಅರುಣ್ ಪುತ್ತಿಲ ಗೆಲುವಿನ ಹತ್ತಿರ ಹೋಗಿದ್ದ ಬಳಿಕ ಪುತ್ತೂರಿನ ಬಿಜೆಪಿ ಕಾರ್ಯಕರ್ತರೆಲ್ಲ ಪುತ್ತಿಲ ಪರ ನಿಂತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಿದ್ದ ಕಾರ್ಯಕರ್ತರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಪುತ್ತೂರಿನಲ್ಲಿ ಹೀನಾಯ ಸೋಲಿಗೆ ಇವರಿಬ್ಬರೇ ಕಾರಣ ಎಂದು ಸಿಟ್ಟಿನಲ್ಲಿ ಕಾರ್ಯಕರ್ತರೇ ಸೇರಿಕೊಂಡು ಭಾನುವಾರ ರಾತ್ರಿ ಬ್ಯಾನರ್ ಹಾಕಿದ್ದರು.
ಬ್ಯಾನರ್ ಫೋಟೋ ವೈರಲ್ ಆಗಿ ಬಿಜೆಪಿ ನಾಯಕರಿಗೆ ಇರಿಸು ಮುರಿಸು ಆಗುತ್ತಲೇ ಪೊಲೀಸರಿಗೆ ಒತ್ತಡ ಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ, ಬೆಂಡೆತ್ತಬೇಕು ಎಂದು ಸ್ಥಳೀಯ ನಳಿನ್ ಪರ ಇರುವ ಬಿಜೆಪಿ ಪುಢಾರಿಗಳು ಪೊಲೀಸರಿಗೆ ಸೂಚನೆ ನೀಡಿದ್ದರು. ಪ್ರಮುಖ ಒಬ್ಬ ಆರೋಪಿಯನ್ನು ಬಿಟ್ಟು ಏಳು ಮಂದಿಯನ್ನು ಬಂಧಿಸಿದ ಪೊಲೀಸರು ಠಾಣೆಯಲ್ಲಿ ಕೂಡಿಹಾಕಿ, ಬೆತ್ತ ಪುಡಿ ಮಾಡಿದ್ದಾರೆಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ವಿಷಯ ತಿಳಿದ ಅರುಣ್ ಪುತ್ತಿಲ ಸೋಮವಾರ ರಾತ್ರಿ 1 ಗಂಟೆ ವೇಳೆಗೆ ಠಾಣೆಗೆ ತೆರಳಿ ಏಳು ಮಂದಿಯನ್ನೂ ಬಿಡುಗಡೆ ಮಾಡಿಸಿದ್ದಾರೆ. ಆರೋಪಿಗಳನ್ನು ಮುಚ್ಚಳಿಕೆ ಬರೆಸಿ, ಪೊಲೀಸರು ಕಳಿಸಿಕೊಟ್ಟಿದ್ದಾರೆ. ಈ ಘಟನೆ ಪುತ್ತೂರಿನಲ್ಲಿ ಸಂಘಟನೆಯೊಳಗೆ ಮತ್ತಷ್ಟು ಬಿರುಕು ಮೂಡಲು ಕಾರಣವಾಗಿದೆ.
Puttur Poster Sadananda Gowda, BJP Nalin kateel garlanded with footwear, 7 arrested, Arun Puthila gets them released from Police station. The writing on the banner says, “Heartfelt obituary to both of you
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm