ಬ್ರೇಕಿಂಗ್ ನ್ಯೂಸ್
21-05-23 08:41 pm Mangalore Correspondent ಕರಾವಳಿ
ಮಂಗಳೂರು, ಮೇ 21 : ಮಂಗಳೂರು ಮೂಲದ 21 ವರ್ಷದ ಮುಸ್ಲಿಂ ಯುವತಿಯೊಬ್ಬಳು ವಿಮಾನ ಚಲಾಯಿಸುವ ಪೈಲಟ್ ಹುದ್ದೆಗೇರಿ ಹುಬ್ಬೇರಿಸಿದ್ದಾಳೆ. ಪಾಂಡೇಶ್ವರ ನಿವಾಸಿ ಹನಿಯಾ ಹನೀಫ್ ಈ ಸಾಧನೆ ಮಾಡಿದ ಯುವತಿ.
ಪಾಂಡೇಶ್ವರದ ಮಹಮ್ಮದ್ ಹನೀಫ್ ಮತ್ತು ನಜಿಯಾ ದಂಪತಿ ಪುತ್ರಿಯಾಗಿರುವ ಹನಿಯಾ ಕಮರ್ಶಿಯಲ್ ಪೈಲಟ್ ಲೈಸನ್ಸ್ ಪಡೆದಿದ್ದಾರೆ. ಹನಿಯಾ ಸಣ್ಣದಿರುವಾಗ ದುಬೈನಲ್ಲಿದ್ದು ಒಂಬತ್ತನೇ ಕ್ಲಾಸ್ ವರೆಗೆ ಅಲ್ಲಿನ ಇಂಡಿಯನ್ ಹೈಸ್ಕೂಲ್ ನಲ್ಲಿ ಶಿಕ್ಷಣ ಪಡೆದಿದ್ದಳು. ಎಸ್ಸೆಸ್ಸೆಲ್ಸಿ ಶಿಕ್ಷಣವನ್ನು ಮಂಗಳೂರಿನ ಬಿಜೈನ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನಲ್ಲಿ ಪೂರೈಸಿದ್ದಳು. ಆನಂತರ, ಮಹೇಶ್ ಪಿಯು ಕಾಲೇಜಿನಲ್ಲಿ ಪಿಯು ಶಿಕ್ಷಣ ಪೂರೈಸಿದ್ದಳು.
ಸಣ್ಣವಳಿದ್ದಾಗಿನಿಂದಲು ದುಬೈಗೆ ವಿಮಾನದಲ್ಲಿ ಹೋಗಿ ಬರುತ್ತಿದ್ದರಿಂದ ತಾನೂ ವಿಮಾನ ಚಲಾಯಿಸಬೇಕು, ಪೈಲಟ್ ಆಗಬೇಕೆಂಬ ಕನಸು ಕಂಡಿದ್ದಳು. ಹನಿಯಾಳ ಬಯಕೆಗೆ ಹೆತ್ತವರು ಸ್ಪಂದಿಸಿದ್ದು ಪೈಲಟ್ ಕಲಿಯುವುದಕ್ಕಾಗಿ ಮೈಸೂರಿನ ಓರಿಯಂಟ್ ಫ್ಲೈಟ್ ಏವಿಯೇಶನ್ ಅಕಾಡೆಮಿಗೆ ಸೇರಿಸಿದ್ದರು. ಪಿಯುಸಿ ಬಳಿಕ ಅಲ್ಲಿ ಮೂರೂವರೆ ವರ್ಷಗಳ ಕಾಲ ಪೈಲಟ್ ತರಬೇತಿ ಪಡೆದಿದ್ದು, ಇತ್ತೀಚೆಗೆ ಕಮರ್ಶಿಯಲ್ ಪೈಲಟ್ ಲೈಸನ್ಸ್ ಪಡೆದಿದ್ದಾರೆ. ಸಣ್ಣ ವಯಸ್ಸಿನಲ್ಲೇ 200 ಗಂಟೆಗಳ ವಿಮಾನ ಚಾಲನೆ ಮಾಡಿ, ಈ ಸಾಧನೆ ಮಾಡಿದ ಮೊದಲ ಮಹಿಳಾ ಕ್ಯಾಪ್ಟನ್ ಎಂಬ ಹಿರಿಮೆಗೆ ಪಾತ್ರವಾಗಿದ್ದಾರೆ.
ಸಣ್ಣದಿರುವಾಗಲೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದುದರಿಂದ ಪೈಲಟ್ ಆಗಬೇಕೆಂಬ ಕನಸು ಕಂಡಿದ್ದೆ. ಪೈಲಟ್ ಆಗುವುದು ನನಗೆ ಸುಲಭದ ದಾರಿಯಾಗಿರಲಿಲ್ಲ. ಮಹಿಳೆಯರನ್ನು ಈ ವೃತ್ತಿಗೆ ಇಳಿಸಲು ಸಾಮಾನ್ಯವಾಗಿ ಹೆತ್ತವರು ಬಿಡುವುದಿಲ್ಲ. ಆದರೆ ನನಗೆ ಹೆತ್ತವರೇ ಪ್ರೋತ್ಸಾಹಿಸಿ, ಅವಕಾಶ ಕೊಟ್ಟರು. ಆಮೂಲಕ ಕಮರ್ಶಿಯಲ್ ಪೈಲಟ್ ಆಗುವಂತಾಯಿತು ಎಂದು ಹನಿಯಾ ಹನೀಫ್ ಹೇಳುತ್ತಾರೆ. ಆಕೆಯ ತಾಯಿ ನಜಿಯಾ ಕೂಡ ಮಗಳು ಪೈಲಟ್ ಆಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಸಣ್ಣ ಹುಡುಗಿಯಾಗಿದ್ದಾಗಲೇ ಪೈಲಟ್ ಆಗುತ್ತೇನೆಂದು ಹೇಳಿಕೊಂಡಿದ್ದಳು. ಆಕೆಯ ಕನಸು ಈಡೇರಿಸಲು ನಾವು ಬೆಂಬಲ ನೀಡಿದ್ದೆವು. ಈಗ ಮಗಳು ವಿಮಾನ ಚಲಾಯಿಸುವುದನ್ನು ನೋಡಿ ತುಂಬ ಸಂತಸವಾಗಿದೆ ಎಂದು ಹೇಳಿದ್ದಾರೆ.
Haniya Haneef, a resident of Pandeshwar in the city, has brought immense pride to the coastal district by becoming a pilot at the age of 21. Haniya Haneef, the daughter of Mohammed Hanif and Naziya, residents of Pandeshwar, has obtained an authorized commercial pilot license.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm