ಬ್ರೇಕಿಂಗ್ ನ್ಯೂಸ್
22-05-23 07:03 pm Mangalore Correspondent ಕರಾವಳಿ
ಮಂಗಳೂರು, ಮೇ 22: ಉಳ್ಳಾಲ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.
ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ ಖಚಿತ ಮಾಹಿತಿಗಳನ್ನು ಹೊಂದಿದ್ದ ಎಸಿಪಿ ಧನ್ಯಾ ನಾಯಕ್ ತಲಪಾಡಿ ಗಡಿಭಾಗದ ತಚ್ಚಣಿ ಎಂಬಲ್ಲಿಗೆ ದಾಳಿ ನಡೆಸಿದ್ದರು.
ದಾಳಿ ವೇಳೆ, ಪ್ರಮುಖ ಆರೋಪಿಯಾಗಿದ್ದ ತಲಪಾಡಿ ಗ್ರಾಪಂ ಸದಸ್ಯ ಪರಾರಿಯಾಗಿದ್ದ. ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ಬಳಿಕ ಆರೋಪಿಗಳನ್ನು ಬಂಧಿಸಿದ್ದರು. ಆದರೆ ಈ ವೇಳೆ, ಕಾನ್ಸ್ ಟೇಬಲ್ ವಾಸುದೇವ ಆರೋಪಿಗಳಿಗೆ ಮಾಹಿತಿ ನೀಡಿದ್ದ. ಮತ್ತು ಅವರೊಂದಿಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಎಸಿಪಿ ನೇರವಾಗಿ ಪೊಲೀಸ್ ಕಮಿಷನರಿಗೆ ವರದಿ ಕೊಟ್ಟಿದ್ದರು. ಇಲಾಖಾ ತನಿಖೆ ಬಾಕಿಯಿರಿಸಿ ಪೊಲೀಸ್ ಕಮಿಷನರ್ ವಾಸುದೇವ ಅವರನ್ನು ಅಮಾನತು ಮಾಡಿದ್ದಾರೆ. ಪ್ರತಿ ಠಾಣೆಯ ವ್ಯಾಪ್ತಿಯಲ್ಲೂ ದಿನವಹಿ ಆಗುಹೋಗುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಠಾಣಾಧಿಕಾರಿಗಳಿಗೆ ವರದಿ ಕೊಡಲು ಒಬ್ಬರು ಅಥವಾ ಇಬ್ಬರು ಸಿಬಂದಿ ಇರುತ್ತಾರೆ. ಠಾಣೆಯ ವ್ಯಾಪ್ತಿಯಲ್ಲಿ ಏನೇ ಕಿತಾಪತಿ ಆದರೂ, ಎಡವಟ್ಟು ನಡೆದರೂ ಅದಕ್ಕೆ ಅದೇ ಸಿಬಂದಿಯನ್ನು ಹೊಣೆ ಮಾಡಲಾಗುತ್ತದೆ.
Mangalore Illegal gambling at Talapady, Ullal police constable Vasudev suspended by Police commissioner Kuldeep Kumar Jain for showing negligence in duty. Recently a illegal gambling centre lead by a panchyath member was raided by Ullal Acp.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am