ಬ್ರೇಕಿಂಗ್ ನ್ಯೂಸ್
21-05-23 04:02 pm Udupi Correspondent ಕರಾವಳಿ
ಉಡುಪಿ, ಮೇ 20 : ಜಿಲ್ಲೆಯ ಹಿರಿಯ ರಾಜಕಾರಣಿ, ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಯು.ಆರ್. ಸಭಾಪತಿ(71) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ರಾಷ್ಟ್ರೀಯ ಜನತಾದಳ ಬಳಿಕ, ಜಾತ್ಯತೀತ ಜನತಾದಳದಲ್ಲಿ ಗುರುತಿಸಿಕೊಂಡಿದ್ದ ಯು.ಆರ್. ಸಭಾಪತಿ 80-90ರ ದಶಕದಲ್ಲಿ ಕರಾವಳಿ ಭಾಗದ ಪ್ರಭಾವಿ ನಾಯಕರಲ್ಲೊಬ್ಬರಾಗಿದ್ದರು.
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಅನುಯಾಯಿಯಾಗಿದ್ದ ಯು.ಆರ್. ಸಭಾಪತಿ ಅವರು, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಕೆಸಿಪಿಯಿಂದ ಶಾಸಕರಾಗಿದ್ದ ಅವರು, 1999ರಲ್ಲಿ ಕಾಂಗ್ರೆಸ್ನಿಂದ ಶಾಸಕರಾಗಿ ಚುನಾಯಿತರಾಗಿದ್ದರು. 1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್ತಿನ ಉದ್ಯಾವರ ಕ್ಷೇತ್ರದ ಸದಸ್ಯರಾಗಿದ್ದ ಸಭಾಪತಿ, ಪರಿಷತ್ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
1989ರಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದ ಅವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು. ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ ವಿರುದ್ಧ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. 1994ರಲ್ಲಿ ಎಸ್. ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿಯಿಂದಲೇ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದರು. ಬಳಿಕ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, 1999ರಲ್ಲಿ ಶಾಸಕರಾಗಿ ಚುನಾಯಿತರಾದ್ದರು. 2004ರ ಚುನಾವಣೆಯಲ್ಲಿ ಇವರು ಬಿಜೆಪಿಯ ರಘುಪತಿ ಭಟ್ ವಿರುದ್ಧ ಸೋಲು ಕಂಡಿದ್ದರು. ಆನಂತರ ರಾಜಕೀಯದಲ್ಲಿ ನೇಪಥ್ಯಕ್ಕೆ ಸರಿದಿದ್ದರು.
U R Sabhapathi, a prominent Congress leader and former MLA, passed away after a brief illness here on Sunday, May 21. U R Sabhapathi had served as the MLA for the Udupi constituency in 1994 and 1999, leaving a lasting impact on the region.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm